<p><strong>ನವದೆಹಲಿ:</strong> ಕರ್ನಾಟಕದಲ್ಲಿ 2024-25ನೇ ಆರ್ಥಿಕ ವರ್ಷದಲ್ಲಿ 1,254 ಪ್ರಕರಣಗಳಲ್ಲಿ ₹39577 ಕೋಟಿ ಮೊತ್ತದ ಜಿಎಸ್ಟಿ ವಂಚನೆ ಪತ್ತೆ ಹಚ್ಚಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದರು. </p>.<p>ಲೋಕಸಭೆಯಲ್ಲಿ ಸೋಮವಾರ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸಂಸದರಾದ ಡಾ.ಕೆ. ಸುಧಾಕರ್ ಹಾಗೂ ತೇಜಸ್ವಿ ಸೂರ್ಯ ಪ್ರಶ್ನೆಗೆ ಉತ್ತರಿಸಿದ ಅವರು, ʼಈ ಪ್ರಕರಣಗಳಲ್ಲಿ ಒಂಬತ್ತು ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಕರಣ ದಾಖಲಿಸಿದ ಬಳಿಕ ₹1623 ಕೋಟಿ ಮೊತ್ತವನ್ನು ಸ್ವಯಂಪ್ರೇರಿತವಾಗಿ ಪಾವತಿ ಆಗಿದೆʼ ಎಂದರು. ಹಿಂದಿನ ವರ್ಷಕ್ಕೆ ಹೋಲಿಸಿದರೆ ಜಿಎಸ್ಟಿ ವಂಚನೆ ಪ್ರಮಾಣ ಐದು ಪಟ್ಟು ಹೆಚ್ಚಾಗಿದೆ. </p>.<h2>ಸಣ್ಣ ವರ್ತಕರಿಗಿಲ್ಲ ನೋಟಿಸ್: </h2><p>ಯುಪಿಐ ವಹಿವಾಟುಗಳ ಆಧಾರದಲ್ಲಿ ಕರ್ನಾಟಕ ಸೇರಿದಂತೆ ದೇಶದ ಸಣ್ಣ ವರ್ತಕರು ಮತ್ತು ಬೀದಿಬದಿ ವ್ಯಾಪಾರಿಗಳಿಗೆ ಕೇಂದ್ರ ಜಿಎಸ್ಟಿ ಅಧಿಕಾರಿಗಳು ಯಾವುದೇ ನೋಟಿಸ್ ನೀಡಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. </p>.<p>ಯುಪಿಐ ಮೂಲಕ ವಾರ್ಷಿಕ ₹40 ಲಕ್ಷಕ್ಕಿಂತ ಹೆಚ್ಚಿನ ವಹಿವಾಟು ನಡೆಸಿದ್ದ ಬೇಕರಿ, ಹೋಟೆಲ್, ಬೀಡಾ ಅಂಗಡಿ ಮತ್ತು ಟೀ ಅಂಗಡಿ ಮಾಲೀಕರಿಗೆ ಕರ್ನಾಟಕದ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ನೋಟಿಸ್ ನೀಡಿದ್ದರು. ನೋಂದಣಿ ಮಾಡಿಸಿ ಮತ್ತು ಜಿಎಸ್ಟಿ ಪಾವತಿಸಿ ಎಂದು ಸೂಚಿಸಿದ್ದರು. ಈ ಕ್ರಮಕ್ಕೆ ಆಕ್ಷೇಪ ಎದುರಾಗಿತ್ತು. ನೋಟಿಸ್ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿ ವರ್ತಕರು ಪ್ರತಿಭಟನೆ ನಡೆಸಿದ್ದರು. ಜಿಎಸ್ಟಿ ಕೇಂದ್ರದ್ದು ಎಂದು ಕಾಂಗ್ರೆಸ್ ದೂರಿದ್ದರೆ, ಕರ್ನಾಟಕದಲ್ಲಿ ಮಾತ್ರ ಈ ರೀತಿ ವಸೂಲು ಮಾಡಲಾಗುತ್ತಿದೆ ಎಂದು ಬಿಜೆಪಿ ನಾಯಕರು ಆಪಾದಿಸಿದ್ದರು. ಇದು ರಾಜಕೀಯ ವಾಗ್ವಾದಕ್ಕೂ ಕಾರಣವಾಗಿತ್ತು.</p>.<p>ಆ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಿ ವಾಣಿಜ್ಯ ತೆರಿಗೆ ಇಲಾಖೆ ನೋಟಿಸ್ ನೀಡಿದ್ದ 9,000 ಸಣ್ಣ ವರ್ತಕರು ಇಲ್ಲಿಯವರೆಗೂ ಪಾವತಿಸಬೇಕಿದ್ದ ಜಿಎಸ್ಟಿ ಮನ್ನಾ ಮಾಡಲು ಸಮ್ಮತಿಸಿದ್ದರು.</p>.<p>ಸರಕುಗಳ ವಾರ್ಷಿಕ ವಹಿವಾಟು ಮಿತಿಯನ್ನು ₹40 ಲಕ್ಷಕ್ಕೆ ಹಾಗೂ ಸೇವಾ ವಹಿವಾಟು ಮಿತಿಯನ್ನು ₹20 ಲಕ್ಷಕ್ಕೆ ಸರ್ಕಾರ ನಿಗದಿಪಡಿಸಿದೆ. ಈ ಮಿತಿ ದಾಟಿದವರು ಜಿಎಸ್ಟಿ ನೋಂದಣಿ ಮಾಡಿಸುವುದು ಹಾಗೂ ನಿಯಮದಂತೆ ತೆರಿಗೆ ಪಾವತಿಸುವುದು ಕಡ್ಡಾಯ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕರ್ನಾಟಕದಲ್ಲಿ 2024-25ನೇ ಆರ್ಥಿಕ ವರ್ಷದಲ್ಲಿ 1,254 ಪ್ರಕರಣಗಳಲ್ಲಿ ₹39577 ಕೋಟಿ ಮೊತ್ತದ ಜಿಎಸ್ಟಿ ವಂಚನೆ ಪತ್ತೆ ಹಚ್ಚಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದರು. </p>.<p>ಲೋಕಸಭೆಯಲ್ಲಿ ಸೋಮವಾರ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸಂಸದರಾದ ಡಾ.ಕೆ. ಸುಧಾಕರ್ ಹಾಗೂ ತೇಜಸ್ವಿ ಸೂರ್ಯ ಪ್ರಶ್ನೆಗೆ ಉತ್ತರಿಸಿದ ಅವರು, ʼಈ ಪ್ರಕರಣಗಳಲ್ಲಿ ಒಂಬತ್ತು ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಕರಣ ದಾಖಲಿಸಿದ ಬಳಿಕ ₹1623 ಕೋಟಿ ಮೊತ್ತವನ್ನು ಸ್ವಯಂಪ್ರೇರಿತವಾಗಿ ಪಾವತಿ ಆಗಿದೆʼ ಎಂದರು. ಹಿಂದಿನ ವರ್ಷಕ್ಕೆ ಹೋಲಿಸಿದರೆ ಜಿಎಸ್ಟಿ ವಂಚನೆ ಪ್ರಮಾಣ ಐದು ಪಟ್ಟು ಹೆಚ್ಚಾಗಿದೆ. </p>.<h2>ಸಣ್ಣ ವರ್ತಕರಿಗಿಲ್ಲ ನೋಟಿಸ್: </h2><p>ಯುಪಿಐ ವಹಿವಾಟುಗಳ ಆಧಾರದಲ್ಲಿ ಕರ್ನಾಟಕ ಸೇರಿದಂತೆ ದೇಶದ ಸಣ್ಣ ವರ್ತಕರು ಮತ್ತು ಬೀದಿಬದಿ ವ್ಯಾಪಾರಿಗಳಿಗೆ ಕೇಂದ್ರ ಜಿಎಸ್ಟಿ ಅಧಿಕಾರಿಗಳು ಯಾವುದೇ ನೋಟಿಸ್ ನೀಡಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. </p>.<p>ಯುಪಿಐ ಮೂಲಕ ವಾರ್ಷಿಕ ₹40 ಲಕ್ಷಕ್ಕಿಂತ ಹೆಚ್ಚಿನ ವಹಿವಾಟು ನಡೆಸಿದ್ದ ಬೇಕರಿ, ಹೋಟೆಲ್, ಬೀಡಾ ಅಂಗಡಿ ಮತ್ತು ಟೀ ಅಂಗಡಿ ಮಾಲೀಕರಿಗೆ ಕರ್ನಾಟಕದ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ನೋಟಿಸ್ ನೀಡಿದ್ದರು. ನೋಂದಣಿ ಮಾಡಿಸಿ ಮತ್ತು ಜಿಎಸ್ಟಿ ಪಾವತಿಸಿ ಎಂದು ಸೂಚಿಸಿದ್ದರು. ಈ ಕ್ರಮಕ್ಕೆ ಆಕ್ಷೇಪ ಎದುರಾಗಿತ್ತು. ನೋಟಿಸ್ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿ ವರ್ತಕರು ಪ್ರತಿಭಟನೆ ನಡೆಸಿದ್ದರು. ಜಿಎಸ್ಟಿ ಕೇಂದ್ರದ್ದು ಎಂದು ಕಾಂಗ್ರೆಸ್ ದೂರಿದ್ದರೆ, ಕರ್ನಾಟಕದಲ್ಲಿ ಮಾತ್ರ ಈ ರೀತಿ ವಸೂಲು ಮಾಡಲಾಗುತ್ತಿದೆ ಎಂದು ಬಿಜೆಪಿ ನಾಯಕರು ಆಪಾದಿಸಿದ್ದರು. ಇದು ರಾಜಕೀಯ ವಾಗ್ವಾದಕ್ಕೂ ಕಾರಣವಾಗಿತ್ತು.</p>.<p>ಆ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಿ ವಾಣಿಜ್ಯ ತೆರಿಗೆ ಇಲಾಖೆ ನೋಟಿಸ್ ನೀಡಿದ್ದ 9,000 ಸಣ್ಣ ವರ್ತಕರು ಇಲ್ಲಿಯವರೆಗೂ ಪಾವತಿಸಬೇಕಿದ್ದ ಜಿಎಸ್ಟಿ ಮನ್ನಾ ಮಾಡಲು ಸಮ್ಮತಿಸಿದ್ದರು.</p>.<p>ಸರಕುಗಳ ವಾರ್ಷಿಕ ವಹಿವಾಟು ಮಿತಿಯನ್ನು ₹40 ಲಕ್ಷಕ್ಕೆ ಹಾಗೂ ಸೇವಾ ವಹಿವಾಟು ಮಿತಿಯನ್ನು ₹20 ಲಕ್ಷಕ್ಕೆ ಸರ್ಕಾರ ನಿಗದಿಪಡಿಸಿದೆ. ಈ ಮಿತಿ ದಾಟಿದವರು ಜಿಎಸ್ಟಿ ನೋಂದಣಿ ಮಾಡಿಸುವುದು ಹಾಗೂ ನಿಯಮದಂತೆ ತೆರಿಗೆ ಪಾವತಿಸುವುದು ಕಡ್ಡಾಯ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>