ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ‘ರಾಜ್ಯದ ಕಾನೂನು ಸುವ್ಯವಸ್ಥೆಗೂ ರಾಜ್ಯಪಾಲರಿಗೂ ಏನು ಸಂಬಂಧ. ಹಿಂದಿನ ಸರ್ಕಾರ ಇದ್ದಾಗ ಎಂದೂ ಈ ರೀತಿ ಆಗಿಲ್ಲ. ಈ ಬಾರಿ ಏಕೆ ಆಗುತ್ತಿದೆ. ಈ ವಿಚಾರವಾಗಿ ರಾಜ್ಯಪಾಲರು ಏಕೆ ಅಷ್ಟೊಂದು ಆಸಕ್ತಿ ಹೊಂದಿದ್ದಾರೆ. ಕೇಂದ್ರ ಸರ್ಕಾರದಿಂದ ಅವರಿಗೆ ನಿರ್ದೇಶನ ಇತ್ತೇ’ ಎಂದೂ ಪ್ರಶ್ನಿಸಿದರು.