ಬೆಂಗಳೂರು: ‘ಗ್ರಾಮಪಂಚಾಯಿತಿ ಮಟ್ಟದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಾದ ಸರ್ಕಾರಿ ಕ್ಷೌರದಂಗಡಿಗಳನ್ನು ತೆರೆದು, ತುಳಿತಕ್ಕೆ ಒಳಗಾಗಿರುವ ಈ ವರ್ಗದ ಜನರ ಹಿತಾಸಕ್ತಿ ಕಾಪಾಡಬೇಕು’ ಎಂದು ಕರ್ನಾಟಕ ರಾಜ್ಯ ಕ್ಷೌರಿಕರ ಮೀಸಲಾತಿ ಒಕ್ಕೂಟದ ಅಧ್ಯಕ್ಷ ಎಂ.ಬಿ. ಶಿವಕುಮಾರ್ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದ್ದಾರೆ.