‘ದೆಹಲಿಗೆ ಹೋಗಿ ಸಚಿವನಾಗುವುದಕ್ಕಿಂತ ರಾಜ್ಯದ ಸಮಸ್ಯೆಗೆ ಪರಿಹಾರ ದೊರಕಿಸಲು ಪ್ರಯತ್ನಿಸುವೆ. ನೀರಾವರಿ ವಿಷಯದಲ್ಲಿ ನ್ಯಾಯ ಪಡೆಯಬೇಕು. ಕೇಂದ್ರ ಸರ್ಕಾರಕ್ಕೆ ಯಾವ ಮುಜುಗರವನ್ನೂ ನಾನು ಮಾಡುವುದಿಲ್ಲ. ಮೈತ್ರಿ ಧರ್ಮ ಪಾಲನೆ ಮಾಡುತ್ತೇನೆ. ರಾಜ್ಯದ ಎಲ್ಲಾ ಸಂಸದರೂ ಒಟ್ಟಾಗಿ ಕೆಲಸ ಮಾಡುತ್ತೇವೆ. ಸಮಸ್ಯೆಗೆ ಪರಿಹಾರ ಕಂಡುಕೊಳ್ಳುತ್ತೇವೆ’ ಎಂದು ಹೇಳಿದರು.