<p>ಪ್ರಜಾವಾಣಿ ವಾರ್ತೆ</p>.<p><strong>ಬೆಂಗಳೂರು</strong>: ‘ವಿಧಾನ ಮಂಡಲ ಅಧಿವೇಶನದಲ್ಲಿ ಜನಪರ ವಿಷಯಗಳ ಬಗ್ಗೆ ಚರ್ಚಿಸಬೇಕು. ಸರ್ಕಾರದ ವೈಫಲ್ಯ ಚರ್ಚಿಸಲು ಆದ್ಯತೆ ನೀಡಬೇಕು’ ಎಂದು ತಮ್ಮ ಪಕ್ಷದ ಶಾಸಕರಿಗೆ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷರೂ ಆಗಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸೂಚನೆ ನೀಡಿದರು.</p>.<p>ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ.ಸುರೇಶ್ ಬಾಬು ಅಧ್ಯಕ್ಷತೆಯಲ್ಲಿ ಭಾನುವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಅಧಿವೇಶನದಲ್ಲಿ ಅನುಸರಿಸಬೇಕಾದ ಕಾರ್ಯತಂತ್ರದ ಕುರಿತು ಸಲಹೆ ನೀಡಿದರು.</p>.<p>‘ದಾಖಲೆಗಳನ್ನು ಆಧರಿಸಿ ಮಾತನಾಡಬೇಕು. ಕಲಾಪದ ಸಮಯ ಸದ್ಬಳಕೆ ಮಾಡಿಕೊಳ್ಳಬೇಕು. ಮಿತ್ರ ಪಕ್ಷವಾದ ಬಿಜೆಪಿಯ ನಾಯಕರ ಜತೆ ಈಗಾಗಲೇ ಚರ್ಚೆ ನಡೆಸಲಾಗಿದೆ. ಉಭಯ ಸದನಗಳಲ್ಲಿ ಪರಸ್ಪರ ಒಮ್ಮತದಿಂದ ಸರ್ಕಾರದ ವಿರುದ್ಧ ಹೋರಾಟ ಮಾಡಬೇಕು’ ಎಂದು ಸಲಹೆ ನೀಡಿದರು.</p>.<p>‘ಕಾಂಗ್ರೆಸ್ ಸರ್ಕಾರವು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದಕ್ಕಿಂತ ದುರ್ಬಳಕೆ ಮಾಡಿಕೊಂಡು ರಾಜಕೀಯ ಲಾಭ ಮಾಡಿಕೊಂಡಿದ್ದೇ ಹೆಚ್ಚು. ಗೃಹಲಕ್ಷ್ಮಿ ಯೋಜನೆಯ ಹಣವನ್ನು ಬಾಕಿ ಇಟ್ಟುಕೊಂಡು ಯಾವುದಾದರೂ ಚುನಾವಣೆ ಬಂದಾಗ ಒಮ್ಮೆಲೆ ಖಾತೆಗಳಿಗೆ ಜಮೆ ಮಾಡಲಾಗುತ್ತಿದೆ. ಈ ವಿಷಯವನ್ನು ಕಲಾಪದಲ್ಲಿ ಪರಿಣಾಮಕಾರಿಯಾಗಿ ಚರ್ಚಿಸಬೇಕು’ ಎಂದು ಸೂಚನೆ ನೀಡಿದರು.</p>.<p>‘ಕಲ್ಯಾಣ ಕರ್ನಾಟಕಕ್ಕೆ ₹ 5 ಸಾವಿರ ಅನುದಾನ ನೀಡುವುದಾಗಿ ಹೇಳಿದ್ದ ಸರ್ಕಾರ, ನಯಾಪೈಸೆ ಬಿಡುಗಡೆ ಮಾಡಿಲ್ಲ. ಕಲ್ಯಾಣ ಕರ್ನಾಟಕ ಮತ್ತು ಉತ್ತರ ಕರ್ನಾಟಕಕ್ಕೆ ಮೋಸ ಮಾಡುತ್ತಿದೆ. ಈ ಬಗ್ಗೆಯೂ ಹೋರಾಟ ಮಾಡಬೇಕು. ತೆರಿಗೆ ಎಷ್ಟು ವಸೂಲಿ ಮಾಡಿದ್ದೀರಿ, ಗ್ಯಾರಂಟಿಗಳಿಗೆ ಎಷ್ಟು ಹಣ ಖರ್ಚು ಮಾಡುತ್ತಿದ್ದೀರಿ, ಉಳಿದ ಹಣ ಎಲ್ಲಿ ಹೋಗುತ್ತಿದೆ ಎಂಬ ಬಗ್ಗೆ ಪ್ರಶ್ನೆ ಮಾಡಿ’ ಎಂದೂ ಶಾಸಕರಿಗೆ ನಿರ್ದೇಶನ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಜಾವಾಣಿ ವಾರ್ತೆ</p>.<p><strong>ಬೆಂಗಳೂರು</strong>: ‘ವಿಧಾನ ಮಂಡಲ ಅಧಿವೇಶನದಲ್ಲಿ ಜನಪರ ವಿಷಯಗಳ ಬಗ್ಗೆ ಚರ್ಚಿಸಬೇಕು. ಸರ್ಕಾರದ ವೈಫಲ್ಯ ಚರ್ಚಿಸಲು ಆದ್ಯತೆ ನೀಡಬೇಕು’ ಎಂದು ತಮ್ಮ ಪಕ್ಷದ ಶಾಸಕರಿಗೆ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷರೂ ಆಗಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸೂಚನೆ ನೀಡಿದರು.</p>.<p>ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ.ಸುರೇಶ್ ಬಾಬು ಅಧ್ಯಕ್ಷತೆಯಲ್ಲಿ ಭಾನುವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಅಧಿವೇಶನದಲ್ಲಿ ಅನುಸರಿಸಬೇಕಾದ ಕಾರ್ಯತಂತ್ರದ ಕುರಿತು ಸಲಹೆ ನೀಡಿದರು.</p>.<p>‘ದಾಖಲೆಗಳನ್ನು ಆಧರಿಸಿ ಮಾತನಾಡಬೇಕು. ಕಲಾಪದ ಸಮಯ ಸದ್ಬಳಕೆ ಮಾಡಿಕೊಳ್ಳಬೇಕು. ಮಿತ್ರ ಪಕ್ಷವಾದ ಬಿಜೆಪಿಯ ನಾಯಕರ ಜತೆ ಈಗಾಗಲೇ ಚರ್ಚೆ ನಡೆಸಲಾಗಿದೆ. ಉಭಯ ಸದನಗಳಲ್ಲಿ ಪರಸ್ಪರ ಒಮ್ಮತದಿಂದ ಸರ್ಕಾರದ ವಿರುದ್ಧ ಹೋರಾಟ ಮಾಡಬೇಕು’ ಎಂದು ಸಲಹೆ ನೀಡಿದರು.</p>.<p>‘ಕಾಂಗ್ರೆಸ್ ಸರ್ಕಾರವು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದಕ್ಕಿಂತ ದುರ್ಬಳಕೆ ಮಾಡಿಕೊಂಡು ರಾಜಕೀಯ ಲಾಭ ಮಾಡಿಕೊಂಡಿದ್ದೇ ಹೆಚ್ಚು. ಗೃಹಲಕ್ಷ್ಮಿ ಯೋಜನೆಯ ಹಣವನ್ನು ಬಾಕಿ ಇಟ್ಟುಕೊಂಡು ಯಾವುದಾದರೂ ಚುನಾವಣೆ ಬಂದಾಗ ಒಮ್ಮೆಲೆ ಖಾತೆಗಳಿಗೆ ಜಮೆ ಮಾಡಲಾಗುತ್ತಿದೆ. ಈ ವಿಷಯವನ್ನು ಕಲಾಪದಲ್ಲಿ ಪರಿಣಾಮಕಾರಿಯಾಗಿ ಚರ್ಚಿಸಬೇಕು’ ಎಂದು ಸೂಚನೆ ನೀಡಿದರು.</p>.<p>‘ಕಲ್ಯಾಣ ಕರ್ನಾಟಕಕ್ಕೆ ₹ 5 ಸಾವಿರ ಅನುದಾನ ನೀಡುವುದಾಗಿ ಹೇಳಿದ್ದ ಸರ್ಕಾರ, ನಯಾಪೈಸೆ ಬಿಡುಗಡೆ ಮಾಡಿಲ್ಲ. ಕಲ್ಯಾಣ ಕರ್ನಾಟಕ ಮತ್ತು ಉತ್ತರ ಕರ್ನಾಟಕಕ್ಕೆ ಮೋಸ ಮಾಡುತ್ತಿದೆ. ಈ ಬಗ್ಗೆಯೂ ಹೋರಾಟ ಮಾಡಬೇಕು. ತೆರಿಗೆ ಎಷ್ಟು ವಸೂಲಿ ಮಾಡಿದ್ದೀರಿ, ಗ್ಯಾರಂಟಿಗಳಿಗೆ ಎಷ್ಟು ಹಣ ಖರ್ಚು ಮಾಡುತ್ತಿದ್ದೀರಿ, ಉಳಿದ ಹಣ ಎಲ್ಲಿ ಹೋಗುತ್ತಿದೆ ಎಂಬ ಬಗ್ಗೆ ಪ್ರಶ್ನೆ ಮಾಡಿ’ ಎಂದೂ ಶಾಸಕರಿಗೆ ನಿರ್ದೇಶನ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>