<p><strong>ಬೆಂಗಳೂರು</strong>: ಐದು ಗ್ಯಾರಂಟಿ ಯೋಜನೆಗಳಿಗಾಗಿ 2025–26 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್ಸಿಎಸ್ಪಿ) ಹಾಗೂ ಗಿರಿಜನ ಉಪ ಯೋಜನೆ (ಟಿಎಸ್ಪಿ) ಅನುದಾನದಲ್ಲಿ ಒಟ್ಟು ₹13,433 ಕೋಟಿ ಬಳಕೆ ಮಾಡಿರುವ ಬಗ್ಗೆ ವಿಧಾನಸಭೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ‘ಪರಿಶಿಷ್ಟರಿಗೆ ಮೀಸಲಾದ ಹಣವನ್ನು ಅನ್ಯ ಉದ್ದೇಶಗಳಿಗೆ ಬಳಸುತ್ತಿರುವುದು, ದಲಿತರಿಗೆ ಮಾಡುತ್ತಿರುವ ದ್ರೋಹ’ ಎಂದು ಕಿಡಿಕಾರಿದರು.</p>.<p>ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಎಂ.ಚಂದ್ರಪ್ಪ ಅವರ ಪ್ರಶ್ನೆಗೆ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ನೀಡಿದ ಉತ್ತರಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ದಲಿತ ಸಮುದಾಯದ ನಿರಂತರ ಧ್ವನಿಯಾಗಿ ಬಂದಿದ್ದ, ಮಹದೇವಪ್ಪ ಅವರೇ ಅನ್ಯಾಯ ಮಾಡಿದ್ದಾರೆ ಎಂದು ಹರಿಹಾಯ್ದರು.</p>.<p>ಚಂದ್ರಪ್ಪ ಮಾತನಾಡಿ, ₹42,017.5 ಕೋಟಿ ಎಸ್ಸಿಎಸ್ಪಿ ಹಾಗೂ ಟಿಎಸ್ಪಿ ಅನುದಾನದಲ್ಲಿ ಸಮಾಜ ಕಲ್ಯಾಣ ಇಲಾಖೆಗೆ ಕೇವಲ ₹5,104 ಕೋಟಿಯನ್ನು ನೀಡಿದ್ದು, ಉಳಿದ ಮೊತ್ತವನ್ನು 33 ಇಲಾಖೆಗಳಿಗೆ ಹಂಚಲಾಗಿದೆ. ಅಷ್ಟೂ ಮೊತ್ತವನ್ನು ಸಮಾಜ ಕಲ್ಯಾಣ ಇಲಾಖೆಗೆ ನೀಡಬೇಕಿತ್ತು ಎಂದು ಹೇಳಿದರು.</p>.<p>‘ಬಿಜೆಪಿ ಸರ್ಕಾರ ಶೇ 40 ರಷ್ಟು ಕಮಿಷನ್ ಪಡೆಯುತ್ತಿದೆ ಎಂದು ದೂರಿದ್ದ ನೀವು ಅದನ್ನು ನಿಲ್ಲಿಸಿ, ಅದರಿಂದ ಸಿಗುವ ಮೊತ್ತವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸುವುದಾಗಿ ಹೇಳಿದ್ದೀರಿ. ಈಗ ಗ್ಯಾರಂಟಿಗಳಿಗೆ ₹13,433 ಕೋಟಿ ಬಳಕೆ ಮಾಡಿದ್ದೀರಿ? ಯಾವ ಪುರುಷಾರ್ಥಕ್ಕೆ ಇಷ್ಟು ಹಣ ಕೊಟ್ಟಿದ್ದೀರಿ’ ಎಂದು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಐದು ಗ್ಯಾರಂಟಿ ಯೋಜನೆಗಳಿಗಾಗಿ 2025–26 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್ಸಿಎಸ್ಪಿ) ಹಾಗೂ ಗಿರಿಜನ ಉಪ ಯೋಜನೆ (ಟಿಎಸ್ಪಿ) ಅನುದಾನದಲ್ಲಿ ಒಟ್ಟು ₹13,433 ಕೋಟಿ ಬಳಕೆ ಮಾಡಿರುವ ಬಗ್ಗೆ ವಿಧಾನಸಭೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ‘ಪರಿಶಿಷ್ಟರಿಗೆ ಮೀಸಲಾದ ಹಣವನ್ನು ಅನ್ಯ ಉದ್ದೇಶಗಳಿಗೆ ಬಳಸುತ್ತಿರುವುದು, ದಲಿತರಿಗೆ ಮಾಡುತ್ತಿರುವ ದ್ರೋಹ’ ಎಂದು ಕಿಡಿಕಾರಿದರು.</p>.<p>ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಎಂ.ಚಂದ್ರಪ್ಪ ಅವರ ಪ್ರಶ್ನೆಗೆ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ನೀಡಿದ ಉತ್ತರಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ದಲಿತ ಸಮುದಾಯದ ನಿರಂತರ ಧ್ವನಿಯಾಗಿ ಬಂದಿದ್ದ, ಮಹದೇವಪ್ಪ ಅವರೇ ಅನ್ಯಾಯ ಮಾಡಿದ್ದಾರೆ ಎಂದು ಹರಿಹಾಯ್ದರು.</p>.<p>ಚಂದ್ರಪ್ಪ ಮಾತನಾಡಿ, ₹42,017.5 ಕೋಟಿ ಎಸ್ಸಿಎಸ್ಪಿ ಹಾಗೂ ಟಿಎಸ್ಪಿ ಅನುದಾನದಲ್ಲಿ ಸಮಾಜ ಕಲ್ಯಾಣ ಇಲಾಖೆಗೆ ಕೇವಲ ₹5,104 ಕೋಟಿಯನ್ನು ನೀಡಿದ್ದು, ಉಳಿದ ಮೊತ್ತವನ್ನು 33 ಇಲಾಖೆಗಳಿಗೆ ಹಂಚಲಾಗಿದೆ. ಅಷ್ಟೂ ಮೊತ್ತವನ್ನು ಸಮಾಜ ಕಲ್ಯಾಣ ಇಲಾಖೆಗೆ ನೀಡಬೇಕಿತ್ತು ಎಂದು ಹೇಳಿದರು.</p>.<p>‘ಬಿಜೆಪಿ ಸರ್ಕಾರ ಶೇ 40 ರಷ್ಟು ಕಮಿಷನ್ ಪಡೆಯುತ್ತಿದೆ ಎಂದು ದೂರಿದ್ದ ನೀವು ಅದನ್ನು ನಿಲ್ಲಿಸಿ, ಅದರಿಂದ ಸಿಗುವ ಮೊತ್ತವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸುವುದಾಗಿ ಹೇಳಿದ್ದೀರಿ. ಈಗ ಗ್ಯಾರಂಟಿಗಳಿಗೆ ₹13,433 ಕೋಟಿ ಬಳಕೆ ಮಾಡಿದ್ದೀರಿ? ಯಾವ ಪುರುಷಾರ್ಥಕ್ಕೆ ಇಷ್ಟು ಹಣ ಕೊಟ್ಟಿದ್ದೀರಿ’ ಎಂದು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>