<p>ಬೆಂಗಳೂರು: ಒಕ್ಕಲಿಗ ಸಮುದಾಯದ ಉಪಪಂಗಡ ಹಳ್ಳಿಕಾರ್ ಒಕ್ಕಲಿಗರನ್ನು ಹಿಂದುಳಿದ ವರ್ಗದ 3–ಎ ಪ್ರವರ್ಗದಿಂದ, ಪ್ರವರ್ಗ–1 ಕ್ಕೆ ಸೇರಿಸುವ ಬಗ್ಗೆ ಮುಖ್ಯಮಂತ್ರಿ ಜತೆ ಚರ್ಚಿಸಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.</p>.<p>ಆರ್ಎಂಆರ್ ಫೌಂಡೇಷನ್ ಟ್ರಸ್ಟ್ ಭಾನುವಾರ ಏರ್ಪಡಿಸಿದ್ದ ಹಳ್ಳಿಕಾರ್ ಸಮುದಾಯದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಈ ವಿಷಯ ತಿಳಿಸಿದರು.</p>.<p>ಸಣ್ಣ– ಸಣ್ಣ ಸಮುದಾಯಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶೇಷ ಕಾಳಜಿ ಹೊಂದಿದ್ದು, ಮುಖ್ಯವಾಹಿನಿಗೆ ತರಲು ಶ್ರಮಿಸುತ್ತಿದ್ದಾರೆ. ಹಳ್ಳಿಕಾರ್ ಸಮುದಾಯವನ್ನು ಪ್ರವರ್ಗ–1 ಅಡಿ ತರಬೇಕು ಎಂಬ ಮನವಿಯನ್ನು ಮುಖ್ಯಮಂತ್ರಿಯವರ ಗಮನಕ್ಕೆ ತರಲಾಗುವುದು ಎಂದರು.</p>.<p>ಹಳ್ಳಿಕಾರ್ ತಳಿಯ ಹಸುಗಳನ್ನು ಸಮಾಜಕ್ಕೆ ಕೊಟ್ಟ ಕೀರ್ತಿ ಹಳ್ಳಿಕಾರ್ ಸಮಾಜದ್ದು, ಮುಂದಿನ ದಿನಗಳಲ್ಲಿ ಈ ಸಮುದಾಯದ ವಿದ್ಯಾರ್ಥಿಗಳು ರಾಜಕೀಯವಾಗಿ, ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ದೊಡ್ಡ ಮಟ್ಟದಲ್ಲಿ ಬೆಳೆಯಲಿ ಎಂದು ಹೇಳಿದರು. </p>.<p>ಕಾರ್ಯಕ್ರಮದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಮಾಜಿ ಸಚಿವ ಎಚ್.ಎಂ.ರೇವಣ್ಣ, ವಿಧಾನಪರಿಷತ್ ಸದಸ್ಯ ಯು.ಬಿ.ವೆಂಕಟೇಶ್, ಮಾಜಿ ಶಾಸಕ ಕೆ.ಚಂದ್ರಶೇಖರ್ ಮುಂತಾದವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಒಕ್ಕಲಿಗ ಸಮುದಾಯದ ಉಪಪಂಗಡ ಹಳ್ಳಿಕಾರ್ ಒಕ್ಕಲಿಗರನ್ನು ಹಿಂದುಳಿದ ವರ್ಗದ 3–ಎ ಪ್ರವರ್ಗದಿಂದ, ಪ್ರವರ್ಗ–1 ಕ್ಕೆ ಸೇರಿಸುವ ಬಗ್ಗೆ ಮುಖ್ಯಮಂತ್ರಿ ಜತೆ ಚರ್ಚಿಸಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.</p>.<p>ಆರ್ಎಂಆರ್ ಫೌಂಡೇಷನ್ ಟ್ರಸ್ಟ್ ಭಾನುವಾರ ಏರ್ಪಡಿಸಿದ್ದ ಹಳ್ಳಿಕಾರ್ ಸಮುದಾಯದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಈ ವಿಷಯ ತಿಳಿಸಿದರು.</p>.<p>ಸಣ್ಣ– ಸಣ್ಣ ಸಮುದಾಯಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶೇಷ ಕಾಳಜಿ ಹೊಂದಿದ್ದು, ಮುಖ್ಯವಾಹಿನಿಗೆ ತರಲು ಶ್ರಮಿಸುತ್ತಿದ್ದಾರೆ. ಹಳ್ಳಿಕಾರ್ ಸಮುದಾಯವನ್ನು ಪ್ರವರ್ಗ–1 ಅಡಿ ತರಬೇಕು ಎಂಬ ಮನವಿಯನ್ನು ಮುಖ್ಯಮಂತ್ರಿಯವರ ಗಮನಕ್ಕೆ ತರಲಾಗುವುದು ಎಂದರು.</p>.<p>ಹಳ್ಳಿಕಾರ್ ತಳಿಯ ಹಸುಗಳನ್ನು ಸಮಾಜಕ್ಕೆ ಕೊಟ್ಟ ಕೀರ್ತಿ ಹಳ್ಳಿಕಾರ್ ಸಮಾಜದ್ದು, ಮುಂದಿನ ದಿನಗಳಲ್ಲಿ ಈ ಸಮುದಾಯದ ವಿದ್ಯಾರ್ಥಿಗಳು ರಾಜಕೀಯವಾಗಿ, ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ದೊಡ್ಡ ಮಟ್ಟದಲ್ಲಿ ಬೆಳೆಯಲಿ ಎಂದು ಹೇಳಿದರು. </p>.<p>ಕಾರ್ಯಕ್ರಮದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಮಾಜಿ ಸಚಿವ ಎಚ್.ಎಂ.ರೇವಣ್ಣ, ವಿಧಾನಪರಿಷತ್ ಸದಸ್ಯ ಯು.ಬಿ.ವೆಂಕಟೇಶ್, ಮಾಜಿ ಶಾಸಕ ಕೆ.ಚಂದ್ರಶೇಖರ್ ಮುಂತಾದವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>