ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಗೃಹಲಕ್ಷ್ಮಿ’ಗೆ ಚಾಲನೆ: ಇದೊಂದು ಐತಿಹಾಸಿಕ‌ ದಿನ ಎಂದು ಬಣ್ಣಿಸಿದ ಸಿದ್ದರಾಮಯ್ಯ

Published 30 ಆಗಸ್ಟ್ 2023, 5:14 IST
Last Updated 30 ಆಗಸ್ಟ್ 2023, 5:14 IST
ಅಕ್ಷರ ಗಾತ್ರ

ಮೈಸೂರು: ವೈಯಕ್ತಿಕ ಆಸೆ, ಆಕಾಂಕ್ಷೆ, ಅವಶ್ಯಕತೆಗಳನ್ನು ತ್ಯಾಗ ಮಾಡಿ, ಕುಟುಂಬಕ್ಕಾಗಿ ತಮ್ಮ ಬದುಕನ್ನೇ ಸಮರ್ಪಿಸಿಕೊಂಡಿರುವ ನಾಡಿನ ಕೋಟ್ಯಂತರ ತಾಯಂದಿರು ಇಂದು ನಮ್ಮ 'ಗೃಹಲಕ್ಷ್ಮಿ' ಯೋಜನೆಯಿಂದ ಸ್ವತಂತ್ರ, ಸ್ವಾವಲಂಬಿ ಬದುಕಿಗೆ ಪಾದಾರ್ಪಣೆ‌ ಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ನಮ್ಮ ಸರ್ಕಾರ ರಾಜ್ಯದ ಪ್ರತಿಯೊಬ್ಬ ಮನೆ ಯಜಮಾನಿಯ ಬ್ಯಾಂಕ್ ಖಾತೆಗೆ ₹2000 ನೇರವಾಗಿ ವರ್ಗಾವಣೆ ಮಾಡಿ ನುಡಿದಂತೆ ನಡೆಯಲಿದೆ. ಇದೊಂದು ಐತಿಹಾಸಿಕ ದಿನ' ಎಂದಿದ್ದಾರೆ.

'ಕಾರ್ಯಕ್ರಮದ ಚಾಲನೆಗೆ ಇನ್ನೇನು ಕೆಲವೇ ನಿಮಿಷಗಳು ಉಳಿದಿರುವ ಈ ಹೊತ್ತಿನಲ್ಲಿ ನಾಡಿನ ತಾಯಂದಿರ ಮುಖದಲ್ಲಿ ಮೂಡುವ ನೆಮ್ಮದಿಯ ನಗೆ ಕಾಣಲು ಉತ್ಸುಕನಾಗಿದ್ದೇನೆ. ಮಹಿಳೆಯರ ಸಬಲೀಕರಣದಿಂದ ಬಲಿಷ್ಠ ಸಮಾಜ ನಿರ್ಮಾಣ. ಮಹಿಳಾ ಸಮಾನತೆಯಿಂದ ಸಮ‌ ಸಮಾಜ ಸ್ಥಾಪನೆ' ಎಂದು ಬರೆದುಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT