ವಿಚಾರಣೆ ವೇಳೆ ರವಿವರ್ಮ ಕುಮಾರ್ ವಾದ ಮುಂದುವರಿಸಿ, ‘ಅರ್ಜಿದಾರರ ಆರೋಪವನ್ನು ಗಮನಿಸಿದರೆ ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕುವ ರೀತಿಯಂತಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ಪಕ್ಷದ ಪ್ರಣಾಳಿಕೆಯಲ್ಲಿ ಘೋಷಿಸಿ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲೂ ಪ್ರಚಾರ ಮಾಡಲಾಗಿದೆ. ಯೋಜನೆಗಳ ಅನುಷ್ಠಾನಕ್ಕೆ ಸರ್ಕಾರದ ಹಣವನ್ನು ಬಳಸಲಾಗುತ್ತಿದೆಯೇ ಹೊರತು ಸಿದ್ದರಾಮಯ್ಯವರ ವೈಯಕ್ತಿಕ ಆದಾಯವನ್ನಲ್ಲ’ ಎಂದು ನ್ಯಾಯಪೀಠಕ್ಕೆ ಸ್ಪಷ್ಟಪಡಿಸಿದರು.