<p>ಮಂಡ್ಯ: ‘ಸಿ.ಎಂ ಪ್ರಾಸಿಕ್ಯೂಶನ್ ಕುರಿತು ಪ್ರತಿಕ್ರಿಯಿಸುವುದಿಲ್ಲ. ಕಾನೂನು ಬಾಹಿರ ಚಟುವಟಿಕೆ ಮಾಡಿದ್ದರೆ, ನ್ಯಾಯಾಲಯ ತೀರ್ಪು ಕೊಡುತ್ತದೆ’ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು.</p><p>ಆದಿಚುಂಚನಗಿರಿ ಕ್ಷೇತ್ರದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿ, ‘ಬಿಜೆಪಿ ಹಮ್ಮಿಕೊಂಡಿದ್ದ ಮೈಸೂರು ಪಾದಯಾತ್ರೆಗೆ ನಾನೂ ಹೋಗಿದ್ದೆ, ಜನರನ್ನು ಜಾಗೃತರನ್ನಾಗಿಸುವ ಕೆಲಸ ಮಾಡಿದ್ದೇನೆ. ನನ್ನ ನೈತಿಕತೆ ಏನು ಅನ್ನೋದು ಸಾಬೀತಾಗಲಿ. ಯಾವುದೇ ತೀರ್ಮಾನವಾಗದಿ<br>ದ್ದರೂ ನನ್ನನ್ನು ಒಂದು ಪ್ರಕರಣದಲ್ಲಿ ಆರೋಪಿಯಾಗಿಸುತ್ತಿದ್ದಾರೆ. ಅವೆಲ್ಲಾ ಮುಗಿಯಲಿ, ನಂತರ ಮಾತನಾಡುತ್ತೇನೆ’ ಎಂದರು.</p><p>‘ನನ್ನ ವಿರುದ್ಧ ಷಡ್ಯಂತ್ರ ನಡೆಯುತ್ತಿರುವ ಬಗ್ಗೆ ಇನ್ನೂ ಅನುಮಾನವಿದೆ. ನಾನು ಕೇಂದ್ರ ಸಚಿವನಾಗಿರುವುದನ್ನು ಕೆಲವರಿಗೆ ಸಹಿಸಲಾಗುತ್ತಿಲ್ಲ. ನಾಲ್ಕೈದು ಮಂದಿ ಬೀಡಾಡಿ ಮಂತ್ರಿಗಳು ಆರೋಪ ಮಾಡಿದ್ದು, ಅವರಿಗೆ ಉತ್ತರ ಕೊಡುವ ಅಗತ್ಯವಿಲ್ಲ’ ಎಂದರು.</p><p><strong>ಸಿ.ಎಂ ರಾಜೀನಾಮೆ ನೀಡಲಿ: ‘ಹೈಕೋರ್ಟ್ ಸತ್ಯ ಎತ್ತಿ ಹಿಡಿದಿದ್ದು, ಆದೇಶ ಸ್ವಾಗತಿಸಿಸುತ್ತೇವೆ. ಪಾರದರ್ಶಕ ತನಿಖೆ ನಡೆಯಲಿ. ಸಿ.ಎಂ ಕೈವಾಡ, ಅಧಿಕಾರ ದುರ್ಬಳಕೆ ಸ್ಪಷ್ಟವಾಗಿದೆ. ಸಿದ್ದರಾಮಯ್ಯ ರಾಜೀನಾಮೆಗೆ ಜನ ಆಗ್ರಹಿಸುತ್ತಿದ್ದಾರೆ’ ಎಂದು ಶಾಸಕ ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು.</strong></p>.ಮುಡಾ ಪ್ರಕರಣ: ಸಿದ್ದರಾಮಯ್ಯ ವಿರುದ್ಧ ತನಿಖೆಗೆ ದಾರಿ; ಮೇಲ್ಮನವಿಗೆ ತಯಾರಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಡ್ಯ: ‘ಸಿ.ಎಂ ಪ್ರಾಸಿಕ್ಯೂಶನ್ ಕುರಿತು ಪ್ರತಿಕ್ರಿಯಿಸುವುದಿಲ್ಲ. ಕಾನೂನು ಬಾಹಿರ ಚಟುವಟಿಕೆ ಮಾಡಿದ್ದರೆ, ನ್ಯಾಯಾಲಯ ತೀರ್ಪು ಕೊಡುತ್ತದೆ’ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು.</p><p>ಆದಿಚುಂಚನಗಿರಿ ಕ್ಷೇತ್ರದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿ, ‘ಬಿಜೆಪಿ ಹಮ್ಮಿಕೊಂಡಿದ್ದ ಮೈಸೂರು ಪಾದಯಾತ್ರೆಗೆ ನಾನೂ ಹೋಗಿದ್ದೆ, ಜನರನ್ನು ಜಾಗೃತರನ್ನಾಗಿಸುವ ಕೆಲಸ ಮಾಡಿದ್ದೇನೆ. ನನ್ನ ನೈತಿಕತೆ ಏನು ಅನ್ನೋದು ಸಾಬೀತಾಗಲಿ. ಯಾವುದೇ ತೀರ್ಮಾನವಾಗದಿ<br>ದ್ದರೂ ನನ್ನನ್ನು ಒಂದು ಪ್ರಕರಣದಲ್ಲಿ ಆರೋಪಿಯಾಗಿಸುತ್ತಿದ್ದಾರೆ. ಅವೆಲ್ಲಾ ಮುಗಿಯಲಿ, ನಂತರ ಮಾತನಾಡುತ್ತೇನೆ’ ಎಂದರು.</p><p>‘ನನ್ನ ವಿರುದ್ಧ ಷಡ್ಯಂತ್ರ ನಡೆಯುತ್ತಿರುವ ಬಗ್ಗೆ ಇನ್ನೂ ಅನುಮಾನವಿದೆ. ನಾನು ಕೇಂದ್ರ ಸಚಿವನಾಗಿರುವುದನ್ನು ಕೆಲವರಿಗೆ ಸಹಿಸಲಾಗುತ್ತಿಲ್ಲ. ನಾಲ್ಕೈದು ಮಂದಿ ಬೀಡಾಡಿ ಮಂತ್ರಿಗಳು ಆರೋಪ ಮಾಡಿದ್ದು, ಅವರಿಗೆ ಉತ್ತರ ಕೊಡುವ ಅಗತ್ಯವಿಲ್ಲ’ ಎಂದರು.</p><p><strong>ಸಿ.ಎಂ ರಾಜೀನಾಮೆ ನೀಡಲಿ: ‘ಹೈಕೋರ್ಟ್ ಸತ್ಯ ಎತ್ತಿ ಹಿಡಿದಿದ್ದು, ಆದೇಶ ಸ್ವಾಗತಿಸಿಸುತ್ತೇವೆ. ಪಾರದರ್ಶಕ ತನಿಖೆ ನಡೆಯಲಿ. ಸಿ.ಎಂ ಕೈವಾಡ, ಅಧಿಕಾರ ದುರ್ಬಳಕೆ ಸ್ಪಷ್ಟವಾಗಿದೆ. ಸಿದ್ದರಾಮಯ್ಯ ರಾಜೀನಾಮೆಗೆ ಜನ ಆಗ್ರಹಿಸುತ್ತಿದ್ದಾರೆ’ ಎಂದು ಶಾಸಕ ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು.</strong></p>.ಮುಡಾ ಪ್ರಕರಣ: ಸಿದ್ದರಾಮಯ್ಯ ವಿರುದ್ಧ ತನಿಖೆಗೆ ದಾರಿ; ಮೇಲ್ಮನವಿಗೆ ತಯಾರಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>