ಬೆಂಗಳೂರು: ‘ಬಾದಾಮಿ ಶಾಸಕ ಸಿದ್ದರಾಮಯ್ಯ ಅವರ ಕ್ಷೇತ್ರದ ಅಭಿವೃದ್ಧಿಗೆ ₹224 ಕೋಟಿ ಬಿಡುಗಡೆ ಮಾಡಲಾಗಿದೆ. ಆದರೆ, ನನ್ನ ಕ್ಷೇತ್ರಕ್ಕೆ ಕುಡಿಯುವ ನೀರಿಗೂ ಅನುದಾನ ನೀಡಿಲ್ಲ’ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
‘ಈ ವಿಷಯವನ್ನು ಸಚಿವ ಸಂಪುಟದ ಸಭೆಯಲ್ಲಿ ಪ್ರಸ್ತಾಪಿಸಿದ್ದೇನೆ’ ಎಂದು ತಿಳಿಸಿದರು.