‘ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದ ವೇಳೆಅನುಕಂಪ ಆಧಾರದ ಮೇಲೆ ನನಗೆ ರಾಮದುರ್ಗ ತಹಶೀಲ್ದಾರ್ ಕಚೇರಿಯಲ್ಲಿ ಸಹಾಯಕಿ ಕೆಲಸ ಕೊಡಿಸಿದ್ದರು. ಐದು ತಿಂಗಳು ಕೆಲಸ ಮಾಡಿದ್ದೇನೆ. ಆದರೆ, ಕೇವಲ ₹ 10 ಸಾವಿರ ಸಂಬಳವನ್ನಷ್ಟೇ ನೀಡಲಾಗಿದೆ. ಬಳಿಕ ಕೆಲಸಕ್ಕೆ ಬರುವುದು ಬೇಡ ಎನ್ನುತ್ತಿದ್ದಾರೆ. ಕೆಲಸ ಖಾಲಿ ಇಲ್ಲ ಎನ್ನುತ್ತಿದ್ದಾರೆ. ನನಗೆ ನ್ಯಾಯ ಕೊಡಿಸಬೇಕು‘ ಎಂದು ಅಳಲು ತೋಡಿಕೊಂಡರು.