– ಇದು ಅಕ್ಷರ ಸಂತ, ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರ ನುಡಿಗಳು. ಕನ್ನಡ ಮತ್ತು ಸಂಸ್ಕೃತ ಇಲಾಖೆ ಶನಿವಾರ ನಗರದಲ್ಲಿ ಆಯೋಜಿಸಿದ್ದ ‘ಮನೆಯಂಗಳದಲ್ಲಿ ಮಾತುಕತೆ’ಯ 217ನೇ ಕಾರ್ಯಕ್ರಮದಲ್ಲಿ ತಮ್ಮ ಬಡತನ, ಶಾಲೆ ನಿರ್ಮಿಸಲು ಒದಗಿ ಬಂದ ಸಂದರ್ಭ, ಕಟ್ಟಡಕ್ಕೆ ಹಣ ಸಂಗ್ರಹ, ಶಾಸಕರು ಮತ್ತು ಅಧಿಕಾರಿಗಳು ನೀಡಿದ ನೆರವು ಮತ್ತು ಮಾರ್ಗದರ್ಶನವನ್ನು ವಿನಯದಿಂದ ನೆನಪಿಸಿಕೊಂಡರು.