<p><strong>ನವದೆಹಲಿ</strong>: ರಾಜ್ಯದ ಬಾಕಿ ಇರುವ ಯೋಜನೆಗಳಿಗೆ ಕೇಂದ್ರ ಸರ್ಕಾರದ ನೆರವು ಕೋರುವಾಗ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅರೆಬೆಂದ ಮಾಹಿತಿ ನೀಡುತ್ತಿದೆ ಎಂದು ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರ ಸಚಿವರು ವಾಗ್ದಾಳಿ ನಡೆಸಿದರು. </p>.<p>ಸಿದ್ದರಾಮಯ್ಯ ಅವರು ಗುರುವಾರ ರಾತ್ರಿ ರಾಜ್ಯದ ಕೇಂದ್ರ ಸಚಿವರು ಮತ್ತು ಸಂಸದರೊಂದಿಗೆ ಸಭೆ ನಡೆಸಿ, ಕೇಂದ್ರದಲ್ಲಿ ಬಾಕಿ ಇರುವ ರಾಜ್ಯ ಯೋಜನೆಗಳಿಗೆ ಶೀಘ್ರ ಅನುಮತಿ ಪಡೆಯಲು ನೆರವು ಕೋರಿದರು.</p>.<p>ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ‘ರಾಜ್ಯಕ್ಕೆ ಅನುದಾನ ನೀಡುವ ವಿಷಯದಲ್ಲಿ ಕೇಂದ್ರ ಮಲತಾಯಿ ಧೋರಣೆ ತಳೆದಿಲ್ಲ. ಬದಲಿಗೆ ಅದು ಬಯಸಿದ್ದಕ್ಕಿಂತ ಹೆಚ್ಚಿನದನ್ನು ನೀಡಿದೆ ಎಂದು ಸ್ಪಷ್ಟವಾಗಿ ಹೇಳಿದರು.</p>.<p>ರಾಜ್ಯ ನಾಯಕರು ಸತ್ಯಾಂಶಗಳನ್ನು ತಿರುಚಿ ತಪ್ಪುದಾರಿಗೆಳೆಯುವ ಹೇಳಿಕೆ ನೀಡುತ್ತಿದ್ದಾರೆ ಎಂದು ಟೀಕಿಸಿದ ನಿರ್ಮಲಾ, ಕರ್ನಾಟಕಕ್ಕೆ ಜಿಎಸ್ಟಿ ಬಾಕಿ ಉಳಿಸಿಕೊಂಡಿಲ್ಲ ಎಂದರು. </p>.<p>ಮೇಕೆದಾಟು ಸೇರಿದಂತೆ ನ್ಯಾಯಾಲಯದಲ್ಲಿ ಯಾವುದೇ ಬಾಕಿ ಉಳಿದಿರುವ ಯೋಜನೆಗಳಿಗೆ ರಾಜ್ಯ ಸರ್ಕಾರ ಕೇಂದ್ರವನ್ನು ದೂಷಿಸಬಾರದು ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.</p>.<p>ರಾಜ್ಯ ಸರ್ಕಾರವು ಕೇಂದ್ರದ ವಿರುದ್ಧ ಪ್ರತಿಭಟಿಸುವ ಬದಲು ಒಕ್ಕೂಟ ವ್ಯವಸ್ಥೆಯನ್ನು ಗೌರವಿಸಿ ಕೇಂದ್ರ ಸರ್ಕಾರದೊಂದಿಗೆ ಕೆಲಸ ಮಾಡಬೇಕು ಎಂದು ಕೇಂದ್ರ ಉಕ್ಕು ಸಚಿವ ಎಚ್. ಡಿ. ಕುಮಾರಸ್ವಾಮಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ರಾಜ್ಯದ ಬಾಕಿ ಇರುವ ಯೋಜನೆಗಳಿಗೆ ಕೇಂದ್ರ ಸರ್ಕಾರದ ನೆರವು ಕೋರುವಾಗ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅರೆಬೆಂದ ಮಾಹಿತಿ ನೀಡುತ್ತಿದೆ ಎಂದು ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರ ಸಚಿವರು ವಾಗ್ದಾಳಿ ನಡೆಸಿದರು. </p>.<p>ಸಿದ್ದರಾಮಯ್ಯ ಅವರು ಗುರುವಾರ ರಾತ್ರಿ ರಾಜ್ಯದ ಕೇಂದ್ರ ಸಚಿವರು ಮತ್ತು ಸಂಸದರೊಂದಿಗೆ ಸಭೆ ನಡೆಸಿ, ಕೇಂದ್ರದಲ್ಲಿ ಬಾಕಿ ಇರುವ ರಾಜ್ಯ ಯೋಜನೆಗಳಿಗೆ ಶೀಘ್ರ ಅನುಮತಿ ಪಡೆಯಲು ನೆರವು ಕೋರಿದರು.</p>.<p>ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ‘ರಾಜ್ಯಕ್ಕೆ ಅನುದಾನ ನೀಡುವ ವಿಷಯದಲ್ಲಿ ಕೇಂದ್ರ ಮಲತಾಯಿ ಧೋರಣೆ ತಳೆದಿಲ್ಲ. ಬದಲಿಗೆ ಅದು ಬಯಸಿದ್ದಕ್ಕಿಂತ ಹೆಚ್ಚಿನದನ್ನು ನೀಡಿದೆ ಎಂದು ಸ್ಪಷ್ಟವಾಗಿ ಹೇಳಿದರು.</p>.<p>ರಾಜ್ಯ ನಾಯಕರು ಸತ್ಯಾಂಶಗಳನ್ನು ತಿರುಚಿ ತಪ್ಪುದಾರಿಗೆಳೆಯುವ ಹೇಳಿಕೆ ನೀಡುತ್ತಿದ್ದಾರೆ ಎಂದು ಟೀಕಿಸಿದ ನಿರ್ಮಲಾ, ಕರ್ನಾಟಕಕ್ಕೆ ಜಿಎಸ್ಟಿ ಬಾಕಿ ಉಳಿಸಿಕೊಂಡಿಲ್ಲ ಎಂದರು. </p>.<p>ಮೇಕೆದಾಟು ಸೇರಿದಂತೆ ನ್ಯಾಯಾಲಯದಲ್ಲಿ ಯಾವುದೇ ಬಾಕಿ ಉಳಿದಿರುವ ಯೋಜನೆಗಳಿಗೆ ರಾಜ್ಯ ಸರ್ಕಾರ ಕೇಂದ್ರವನ್ನು ದೂಷಿಸಬಾರದು ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.</p>.<p>ರಾಜ್ಯ ಸರ್ಕಾರವು ಕೇಂದ್ರದ ವಿರುದ್ಧ ಪ್ರತಿಭಟಿಸುವ ಬದಲು ಒಕ್ಕೂಟ ವ್ಯವಸ್ಥೆಯನ್ನು ಗೌರವಿಸಿ ಕೇಂದ್ರ ಸರ್ಕಾರದೊಂದಿಗೆ ಕೆಲಸ ಮಾಡಬೇಕು ಎಂದು ಕೇಂದ್ರ ಉಕ್ಕು ಸಚಿವ ಎಚ್. ಡಿ. ಕುಮಾರಸ್ವಾಮಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>