ರಾಯಚೂರು: ‘ಸರಕು ಮತ್ತು ಸೇವೆಗಳ ತೆರಿಗೆ (ಜಿಎಸ್ಟಿ) ಆರ್ಥಿಕ ಅಭಿವೃದ್ಧಿಗೆ ಪೂರಕವಾಗದೆ ಮಾರಕವಾಗಿದೆ ಎಂಬುದನ್ನು ಉದ್ಯಮಿಗಳು ಹೇಳುತ್ತಿದ್ದಾರೆ. ದೇಶದ ಆರ್ಥಿಕ ಕುಸಿತ ಸರಿಪಡಿಸಲು ಕ್ರಮ ಕೈಗೊಳ್ಳುವ ಪೂರ್ವ ಕೈಗಾರಿಕೋದ್ಯಮಿಗಳ, ವ್ಯಾಪಾರಿಗಳ ಅಭಿಪ್ರಾಯ ಪಡೆಯುವ ಕೆಲಸ ಸರ್ಕಾರ ಮಾಡುತ್ತಿಲ್ಲ’ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರದ ನೀತಿಗಳನ್ನು ಟೀಕಿಸಿದರು.