<p><strong>ಮೈಸೂರು:</strong> ‘ಅಡಗೂರು ಎಚ್.ವಿಶ್ವನಾಥ್ ನಮ್ಮ ಗುರುಗಳು. ಯಾವ ಕಾರಣಕ್ಕೂ ಅವರನ್ನು ಕೈ ಬಿಡುವ ಪ್ರಶ್ನೆಯೇ ಇಲ್ಲ’ ಎಂದು ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ ಮಂಗಳವಾರ ಇಲ್ಲಿ ಹೇಳಿದರು.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಮ್ಮ ಗುಂಪಿಗೆ ವಿಶ್ವನಾಥ್ ಗುರುಗಳು. ಮುಂಬೈನಲ್ಲಿದ್ದಾಗ ನಮಗೆಲ್ಲಾ ಸದನದ ನಡಾವಳಿಗಳ ಬಗ್ಗೆ ಹೇಳುತ್ತಿದ್ದರು. ಖಾತೆಗೆ ಪಟ್ಟು ಹಿಡಿಯುವಷ್ಟು ದೊಡ್ಡವ ನಾನಲ್ಲ. ಯಡಿಯೂರಪ್ಪ ಎಲ್ಲ ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಸಿದ್ದರಾಮಯ್ಯ ನಮ್ಮ ಆಪ್ತರು ಅನ್ನೋದ್ರಲ್ಲಿ ಅನುಮಾನವೇ ಇಲ್ಲ’ ಎಂದರು.</p>.<p>‘ನಾವೆಲ್ಲಾ ಒಟ್ಟಾಗಿದ್ದೇವೆ. ಗೆದ್ದವರು ಸಭೆ ಸೇರಿ ಸೋತವರ ಭವಿಷ್ಯದಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತೇವೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.</p>.<p class="Subhead"><strong>ಯಡಿಯೂರಪ್ಪ ಮಾತು ತಪ್ಪಲ್ಲ:</strong> ‘ಯಡಿಯೂರಪ್ಪ ಕೊಟ್ಟ ಮಾತು ತಪ್ಪುವುದಿಲ್ಲ. ಸೋಲಿಗೆ ಜನರನ್ನು ದೂರುವುದಿಲ್ಲ. ಶುದ್ಧ ರಾಜಕಾರಣಕ್ಕಾಗಿ ಶಾಸಕ ಸ್ಥಾನ ತ್ಯಾಗ ಮಾಡಿದ್ದೇನೆ. ಸದೃಢ ಸರ್ಕಾರ ತಂದಿರುವ ಖುಷಿ ನನಗಿದೆ’ ಎಂದು ಹುಣಸೂರು ಉಪಚುನಾವಣೆಯಲ್ಲಿ ಪರಾಭವಗೊಂಡ ಬಿಜೆಪಿ ಅಭ್ಯರ್ಥಿ ಅಡಗೂರು ಎಚ್.ವಿಶ್ವನಾಥ್ ಅವರು ಹೇಳಿದರು.</p>.<p>‘ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ, ಸಿದ್ದರಾಮಯ್ಯ, ಎಚ್.ಡಿ.ಕುಮಾರ ಸ್ವಾಮಿ ಒಂದಾಗಿ ನನ್ನನ್ನು ಸೋಲಿಸಿದ್ದಾರೆ. ನೀವೇ ನೋಡಿ, ಭಗವಂತ ಎಲ್ಲೋ ಒಂದು ಕಡೆ ತೋರಿಸ್ತಾನೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಅಡಗೂರು ಎಚ್.ವಿಶ್ವನಾಥ್ ನಮ್ಮ ಗುರುಗಳು. ಯಾವ ಕಾರಣಕ್ಕೂ ಅವರನ್ನು ಕೈ ಬಿಡುವ ಪ್ರಶ್ನೆಯೇ ಇಲ್ಲ’ ಎಂದು ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ ಮಂಗಳವಾರ ಇಲ್ಲಿ ಹೇಳಿದರು.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಮ್ಮ ಗುಂಪಿಗೆ ವಿಶ್ವನಾಥ್ ಗುರುಗಳು. ಮುಂಬೈನಲ್ಲಿದ್ದಾಗ ನಮಗೆಲ್ಲಾ ಸದನದ ನಡಾವಳಿಗಳ ಬಗ್ಗೆ ಹೇಳುತ್ತಿದ್ದರು. ಖಾತೆಗೆ ಪಟ್ಟು ಹಿಡಿಯುವಷ್ಟು ದೊಡ್ಡವ ನಾನಲ್ಲ. ಯಡಿಯೂರಪ್ಪ ಎಲ್ಲ ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಸಿದ್ದರಾಮಯ್ಯ ನಮ್ಮ ಆಪ್ತರು ಅನ್ನೋದ್ರಲ್ಲಿ ಅನುಮಾನವೇ ಇಲ್ಲ’ ಎಂದರು.</p>.<p>‘ನಾವೆಲ್ಲಾ ಒಟ್ಟಾಗಿದ್ದೇವೆ. ಗೆದ್ದವರು ಸಭೆ ಸೇರಿ ಸೋತವರ ಭವಿಷ್ಯದಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತೇವೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.</p>.<p class="Subhead"><strong>ಯಡಿಯೂರಪ್ಪ ಮಾತು ತಪ್ಪಲ್ಲ:</strong> ‘ಯಡಿಯೂರಪ್ಪ ಕೊಟ್ಟ ಮಾತು ತಪ್ಪುವುದಿಲ್ಲ. ಸೋಲಿಗೆ ಜನರನ್ನು ದೂರುವುದಿಲ್ಲ. ಶುದ್ಧ ರಾಜಕಾರಣಕ್ಕಾಗಿ ಶಾಸಕ ಸ್ಥಾನ ತ್ಯಾಗ ಮಾಡಿದ್ದೇನೆ. ಸದೃಢ ಸರ್ಕಾರ ತಂದಿರುವ ಖುಷಿ ನನಗಿದೆ’ ಎಂದು ಹುಣಸೂರು ಉಪಚುನಾವಣೆಯಲ್ಲಿ ಪರಾಭವಗೊಂಡ ಬಿಜೆಪಿ ಅಭ್ಯರ್ಥಿ ಅಡಗೂರು ಎಚ್.ವಿಶ್ವನಾಥ್ ಅವರು ಹೇಳಿದರು.</p>.<p>‘ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ, ಸಿದ್ದರಾಮಯ್ಯ, ಎಚ್.ಡಿ.ಕುಮಾರ ಸ್ವಾಮಿ ಒಂದಾಗಿ ನನ್ನನ್ನು ಸೋಲಿಸಿದ್ದಾರೆ. ನೀವೇ ನೋಡಿ, ಭಗವಂತ ಎಲ್ಲೋ ಒಂದು ಕಡೆ ತೋರಿಸ್ತಾನೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>