<p><strong>ಬೆಂಗಳೂರು</strong>: ಸೇವಾ ಭದ್ರತೆಗೆ ಆಗ್ರಹಿಸಿ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ಗುರುವಾರ ಸ್ವಾತಂತ್ರ್ಯ ಉದ್ಯಾನದಲ್ಲಿ ಧರಣಿ ಆರಂಭಿಸಿದರು.</p>.<p>ಕನಿಷ್ಠ ಮೂರು ವರ್ಷಗಳು ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರನ್ನು ಕಾಯಂ ಮಾಡಬೇಕು. ಅಲ್ಲಿಯವರೆಗೂ 2018ರಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗ ಹೊರಡಿಸಿದ್ದ ಆದೇಶದಂತೆ ಪ್ರತಿ ಗಂಟೆಗೆ ₹1,500 ವೇತನದಂತೆ ತಿಂಗಳಿಗೆ ಕನಿಷ್ಠ ₹50 ಸಾವಿರ ವೇತನ ನಿಗದಿ ಮಾಡಬೇಕು. ಪ್ರತಿ ವರ್ಷ ಕೌನ್ಸೆಲಿಂಗ್ ನಡೆಸುವ ಬದಲು ಸೇವಾಜ್ಯೇಷ್ಠತೆಯ ಆಧಾರದಲ್ಲಿ ನೇಮಕ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿದರು.</p>.<p>ಉನ್ನತ ಶಿಕ್ಷಣ ಸಚಿವರು ಈಚೆಗೆ ನೀಡಿದ ನಾಲ್ಕು ಭರವಸೆಗಳಿಂದ ನೈಜ ಸಮಸ್ಯೆಗಳು ನಿವಾರಣೆಯಾಗುವುದಿಲ್ಲ. ಸೇವಾ ಭದ್ರತೆ ಇಲ್ಲದ ಭರವಸೆಗಳಿಂದ ಯಾವ ಪ್ರಯೋಜನವೂ ಇಲ್ಲ. 60 ವರ್ಷಕ್ಕೆ ₹5 ಲಕ್ಷ ಧನಸಹಾಯದ ಭರವಸೆ ಇದೆ. ಆದರೆ, ಸಹಾಯಕ ಪ್ರಾಧ್ಯಾಪಕರ ನೇಮಕ, ವರ್ಗಾವಣೆಯಿಂದ ಕಾರ್ಯಭಾರ ಕಡಿಮೆಯಾಗುತ್ತಿದೆ. ಪ್ರತಿವರ್ಷ ನಡೆಸುವ ಕೌನ್ಸೆಲಿಂಗ್ನಿಂದ ಬಹಳಷ್ಟು ಅತಿಥಿ ಉಪನ್ಯಾಸಕರು ಕೆಲಸ ಕಳೆದುಕೊಳ್ಳುತ್ತಿದ್ದಾರೆ. ಸಹಾಯಧನ ನೀಡುವ ಮೊದಲು 60 ವರ್ಷದವರೆಗೆ ಸೇವಾ ಭದ್ರತೆಯ ಭರವಸೆ ನೀಡಬೇಕು ಎಂದು ಒತ್ತಾಯಿಸಿದರು.</p>.<p>ಅತಿಥಿ ಉಪನ್ಯಾಸಕ ಅಸ್ವಸ್ಥ ಧರಣಿ ನಡೆಯುತ್ತಿದ್ದ ವೇಳೆ ತುಮಕೂರಿನ ಅತಿಥಿ ಉಪನ್ಯಾಸಕ ಲೋಕೇಶ್ ಅವರು ಅಸ್ವಸ್ಥರಾದರು. ತಕ್ಷಣ ಅವರಿಗೆ ಚಿಕಿತ್ಸೆ ನೀಡಲಾಯಿತು. ನಿರಂತರ ಪ್ರತಿಭಟನೆ ಪಾದಯಾತ್ರೆಯಲ್ಲಿ ಭಾಗವಹಿಸಿದ್ದರಿಂದ ಬಳಲಿದ್ದರು. ಆರೈಕೆಯ ನಂತರ ಚೇತರಿಸಿಕೊಂಡಿದ್ದಾರೆ ಎಂದು ಸಂಘಟನೆಯ ಮುಖಂಡರು ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಸೇವಾ ಭದ್ರತೆಗೆ ಆಗ್ರಹಿಸಿ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ಗುರುವಾರ ಸ್ವಾತಂತ್ರ್ಯ ಉದ್ಯಾನದಲ್ಲಿ ಧರಣಿ ಆರಂಭಿಸಿದರು.</p>.<p>ಕನಿಷ್ಠ ಮೂರು ವರ್ಷಗಳು ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರನ್ನು ಕಾಯಂ ಮಾಡಬೇಕು. ಅಲ್ಲಿಯವರೆಗೂ 2018ರಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗ ಹೊರಡಿಸಿದ್ದ ಆದೇಶದಂತೆ ಪ್ರತಿ ಗಂಟೆಗೆ ₹1,500 ವೇತನದಂತೆ ತಿಂಗಳಿಗೆ ಕನಿಷ್ಠ ₹50 ಸಾವಿರ ವೇತನ ನಿಗದಿ ಮಾಡಬೇಕು. ಪ್ರತಿ ವರ್ಷ ಕೌನ್ಸೆಲಿಂಗ್ ನಡೆಸುವ ಬದಲು ಸೇವಾಜ್ಯೇಷ್ಠತೆಯ ಆಧಾರದಲ್ಲಿ ನೇಮಕ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿದರು.</p>.<p>ಉನ್ನತ ಶಿಕ್ಷಣ ಸಚಿವರು ಈಚೆಗೆ ನೀಡಿದ ನಾಲ್ಕು ಭರವಸೆಗಳಿಂದ ನೈಜ ಸಮಸ್ಯೆಗಳು ನಿವಾರಣೆಯಾಗುವುದಿಲ್ಲ. ಸೇವಾ ಭದ್ರತೆ ಇಲ್ಲದ ಭರವಸೆಗಳಿಂದ ಯಾವ ಪ್ರಯೋಜನವೂ ಇಲ್ಲ. 60 ವರ್ಷಕ್ಕೆ ₹5 ಲಕ್ಷ ಧನಸಹಾಯದ ಭರವಸೆ ಇದೆ. ಆದರೆ, ಸಹಾಯಕ ಪ್ರಾಧ್ಯಾಪಕರ ನೇಮಕ, ವರ್ಗಾವಣೆಯಿಂದ ಕಾರ್ಯಭಾರ ಕಡಿಮೆಯಾಗುತ್ತಿದೆ. ಪ್ರತಿವರ್ಷ ನಡೆಸುವ ಕೌನ್ಸೆಲಿಂಗ್ನಿಂದ ಬಹಳಷ್ಟು ಅತಿಥಿ ಉಪನ್ಯಾಸಕರು ಕೆಲಸ ಕಳೆದುಕೊಳ್ಳುತ್ತಿದ್ದಾರೆ. ಸಹಾಯಧನ ನೀಡುವ ಮೊದಲು 60 ವರ್ಷದವರೆಗೆ ಸೇವಾ ಭದ್ರತೆಯ ಭರವಸೆ ನೀಡಬೇಕು ಎಂದು ಒತ್ತಾಯಿಸಿದರು.</p>.<p>ಅತಿಥಿ ಉಪನ್ಯಾಸಕ ಅಸ್ವಸ್ಥ ಧರಣಿ ನಡೆಯುತ್ತಿದ್ದ ವೇಳೆ ತುಮಕೂರಿನ ಅತಿಥಿ ಉಪನ್ಯಾಸಕ ಲೋಕೇಶ್ ಅವರು ಅಸ್ವಸ್ಥರಾದರು. ತಕ್ಷಣ ಅವರಿಗೆ ಚಿಕಿತ್ಸೆ ನೀಡಲಾಯಿತು. ನಿರಂತರ ಪ್ರತಿಭಟನೆ ಪಾದಯಾತ್ರೆಯಲ್ಲಿ ಭಾಗವಹಿಸಿದ್ದರಿಂದ ಬಳಲಿದ್ದರು. ಆರೈಕೆಯ ನಂತರ ಚೇತರಿಸಿಕೊಂಡಿದ್ದಾರೆ ಎಂದು ಸಂಘಟನೆಯ ಮುಖಂಡರು ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>