<p>ಹಂಪಾಪುರ: ಎಚ್.ಡಿ.ಕೋಟೆಯಿಂದ ಗದ್ದಿಗೆ ಸಂಪರ್ಕ ಕಲ್ಪಿಸುವ ದಾರಿಯಲ್ಲಿನ ಭೋಗೇಶ್ವರ ಕಾಲೊನಿ ಗ್ರಾಮದಲ್ಲಿ ಅರಣ್ಯ ಇಲಾಖೆಯವರು ಇಟ್ಟಿದ್ದ ಬೋನಿಗೆ ಮೂರು ವರ್ಷದ ಹೆಣ್ಣು ಚಿರತೆ ಸೆರೆಯಾಗಿದೆ.</p>.<p>ಬೆಳಿಗ್ಗೆ ಚಿರತೆ ಬೋನಿಗೆ ಬಿದ್ದಿರುವುದು ರೈತರಿಗೆ ತಿಳಿದಿದ್ದು, ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ನಂತರ ಇಲಾಖೆ ಸಿಬ್ಬಂದಿ, ಚಿರತೆಯನ್ನು ವೈದ್ಯಕೀಯ ತಪಾಸಣೆ ನಡೆಸಿ ನಾಗರಹೊಳೆ ಅರಣ್ಯಕ್ಕೆ ಬಿಟ್ಟಿದ್ದಾರೆ.</p>.<p>ಕಳೆದೊಂದು ತಿಂಗಳಿನಿಂದ ಈ ಭಾಗದ ರೈತರ ಜಮೀನಿನಲ್ಲಿ ದನ, ಕರು,ನಾಯಿ ಬೇಟೆಯಾಡಿ ರೈತರಿಗೆ ಆತಂಕವನ್ನುಂಟು ಮಾಡಿತ್ತು.</p>.<p>ಚಿರತೆಯ ಹಾವಳಿ ಹೆಚ್ಚಾದ ಹಿನ್ನೆಲೆಯಲ್ಲಿ ರೈತರು ವಲಯ ಅರಣ್ಯ ಕಚೇರಿಗೆ ವಿಚಾರ ತಿಳಿಸಿದ್ದರು. ನಂತರ ಗ್ರಾಮದ ಶಿವಲಿಂಗೇಗೌಡ ಎಂಬುವರ ಜಮೀನಿನಲ್ಲಿ ಬೋನು ಇಡಲಾಗಿತ್ತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-37-908565382</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಂಪಾಪುರ: ಎಚ್.ಡಿ.ಕೋಟೆಯಿಂದ ಗದ್ದಿಗೆ ಸಂಪರ್ಕ ಕಲ್ಪಿಸುವ ದಾರಿಯಲ್ಲಿನ ಭೋಗೇಶ್ವರ ಕಾಲೊನಿ ಗ್ರಾಮದಲ್ಲಿ ಅರಣ್ಯ ಇಲಾಖೆಯವರು ಇಟ್ಟಿದ್ದ ಬೋನಿಗೆ ಮೂರು ವರ್ಷದ ಹೆಣ್ಣು ಚಿರತೆ ಸೆರೆಯಾಗಿದೆ.</p>.<p>ಬೆಳಿಗ್ಗೆ ಚಿರತೆ ಬೋನಿಗೆ ಬಿದ್ದಿರುವುದು ರೈತರಿಗೆ ತಿಳಿದಿದ್ದು, ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ನಂತರ ಇಲಾಖೆ ಸಿಬ್ಬಂದಿ, ಚಿರತೆಯನ್ನು ವೈದ್ಯಕೀಯ ತಪಾಸಣೆ ನಡೆಸಿ ನಾಗರಹೊಳೆ ಅರಣ್ಯಕ್ಕೆ ಬಿಟ್ಟಿದ್ದಾರೆ.</p>.<p>ಕಳೆದೊಂದು ತಿಂಗಳಿನಿಂದ ಈ ಭಾಗದ ರೈತರ ಜಮೀನಿನಲ್ಲಿ ದನ, ಕರು,ನಾಯಿ ಬೇಟೆಯಾಡಿ ರೈತರಿಗೆ ಆತಂಕವನ್ನುಂಟು ಮಾಡಿತ್ತು.</p>.<p>ಚಿರತೆಯ ಹಾವಳಿ ಹೆಚ್ಚಾದ ಹಿನ್ನೆಲೆಯಲ್ಲಿ ರೈತರು ವಲಯ ಅರಣ್ಯ ಕಚೇರಿಗೆ ವಿಚಾರ ತಿಳಿಸಿದ್ದರು. ನಂತರ ಗ್ರಾಮದ ಶಿವಲಿಂಗೇಗೌಡ ಎಂಬುವರ ಜಮೀನಿನಲ್ಲಿ ಬೋನು ಇಡಲಾಗಿತ್ತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-37-908565382</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>