ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರಿ ಕ್ಷೌರದಂಗಡಿ ಪ್ರಾರಂಭಕ್ಕೆ ಒತ್ತಾಯ

Last Updated 22 ನವೆಂಬರ್ 2020, 20:33 IST
ಅಕ್ಷರ ಗಾತ್ರ

ಬೆಂಗಳೂರು: ‘ಗ್ರಾಮಪಂಚಾಯಿತಿ ಮಟ್ಟದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಾದ ಸರ್ಕಾರಿ ಕ್ಷೌರದಂಗಡಿಗಳನ್ನು ತೆರೆದು, ತುಳಿತಕ್ಕೆ ಒಳಗಾಗಿರುವ ಈ ವರ್ಗದ ಜನರ ಹಿತಾಸಕ್ತಿ ಕಾಪಾಡಬೇಕು’ ಎಂದು ಕರ್ನಾಟಕ ರಾಜ್ಯ ಕ್ಷೌರಿಕರ ಮೀಸಲಾತಿ ಒಕ್ಕೂಟದ ಅಧ್ಯಕ್ಷ ಎಂ.ಬಿ. ಶಿವಕುಮಾರ್ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದ್ದಾರೆ.

‘ಸ್ವಾತಂತ್ರ್ಯ ಪೂರ್ವದಿಂದಲೂ ದಲಿತರು ಮತ್ತು ಇತರೆ ಹಿಂದುಳಿದ ವರ್ಗದವರು ಮೇಲ್ವರ್ಗದ ದೌರ್ಜನ್ಯಕ್ಕೆ ತುತ್ತಾಗುತ್ತಾ ಬಂದಿದ್ದಾರೆ. ಅವರಿಗೆ ಸಮಾಜದಲ್ಲಿ ಗೌರವ ಇಲ್ಲದಂತಾಗಿದ್ದು, ಕ್ಷೌರ ಮಾಡಲೂ ನಿರಾಕರಿಸುವಂತಹ ಘಟನೆಗಳು ಈಗಲೂ ನಡೆಯುತ್ತಿವೆ. ಗ್ರಾಮಾಂತರ ಪ್ರದೇಶದಲ್ಲಿ ದಲಿತರಿಗೆ ಕ್ಷೌರ ಮಾಡಲು ನಿರಾಕರಿಸುತ್ತಿರುವುದು ವಿಷಾದನೀಯ’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT