<p><strong>ಬೆಂಗಳೂರು:</strong> ಭಾರತದ ವೈಮಾನಿಕ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿರುವ ಹಿಂದೂಸ್ಥಾನ ಏರೋನಾಟಿಕ್ಸ್ ಲಿಮಿಟೆಡ್(ಎಚ್ಎಎಲ್), ತನ್ನ ಸಂಸ್ಥಾಪಕರಿಗೆ 86 ವರ್ಷಗಳ ನಂತರ ಕೊನೆಗೂ ಗೌರವ ಸಲ್ಲಿಸಿದೆ. </p><p>ಡಿ.23ರಂದು ಬೆಂಗಳೂರಿನಲ್ಲಿ ಜರುಗಿದ ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ನ 86ನೇ ಸಂಸ್ಥಾಪನಾ ದಿನದಂದು ಜಯಚಾಮರಾಜೇಂದ್ರ ಒಡೆಯರ್ ಅವರ ಪ್ರತಿಮೆಯನ್ನು ಅನಾವರಣಗೊಳಿಸಿ ಗೌರವಿಸಲಾಗಿದೆ.</p><p>ಒಡೆಯರ್ ಅವರ ವಂಶಸ್ಥರಾದ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಎಚ್ಎಎಲ್ ಮ್ಯಾನೇಜ್ಮೆಂಟ್ ಅಕಾಡೆಮಿ(ಎಚ್ಎಂಎ) ನೂತನ ಕ್ಯಾಂಪಸ್ನಲ್ಲಿ ಪ್ರತಿಮೆಯನ್ನು ಅನಾವರಣಗೊಳಿಸಿದರು.</p>.<p><strong>ಎಚ್ಎಎಲ್ ಮತ್ತು ಜಯಚಾಮರಾಜೇಂದ್ರ ಒಡೆಯರ್:</strong></p><p>ಎರಡನೇ ವಿಶ್ವಯುದ್ಧದ ಸಂದರ್ಭದಲ್ಲಿ ಮೈಸೂರು ಸಂಸ್ಥಾನದ ರಾಜನ ಪಟ್ಟಕ್ಕೇರಿದ ಜಯಚಾಮರಾಜೇಂದ್ರ ಒಡೆಯರ್ ಅವರು ದೂರದೃಷ್ಟಿಯುಳ್ಳ ನಾಯಕರಾಗಿದ್ದರು. ಕೇವಲ 21 ವರ್ಷವಿದ್ದಾಗಲೇ ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ನ ಸ್ಥಾಪಿಸಿದ್ದರು. </p><p>ಮೈಸೂರಿನ ಕೊನೆಯ ಮಹಾರಾಜ ಎಂದೇ ಖ್ಯಾತರಾಗಿರುವ ಜಯಚಾಮರಾಜೇಂದ್ರ ಒಡೆಯರ್ ಅವರು ಎಚ್ಎಎಲ್ ಸ್ಥಾಪನೆಗೆ ಅಗತ್ಯವಾಗಿದ್ದ 700 ಎಕರೆ ಭೂಮಿ, ₹25 ಲಕ್ಷ ಅನುದಾನ ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಟ್ಟಿದ್ದರು. </p><p>ಎಚ್ಎಎಲ್ ಸ್ಥಾಪನೆಯ ಒಂಬತ್ತು ದಶಕಗಳ ಬಳಿಕ ಅವರ ಪ್ರತಿಮೆಯನ್ನು ಸ್ಥಾಪಿಸುವ ಮೂಲಕ, ಕೊನೆಗೂ ಎಚ್ಎಎಲ್ ಜಯಚಾಮರಾಜೇಂದ್ರ ಒಡೆಯರ್ ಗೌರವ ಸೂಚಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಭಾರತದ ವೈಮಾನಿಕ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿರುವ ಹಿಂದೂಸ್ಥಾನ ಏರೋನಾಟಿಕ್ಸ್ ಲಿಮಿಟೆಡ್(ಎಚ್ಎಎಲ್), ತನ್ನ ಸಂಸ್ಥಾಪಕರಿಗೆ 86 ವರ್ಷಗಳ ನಂತರ ಕೊನೆಗೂ ಗೌರವ ಸಲ್ಲಿಸಿದೆ. </p><p>ಡಿ.23ರಂದು ಬೆಂಗಳೂರಿನಲ್ಲಿ ಜರುಗಿದ ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ನ 86ನೇ ಸಂಸ್ಥಾಪನಾ ದಿನದಂದು ಜಯಚಾಮರಾಜೇಂದ್ರ ಒಡೆಯರ್ ಅವರ ಪ್ರತಿಮೆಯನ್ನು ಅನಾವರಣಗೊಳಿಸಿ ಗೌರವಿಸಲಾಗಿದೆ.</p><p>ಒಡೆಯರ್ ಅವರ ವಂಶಸ್ಥರಾದ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಎಚ್ಎಎಲ್ ಮ್ಯಾನೇಜ್ಮೆಂಟ್ ಅಕಾಡೆಮಿ(ಎಚ್ಎಂಎ) ನೂತನ ಕ್ಯಾಂಪಸ್ನಲ್ಲಿ ಪ್ರತಿಮೆಯನ್ನು ಅನಾವರಣಗೊಳಿಸಿದರು.</p>.<p><strong>ಎಚ್ಎಎಲ್ ಮತ್ತು ಜಯಚಾಮರಾಜೇಂದ್ರ ಒಡೆಯರ್:</strong></p><p>ಎರಡನೇ ವಿಶ್ವಯುದ್ಧದ ಸಂದರ್ಭದಲ್ಲಿ ಮೈಸೂರು ಸಂಸ್ಥಾನದ ರಾಜನ ಪಟ್ಟಕ್ಕೇರಿದ ಜಯಚಾಮರಾಜೇಂದ್ರ ಒಡೆಯರ್ ಅವರು ದೂರದೃಷ್ಟಿಯುಳ್ಳ ನಾಯಕರಾಗಿದ್ದರು. ಕೇವಲ 21 ವರ್ಷವಿದ್ದಾಗಲೇ ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ನ ಸ್ಥಾಪಿಸಿದ್ದರು. </p><p>ಮೈಸೂರಿನ ಕೊನೆಯ ಮಹಾರಾಜ ಎಂದೇ ಖ್ಯಾತರಾಗಿರುವ ಜಯಚಾಮರಾಜೇಂದ್ರ ಒಡೆಯರ್ ಅವರು ಎಚ್ಎಎಲ್ ಸ್ಥಾಪನೆಗೆ ಅಗತ್ಯವಾಗಿದ್ದ 700 ಎಕರೆ ಭೂಮಿ, ₹25 ಲಕ್ಷ ಅನುದಾನ ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಟ್ಟಿದ್ದರು. </p><p>ಎಚ್ಎಎಲ್ ಸ್ಥಾಪನೆಯ ಒಂಬತ್ತು ದಶಕಗಳ ಬಳಿಕ ಅವರ ಪ್ರತಿಮೆಯನ್ನು ಸ್ಥಾಪಿಸುವ ಮೂಲಕ, ಕೊನೆಗೂ ಎಚ್ಎಎಲ್ ಜಯಚಾಮರಾಜೇಂದ್ರ ಒಡೆಯರ್ ಗೌರವ ಸೂಚಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>