<p><strong>ಮಾಲೂರು (ಕೋಲಾರ):</strong> ರಾಜ್ಯ ಸರ್ಕಾರ ನೀಡಿದ ರಾಜ್ಯೋತ್ಸವ ಪ್ರಶಸ್ತಿ, ಗೌರವ ಡಾಕ್ಟರೇಟ್ ಸೇರಿದಂತೆ ವಿವಿಧ ಸಂಘ, ಸಂಸ್ಥೆಗಳು ನೀಡಿದ ಪ್ರಶಸ್ತಿ,  ಫಲಕಗಳನ್ನು ಸಾಹಿತಿ ಹಾಗೂ ಪುಸ್ತಕಮನೆ ಹರಿಹರಪ್ರಿಯ ಸುಟ್ಟು ಹಾಕಿದ್ದಾರೆ.</p>.<p>ನಗರದ ಹೊರವಲಯದಲ್ಲಿರುವ ತಮ್ಮ ಪುಸ್ತಕಮನೆಯ ಎದುರು ಬುಧವಾರ ಪ್ರಶಸ್ತಿಗಳನ್ನು ರಾಶಿ ಹಾಕಿ ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ.</p>.<p>ಅನಾರೋಗ್ಯದಿಂದ ಬಳಲುತ್ತಿದ್ದರೂ ತಮ್ಮ ನೆರವಿಗೆ ಯಾರೂ ಬಂದಿಲ್ಲ ಹಾಗೂ ಹಣಕಾಸು ನೆರವು ನೀಡಿಲ್ಲ. ತಮ್ಮನ್ನು ತಿರಸ್ಕಾರ ಭಾವದಿಂದ ಕಾಣಲಾಗುತ್ತಿದೆ ಎಂದು ಅವರು ಆಕ್ರೋಶ ಹೊರ ಹಾಕಿದ್ದಾರೆ.</p>.<p>‘ರಾಜ್ಯ ಸರ್ಕಾರದ ರಾಜ್ಯೋತ್ಸವ ಪ್ರಶಸ್ತಿ, ಕೆಂಪೇಗೌಡ ಪ್ರಶಸ್ತಿ, ಜಿ.ಎಸ್.ಶಿವರುದ್ರಪ್ಪ ಹೆಸರಿನ ಪ್ರಶಸ್ತಿ, ಸಿದ್ಧಯ್ಯ ಪುರಾಣಿಕರ ಹೆಸರಲ್ಲಿರುವ ಕಾವ್ಯಾನಂದ ಪ್ರಶಸ್ತಿ, ವರ್ಧಮಾನ ಪ್ರಶಸ್ತಿ, ಎಸ್.ವಿ.ಪರಮೇಶ್ವರ ಭಟ್ಟ ಪ್ರಶಸ್ತಿ, ಗೌರವ ಡಾಕ್ಟರೇಟ್ ಸೇರಿದಂತೆ ಎಲ್ಲಾ ಪ್ರಶಸ್ತಿಗಳನ್ನು ಸುಟ್ಟು ಹಾಕಿದ್ದೇನೆ. ನನಗೆ ಈ ಪ್ರಶಸ್ತಿಗಳ ನೆನಪು ಮತ್ತೆ ಬರಬಾರದೆಂದು ಈ ರೀತಿ ಮಾಡಿದ್ದೇನೆ’ ಎಂದು ಹರಿಹರಪ್ರಿಯ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಹೃದಯಾಘಾತವಾಗಿ ಬೆಂಗಳೂರಿನ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದೇನೆ. ನನಗೆ ಎರಡು ಸ್ಟೆಂಟ್ ಹಾಕಿದ್ದಾರೆ. ವೈದ್ಯಕೀಯ ವೆಚ್ಚ ನೀಡುವಂತೆ ಸರ್ಕಾರವನ್ನು ಕೋರಿದ್ದು, ಈವರೆಗೆ ಲಭಿಸಿಲ್ಲ. ಆಸ್ಪತ್ರೆಗೆ ಪಾವತಿಸಿದ್ದ ₹4.50 ಲಕ್ಷ ನನಗೆ ತುರ್ತಾಗಿ ಬೇಕಿದೆ. ಇತರರ ಬಳಿ ಪಡೆದು ಅಂದು ಪಾವತಿಸಿದ್ದೆ. ನನಗೆ ಒಂದು ಮನೆ ಬೇಕು, ಪುಸ್ತಕ ಇಡಲು ವ್ಯವಸ್ಥೆ ಮಾಡಿಕೊಡಬೇಕು. ಜೊತೆಗೆ ಮುಂದಿನ ಜೀವನಕ್ಕೆ ದಾರಿ ಮಾಡಿಕೊಡಬೇಕು’ ಎಂದು ಆಗ್ರಹಿಸಿದರು.</p>.<p>ಈ ವಿಚಾರ ಮುಖ್ಯಮಂತ್ರಿಗೆ ಮಾತ್ರವಲ್ಲ, ಪ್ರಧಾನಿಗೂ ಗೊತ್ತಾಗಬೇಕು. ಆ ಮೂಲಕ ನನಗೆ ಸಹಾಯ ಮಾಡಬೇಕು ಎಂದು ಅವರು ಕೋರಿದರು.</p>.<div><blockquote>ನನ್ನ ಮಾತಿಗೆ ಕಿಂಚಿತ್ ಬೆಲೆ ಇಲ್ಲದಂತಾಗಿದೆ. ಇಂಥ ಸಂದರ್ಭದಲ್ಲಿ ಈ ಪ್ರಶಸ್ತಿ ಇಟ್ಟುಕೊಂಡು ಏನು ಪ್ರಯೋಜನ? ಯಾರಿಗೆ ತೋರಿಸಲಿ? ಕಣ್ಣೆದುರು ಇರಬಾರದೆಂದು ಸುಟ್ಟು ಹಾಕಿದ್ದೇನೆ.</blockquote><span class="attribution">–ಹರಿಹರಪ್ರಿಯ, ಸಾಹಿತಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಲೂರು (ಕೋಲಾರ):</strong> ರಾಜ್ಯ ಸರ್ಕಾರ ನೀಡಿದ ರಾಜ್ಯೋತ್ಸವ ಪ್ರಶಸ್ತಿ, ಗೌರವ ಡಾಕ್ಟರೇಟ್ ಸೇರಿದಂತೆ ವಿವಿಧ ಸಂಘ, ಸಂಸ್ಥೆಗಳು ನೀಡಿದ ಪ್ರಶಸ್ತಿ,  ಫಲಕಗಳನ್ನು ಸಾಹಿತಿ ಹಾಗೂ ಪುಸ್ತಕಮನೆ ಹರಿಹರಪ್ರಿಯ ಸುಟ್ಟು ಹಾಕಿದ್ದಾರೆ.</p>.<p>ನಗರದ ಹೊರವಲಯದಲ್ಲಿರುವ ತಮ್ಮ ಪುಸ್ತಕಮನೆಯ ಎದುರು ಬುಧವಾರ ಪ್ರಶಸ್ತಿಗಳನ್ನು ರಾಶಿ ಹಾಕಿ ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ.</p>.<p>ಅನಾರೋಗ್ಯದಿಂದ ಬಳಲುತ್ತಿದ್ದರೂ ತಮ್ಮ ನೆರವಿಗೆ ಯಾರೂ ಬಂದಿಲ್ಲ ಹಾಗೂ ಹಣಕಾಸು ನೆರವು ನೀಡಿಲ್ಲ. ತಮ್ಮನ್ನು ತಿರಸ್ಕಾರ ಭಾವದಿಂದ ಕಾಣಲಾಗುತ್ತಿದೆ ಎಂದು ಅವರು ಆಕ್ರೋಶ ಹೊರ ಹಾಕಿದ್ದಾರೆ.</p>.<p>‘ರಾಜ್ಯ ಸರ್ಕಾರದ ರಾಜ್ಯೋತ್ಸವ ಪ್ರಶಸ್ತಿ, ಕೆಂಪೇಗೌಡ ಪ್ರಶಸ್ತಿ, ಜಿ.ಎಸ್.ಶಿವರುದ್ರಪ್ಪ ಹೆಸರಿನ ಪ್ರಶಸ್ತಿ, ಸಿದ್ಧಯ್ಯ ಪುರಾಣಿಕರ ಹೆಸರಲ್ಲಿರುವ ಕಾವ್ಯಾನಂದ ಪ್ರಶಸ್ತಿ, ವರ್ಧಮಾನ ಪ್ರಶಸ್ತಿ, ಎಸ್.ವಿ.ಪರಮೇಶ್ವರ ಭಟ್ಟ ಪ್ರಶಸ್ತಿ, ಗೌರವ ಡಾಕ್ಟರೇಟ್ ಸೇರಿದಂತೆ ಎಲ್ಲಾ ಪ್ರಶಸ್ತಿಗಳನ್ನು ಸುಟ್ಟು ಹಾಕಿದ್ದೇನೆ. ನನಗೆ ಈ ಪ್ರಶಸ್ತಿಗಳ ನೆನಪು ಮತ್ತೆ ಬರಬಾರದೆಂದು ಈ ರೀತಿ ಮಾಡಿದ್ದೇನೆ’ ಎಂದು ಹರಿಹರಪ್ರಿಯ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಹೃದಯಾಘಾತವಾಗಿ ಬೆಂಗಳೂರಿನ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದೇನೆ. ನನಗೆ ಎರಡು ಸ್ಟೆಂಟ್ ಹಾಕಿದ್ದಾರೆ. ವೈದ್ಯಕೀಯ ವೆಚ್ಚ ನೀಡುವಂತೆ ಸರ್ಕಾರವನ್ನು ಕೋರಿದ್ದು, ಈವರೆಗೆ ಲಭಿಸಿಲ್ಲ. ಆಸ್ಪತ್ರೆಗೆ ಪಾವತಿಸಿದ್ದ ₹4.50 ಲಕ್ಷ ನನಗೆ ತುರ್ತಾಗಿ ಬೇಕಿದೆ. ಇತರರ ಬಳಿ ಪಡೆದು ಅಂದು ಪಾವತಿಸಿದ್ದೆ. ನನಗೆ ಒಂದು ಮನೆ ಬೇಕು, ಪುಸ್ತಕ ಇಡಲು ವ್ಯವಸ್ಥೆ ಮಾಡಿಕೊಡಬೇಕು. ಜೊತೆಗೆ ಮುಂದಿನ ಜೀವನಕ್ಕೆ ದಾರಿ ಮಾಡಿಕೊಡಬೇಕು’ ಎಂದು ಆಗ್ರಹಿಸಿದರು.</p>.<p>ಈ ವಿಚಾರ ಮುಖ್ಯಮಂತ್ರಿಗೆ ಮಾತ್ರವಲ್ಲ, ಪ್ರಧಾನಿಗೂ ಗೊತ್ತಾಗಬೇಕು. ಆ ಮೂಲಕ ನನಗೆ ಸಹಾಯ ಮಾಡಬೇಕು ಎಂದು ಅವರು ಕೋರಿದರು.</p>.<div><blockquote>ನನ್ನ ಮಾತಿಗೆ ಕಿಂಚಿತ್ ಬೆಲೆ ಇಲ್ಲದಂತಾಗಿದೆ. ಇಂಥ ಸಂದರ್ಭದಲ್ಲಿ ಈ ಪ್ರಶಸ್ತಿ ಇಟ್ಟುಕೊಂಡು ಏನು ಪ್ರಯೋಜನ? ಯಾರಿಗೆ ತೋರಿಸಲಿ? ಕಣ್ಣೆದುರು ಇರಬಾರದೆಂದು ಸುಟ್ಟು ಹಾಕಿದ್ದೇನೆ.</blockquote><span class="attribution">–ಹರಿಹರಪ್ರಿಯ, ಸಾಹಿತಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>