<p><strong>ಬೆಂಗಳೂರು: </strong>ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ಭೇದಿಸಿದ ವಿಶೇಷ ತನಿಖಾ ತಂಡಕ್ಕೆ (ಎಸ್ಐಟಿ) ₹ 25 ಲಕ್ಷ ಬಹುಮಾನ ಘೋಷಿಸುವಂತೆ ಕೋರಿ ತಂಡದ ಮುಖ್ಯಸ್ಥ ಬಿ.ಕೆ.ಸಿಂಗ್ ಅವರು ಗೃಹ ಇಲಾಖೆಗೆ ಪತ್ರ ಬರೆದಿದ್ದಾರೆ.</p>.<p>ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್ ಅವರಿಗೆ ಏಪ್ರಿಲ್ 12ರಂದು ಪತ್ರ ರವಾನಿಸಲಾಗಿದ್ದು, ಇದುವರೆಗೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.</p>.<p>‘ಗೌರಿ ಹತ್ಯೆ ಪ್ರಕರಣ ಸಂಬಂಧ ಒಂದು ವರ್ಷ ತನಿಖೆ ನಡೆಸಿದ್ದ ಎಸ್ಐಟಿ, ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಈ ತನಿಖೆಯಿಂದ ಕರ್ನಾಟಕ ಹಾಗೂ ಮಹಾರಾಷ್ಟ್ರದಲ್ಲಿ ನಡೆದಿದ್ದ ವಿಚಾರವಾದಿಗಳ ಹತ್ಯೆಗೂ ಸುಳಿವುಗಳು ಸಿಕ್ಕಿವೆ. ಆಯಾ ಪೊಲೀಸರು, ಎಸ್ಐಟಿಯಿಂದ ಮಾಹಿತಿ ಪಡೆದುಕೊಂಡು ತನಿಖೆ ಮುಂದುವರಿಸಿದ್ದಾರೆ’ ಎಂದು ಸಿಂಗ್ ಹೇಳಿದ್ದಾರೆ.</p>.<p>‘ಆರೋಪಿಗಳಿಗೆ ಶಿಕ್ಷೆಯಾಗುವಂತೆ ಎಲ್ಲ ಪುರಾವೆಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೂ ಸಲ್ಲಿಸಿದೆ. ಇಂಥ ತಂಡವನ್ನು ಪ್ರೋತ್ಸಾಹಿಸಲು ಬಹುಮಾನ ಘೋಷಣೆ ಮಾಡಬೇಕು’ ಎಂದು ಕೋರಿದ್ದಾರೆ.</p>.<p>ಬೆಂಗಳೂರು ಹೆಚ್ಚುವರಿ ಪೊಲೀಸ್ ಕಮಿಷನರ್ ಬಿ.ಕೆ. ಸಿಂಗ್ ಅವರ ನೇತೃತ್ವದಲ್ಲಿ ರಚಿಸಲಾದ ಎಸ್ಐಟಿಯಲ್ಲಿ ಐಪಿಎಸ್ ಅಧಿಕಾರಿಗಳಾದ ಎಂ.ಎನ್.ಅನುಚೇತ್, ಹರೀಶ್ ಪಾಂಡೆ, ಡಿವೈಎಸ್ಪಿಗಳಾದ ರಂಗಪ್ಪ, ಎನ್.ಬಿ. ಸಕ್ರಿ, ಜಗನ್ನಾಥ ರೈ ಹಾಗೂ 13 ಇನ್ಸ್ಪೆಕ್ಟರ್ಗಳು ಇದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ಭೇದಿಸಿದ ವಿಶೇಷ ತನಿಖಾ ತಂಡಕ್ಕೆ (ಎಸ್ಐಟಿ) ₹ 25 ಲಕ್ಷ ಬಹುಮಾನ ಘೋಷಿಸುವಂತೆ ಕೋರಿ ತಂಡದ ಮುಖ್ಯಸ್ಥ ಬಿ.ಕೆ.ಸಿಂಗ್ ಅವರು ಗೃಹ ಇಲಾಖೆಗೆ ಪತ್ರ ಬರೆದಿದ್ದಾರೆ.</p>.<p>ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್ ಅವರಿಗೆ ಏಪ್ರಿಲ್ 12ರಂದು ಪತ್ರ ರವಾನಿಸಲಾಗಿದ್ದು, ಇದುವರೆಗೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.</p>.<p>‘ಗೌರಿ ಹತ್ಯೆ ಪ್ರಕರಣ ಸಂಬಂಧ ಒಂದು ವರ್ಷ ತನಿಖೆ ನಡೆಸಿದ್ದ ಎಸ್ಐಟಿ, ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಈ ತನಿಖೆಯಿಂದ ಕರ್ನಾಟಕ ಹಾಗೂ ಮಹಾರಾಷ್ಟ್ರದಲ್ಲಿ ನಡೆದಿದ್ದ ವಿಚಾರವಾದಿಗಳ ಹತ್ಯೆಗೂ ಸುಳಿವುಗಳು ಸಿಕ್ಕಿವೆ. ಆಯಾ ಪೊಲೀಸರು, ಎಸ್ಐಟಿಯಿಂದ ಮಾಹಿತಿ ಪಡೆದುಕೊಂಡು ತನಿಖೆ ಮುಂದುವರಿಸಿದ್ದಾರೆ’ ಎಂದು ಸಿಂಗ್ ಹೇಳಿದ್ದಾರೆ.</p>.<p>‘ಆರೋಪಿಗಳಿಗೆ ಶಿಕ್ಷೆಯಾಗುವಂತೆ ಎಲ್ಲ ಪುರಾವೆಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೂ ಸಲ್ಲಿಸಿದೆ. ಇಂಥ ತಂಡವನ್ನು ಪ್ರೋತ್ಸಾಹಿಸಲು ಬಹುಮಾನ ಘೋಷಣೆ ಮಾಡಬೇಕು’ ಎಂದು ಕೋರಿದ್ದಾರೆ.</p>.<p>ಬೆಂಗಳೂರು ಹೆಚ್ಚುವರಿ ಪೊಲೀಸ್ ಕಮಿಷನರ್ ಬಿ.ಕೆ. ಸಿಂಗ್ ಅವರ ನೇತೃತ್ವದಲ್ಲಿ ರಚಿಸಲಾದ ಎಸ್ಐಟಿಯಲ್ಲಿ ಐಪಿಎಸ್ ಅಧಿಕಾರಿಗಳಾದ ಎಂ.ಎನ್.ಅನುಚೇತ್, ಹರೀಶ್ ಪಾಂಡೆ, ಡಿವೈಎಸ್ಪಿಗಳಾದ ರಂಗಪ್ಪ, ಎನ್.ಬಿ. ಸಕ್ರಿ, ಜಗನ್ನಾಥ ರೈ ಹಾಗೂ 13 ಇನ್ಸ್ಪೆಕ್ಟರ್ಗಳು ಇದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>