<p>ಹರಿಹರ: ಜಾತಿನಿಂದನೆ ಪ್ರಕರಣದಲ್ಲಿ ವಿಚಾರಣೆಗೆ ಗೈರಾಗಿದ್ದರಿಂದ ಜಾರಿಯಾಗಿದ್ದ ಬಂಧನ ವಾರಂಟ್ ಹಿನ್ನೆಲೆಯಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಹರಿಹರ ಕ್ಷೇತ್ರದ ಶಾಸಕ ಬಿ.ಪಿ. ಹರೀಶ್ ಅವರು ಗುರುವಾರ ಖುದ್ದಾಗಿ ಹಾಜರಾದರು.</p>.<p>ಶಾಸರಾಗಲೀ ಅಥವಾ ಅವರ ಪರ ವಕೀಲರಾಗಲೀ ಹಾಜರಾಗದ ಕಾರಣ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಸೋಮವಾರ ಶಾಸಕರ ವಿರುದ್ಧ ಬಂಧನ ವಾರಂಟ್ ಜಾರಿ ಮಾಡಿದ್ದರು.</p>.<p>ಬೆಳಿಗ್ಗೆ ನ್ಯಾಯಾಲಯದ ಮುಂದೆ ಹರೀಶ್ ಹಾಗೂ ಅವರ ವಕೀಲರು ಹಾಜರಾಗಿ, ಹಿಂದಿನ ಮುದ್ದತ್ತಿಗೆ ಹಾಜರಾಗಲು ಆಗದಿರುವ ಬಗ್ಗೆ ನೀಡಿದ ಸಮಜಾಯಿಷಿಯನ್ನು ಪುರಸ್ಕರಿಸಿದ ನ್ಯಾಯಾಲಯ ₹1000 ದಂಡ ವಿಧಿಸಿ ವಾರಂಟ್ ಹಿಂಪಡೆಯಿತು.</p>.<p>ಮುಂದಿನ ವಿಚಾರಣೆಯನ್ನು ಮೇ 27ಕ್ಕೆ ನಿಗದಿಪಡಿಸಲಾಗಿದೆ ಎಂದು ತಿಳಿದು ಬಂದಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-43-1403319159</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹರಿಹರ: ಜಾತಿನಿಂದನೆ ಪ್ರಕರಣದಲ್ಲಿ ವಿಚಾರಣೆಗೆ ಗೈರಾಗಿದ್ದರಿಂದ ಜಾರಿಯಾಗಿದ್ದ ಬಂಧನ ವಾರಂಟ್ ಹಿನ್ನೆಲೆಯಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಹರಿಹರ ಕ್ಷೇತ್ರದ ಶಾಸಕ ಬಿ.ಪಿ. ಹರೀಶ್ ಅವರು ಗುರುವಾರ ಖುದ್ದಾಗಿ ಹಾಜರಾದರು.</p>.<p>ಶಾಸರಾಗಲೀ ಅಥವಾ ಅವರ ಪರ ವಕೀಲರಾಗಲೀ ಹಾಜರಾಗದ ಕಾರಣ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಸೋಮವಾರ ಶಾಸಕರ ವಿರುದ್ಧ ಬಂಧನ ವಾರಂಟ್ ಜಾರಿ ಮಾಡಿದ್ದರು.</p>.<p>ಬೆಳಿಗ್ಗೆ ನ್ಯಾಯಾಲಯದ ಮುಂದೆ ಹರೀಶ್ ಹಾಗೂ ಅವರ ವಕೀಲರು ಹಾಜರಾಗಿ, ಹಿಂದಿನ ಮುದ್ದತ್ತಿಗೆ ಹಾಜರಾಗಲು ಆಗದಿರುವ ಬಗ್ಗೆ ನೀಡಿದ ಸಮಜಾಯಿಷಿಯನ್ನು ಪುರಸ್ಕರಿಸಿದ ನ್ಯಾಯಾಲಯ ₹1000 ದಂಡ ವಿಧಿಸಿ ವಾರಂಟ್ ಹಿಂಪಡೆಯಿತು.</p>.<p>ಮುಂದಿನ ವಿಚಾರಣೆಯನ್ನು ಮೇ 27ಕ್ಕೆ ನಿಗದಿಪಡಿಸಲಾಗಿದೆ ಎಂದು ತಿಳಿದು ಬಂದಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-43-1403319159</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>