‘ಎಕ್ಸ್’ನಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಬೆಳ್ತಂಗಡಿ ಮಂಡಲ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಅವರನ್ನು ಆಧಾರರಹಿತ ಆರೋಪದಡಿ ಬಂಧಿಸಲಾಗಿದೆ. ಇದನ್ನು ಖಂಡಿಸಿ ಸ್ಥಳೀಯ ಶಾಸಕ ಹರೀಶ್ ಪೂಂಜಾ ಅವರು ಠಾಣೆಯಲ್ಲೇ ಧರಣಿ ನಡೆಸಿದ್ದಾರೆ. ರಾಜ್ಯದ ಕಾನೂನು ಸುವ್ಯವಸ್ಥೆ ವೈಫಲ್ಯ ಮುಚ್ಚಿಕೊಳ್ಳಲು ಕಾಂಗ್ರೆಸ್ ಇಂತಹ ಕೃತ್ಯ ಮಾಡಿಸುತ್ತಿದೆ ಎಂದು ದೂರಿದ್ದಾರೆ.