<p><strong>ಬೆಂಗಳೂರು</strong>: ‘ಕೇಂದ್ರ ಸರ್ಕಾರ ಮುಂದಿಟ್ಟಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ದರ ಸರಳೀಕರಣ ವ್ಯವಸ್ಥೆಯನ್ನು ನಾವು (ರಾಜ್ಯ ಸರ್ಕಾರ) ಸ್ವಾಗತಿಸುತ್ತೇವೆ. ಆದರೆ, ಈ ವ್ಯವಸ್ಥೆ ರಾಜ್ಯಗಳ ತೆರಿಗೆ ಆದಾಯವನ್ನು ರಕ್ಷಿಸುವಂತಿರಬೇಕು. ಸರಳೀಕರಣದ ಲಾಭ ಸಂಪೂರ್ಣವಾಗಿ ಜನರಿಗೆ ಸಿಗಬೇಕೇ ಹೊರತು ಕಂಪನಿಗಳಿಗೆ ಅಲ್ಲ’ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.</p>.<p>ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ‘ಜಿಎಸ್ಟಿ ತೆರಿಗೆ ವ್ಯವಸ್ಥೆ ಜಾರಿಯಾದ ನಂತರ ರಾಜ್ಯದ ಆದಾಯದಲ್ಲಿ ವಾರ್ಷಿಕ ಸರಾಸರಿ ₹70 ಸಾವಿರ ಕೋಟಿ ಖೋತಾ ಆಗುತ್ತಿದೆ. ಇದೀಗ ಕೇಂದ್ರ ಸರ್ಕಾರದ ದರ ಸರಳೀಕರಣ ಪ್ರಸ್ತಾವನೆಯಿಂದ ಹೆಚ್ಚುವರಿ ₹ 15 ಸಾವಿರ ಕೋಟಿ ಖೋತಾ ಆಗಲಿದೆ’ ಎಂದರು.</p>.<p>‘ಜಿಎಸ್ಟಿ ಜಾರಿಗೊಂಡ ನಂತರ ಕೇಂದ್ರದ ತೆರಿಗೆಯಲ್ಲಿ ಕರ್ನಾಟಕದ ಪಾಲು 2016-17ರಿಂದ 2024-25ಕ್ಕೆ ಹೋಲಿಸಿದರೆ ವಾರ್ಷಿಕ ₹21,977 ಕೋಟಿ ಕಡಿತವಾಗಿದೆ. ಕೇಂದ್ರ ಪುರಸ್ಕೃತ ಯೋಜನೆಯಲ್ಲಿ ಕರ್ನಾಟಕಕ್ಕೆ ಬರುವ ಅನುದಾನ ವಾರ್ಷಿಕ ₹ 18,870 ಕೋಟಿ ಕಡಿತಗೊಂಡಿದೆ’ ಎಂದರು.</p>.<p>‘ಪ್ರಸ್ತಾವಿತ ಜಿಎಸ್ಟಿ ದರ ಸರಳೀಕರಣದಿಂದ ರಾಜ್ಯ ಸರ್ಕಾರಗಳಿಗೆ ಯಾವ ಪ್ರಮಾಣದಲ್ಲಿ ಆದಾಯ ಖೋತಾ ಆಗಬಹುದು ಎಂಬ ಅಂದಾಜಿನ ಕುರಿತು ಕೇಂದ್ರ ಸರ್ಕಾರ ಈವರೆಗೂ ಮಾಹಿತಿ ನೀಡಿಲ್ಲ. ಕೆಲವು ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳು ₹ 2.50 ಲಕ್ಷ ಕೋಟಿವರೆಗೆ ನಷ್ಟ ಉಂಟಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಿವೆ’ ಎಂದ ಅವರು, ‘ಹೊಸ ವ್ಯವಸ್ಥೆ ಜಾರಿಯಾಗಿ ರಾಜ್ಯಗಳ ಆದಾಯ ಹಾಗೂ ಜಿಎಸ್ಟಿ ಸ್ಥಿರಗೊಳ್ಳುವವರೆಗೆ ಜಿಎಎಸ್ಟಿ ಕೌನ್ಸಿಲ್ ಪರಿಹಾರ ನೀಡಬೇಕು’ ಎಂದು ಆಗ್ರಹಿಸಿದರು.</p>.<p>‘ರಾಜ್ಯಗಳಿಗೆ ಹೆಚ್ಚಿನ ನಷ್ಟವಾದರೆ ಅಂತಿಮವಾಗಿ ಜನಸಾಮಾನ್ಯರು ಸಂಕಷ್ಟಕ್ಕೆ ಒಳಗಾಗುತ್ತಾರೆ. ರಾಜ್ಯಗಳ ಸ್ವಾಯತ್ತತೆ ತುಂಬಾ ಮುಖ್ಯವಾದ ವಿಚಾರ’ ಎಂದರು.</p>.<div><blockquote>ರಾಜ್ಯಗಳ ಆದಾಯದಲ್ಲಿ ಕೊರತೆ ಉಂಟಾಗಿ ಸರ್ಕಾರ ನಡೆಸಲು ಕೇಂದ್ರದ ಕಡೆ ಕೈಚಾಚುವಂತಾದರೆ ರಾಜ್ಯಗಳ ಸ್ವಾಯತ್ತತೆ ಎಂಬ ಪದವೇ ಅರ್ಥ ಕಳೆದುಕೊಳ್ಳಲಿದೆ </blockquote><span class="attribution">ಕೃಷ್ಣ ಬೈರೇಗೌಡಕಂದಾಯ ಸಚಿವ </span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಕೇಂದ್ರ ಸರ್ಕಾರ ಮುಂದಿಟ್ಟಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ದರ ಸರಳೀಕರಣ ವ್ಯವಸ್ಥೆಯನ್ನು ನಾವು (ರಾಜ್ಯ ಸರ್ಕಾರ) ಸ್ವಾಗತಿಸುತ್ತೇವೆ. ಆದರೆ, ಈ ವ್ಯವಸ್ಥೆ ರಾಜ್ಯಗಳ ತೆರಿಗೆ ಆದಾಯವನ್ನು ರಕ್ಷಿಸುವಂತಿರಬೇಕು. ಸರಳೀಕರಣದ ಲಾಭ ಸಂಪೂರ್ಣವಾಗಿ ಜನರಿಗೆ ಸಿಗಬೇಕೇ ಹೊರತು ಕಂಪನಿಗಳಿಗೆ ಅಲ್ಲ’ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.</p>.<p>ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ‘ಜಿಎಸ್ಟಿ ತೆರಿಗೆ ವ್ಯವಸ್ಥೆ ಜಾರಿಯಾದ ನಂತರ ರಾಜ್ಯದ ಆದಾಯದಲ್ಲಿ ವಾರ್ಷಿಕ ಸರಾಸರಿ ₹70 ಸಾವಿರ ಕೋಟಿ ಖೋತಾ ಆಗುತ್ತಿದೆ. ಇದೀಗ ಕೇಂದ್ರ ಸರ್ಕಾರದ ದರ ಸರಳೀಕರಣ ಪ್ರಸ್ತಾವನೆಯಿಂದ ಹೆಚ್ಚುವರಿ ₹ 15 ಸಾವಿರ ಕೋಟಿ ಖೋತಾ ಆಗಲಿದೆ’ ಎಂದರು.</p>.<p>‘ಜಿಎಸ್ಟಿ ಜಾರಿಗೊಂಡ ನಂತರ ಕೇಂದ್ರದ ತೆರಿಗೆಯಲ್ಲಿ ಕರ್ನಾಟಕದ ಪಾಲು 2016-17ರಿಂದ 2024-25ಕ್ಕೆ ಹೋಲಿಸಿದರೆ ವಾರ್ಷಿಕ ₹21,977 ಕೋಟಿ ಕಡಿತವಾಗಿದೆ. ಕೇಂದ್ರ ಪುರಸ್ಕೃತ ಯೋಜನೆಯಲ್ಲಿ ಕರ್ನಾಟಕಕ್ಕೆ ಬರುವ ಅನುದಾನ ವಾರ್ಷಿಕ ₹ 18,870 ಕೋಟಿ ಕಡಿತಗೊಂಡಿದೆ’ ಎಂದರು.</p>.<p>‘ಪ್ರಸ್ತಾವಿತ ಜಿಎಸ್ಟಿ ದರ ಸರಳೀಕರಣದಿಂದ ರಾಜ್ಯ ಸರ್ಕಾರಗಳಿಗೆ ಯಾವ ಪ್ರಮಾಣದಲ್ಲಿ ಆದಾಯ ಖೋತಾ ಆಗಬಹುದು ಎಂಬ ಅಂದಾಜಿನ ಕುರಿತು ಕೇಂದ್ರ ಸರ್ಕಾರ ಈವರೆಗೂ ಮಾಹಿತಿ ನೀಡಿಲ್ಲ. ಕೆಲವು ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳು ₹ 2.50 ಲಕ್ಷ ಕೋಟಿವರೆಗೆ ನಷ್ಟ ಉಂಟಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಿವೆ’ ಎಂದ ಅವರು, ‘ಹೊಸ ವ್ಯವಸ್ಥೆ ಜಾರಿಯಾಗಿ ರಾಜ್ಯಗಳ ಆದಾಯ ಹಾಗೂ ಜಿಎಸ್ಟಿ ಸ್ಥಿರಗೊಳ್ಳುವವರೆಗೆ ಜಿಎಎಸ್ಟಿ ಕೌನ್ಸಿಲ್ ಪರಿಹಾರ ನೀಡಬೇಕು’ ಎಂದು ಆಗ್ರಹಿಸಿದರು.</p>.<p>‘ರಾಜ್ಯಗಳಿಗೆ ಹೆಚ್ಚಿನ ನಷ್ಟವಾದರೆ ಅಂತಿಮವಾಗಿ ಜನಸಾಮಾನ್ಯರು ಸಂಕಷ್ಟಕ್ಕೆ ಒಳಗಾಗುತ್ತಾರೆ. ರಾಜ್ಯಗಳ ಸ್ವಾಯತ್ತತೆ ತುಂಬಾ ಮುಖ್ಯವಾದ ವಿಚಾರ’ ಎಂದರು.</p>.<div><blockquote>ರಾಜ್ಯಗಳ ಆದಾಯದಲ್ಲಿ ಕೊರತೆ ಉಂಟಾಗಿ ಸರ್ಕಾರ ನಡೆಸಲು ಕೇಂದ್ರದ ಕಡೆ ಕೈಚಾಚುವಂತಾದರೆ ರಾಜ್ಯಗಳ ಸ್ವಾಯತ್ತತೆ ಎಂಬ ಪದವೇ ಅರ್ಥ ಕಳೆದುಕೊಳ್ಳಲಿದೆ </blockquote><span class="attribution">ಕೃಷ್ಣ ಬೈರೇಗೌಡಕಂದಾಯ ಸಚಿವ </span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>