ಬೆಂಗಳೂರು: ಶ್ರೀರಾಮ ಮಂದಿರದಲ್ಲಿ ಬಾಲ ರಾಮನ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸುವುದಕ್ಕಾಗಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಅವರು ಕುಟುಂಬ ಸಮೇತರಾಗಿ ಭಾನುವಾರ ಅಯೋಧ್ಯೆಗೆ ತೆರಳಿದರು.
ವಿಶೇಷ ವಿಮಾನದ ಮೂಲಕ ದೇವೇಗೌಡರು ಅಯೋಧ್ಯೆ ಪ್ರವಾಸ ಕೈಗೊಂಡರು. ಅವರೊಂದಿಗೆ ಪತ್ನಿ ಚನ್ನಮ್ಮ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷರೂ ಆಗಿರುವ ಮಗ ಎಚ್.ಡಿ. ಕುಮಾರಸ್ವಾಮಿ ಮತ್ತು ಮೊಮ್ಮಗ ನಿಖಿಲ್ ಕುಮಾರಸ್ವಾಮಿ ಇದ್ದರು
ಪಕ್ಷದ ಕೆಲವು ಶಾಸಕರು ಹಾಗೂ ದೇವೇಗೌಡರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಮುಖಂಡರೂ ವಿಶೇಷ ವಿಮಾನದಲ್ಲಿ ತೆರಳಿದರು.