ನವದೆಹಲಿ: ಹಾಸನ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 373ರ ಯಡೇಗೌಡನಹಳ್ಳಿಯಿಂದ ಅರ್ಜುನಹಳ್ಳಿಯವರೆಗೆ ಚತುಷ್ಪಥ ಕಾಮಗಾರಿಗೆ ₹576.22 ಕೋಟಿ ಮಂಜೂರು ಮಾಡಲಾಗಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲ ತಾಣ ‘ಎಕ್ಸ್’ನಲ್ಲಿ ಬರೆದುಕೊಂಡಿರುವ ಅವರು, ‘22.3 ಕಿ.ಮೀ. ಉದ್ದದ ಹೆದ್ದಾರಿ ಚತುಷ್ಪಥಗೊಳ್ಳಲಿದೆ. ಚಿಕ್ಕಮಗಳೂರು, ಬೇಲೂರು, ಹಳೆಬೀಡು ಮತ್ತು ಶ್ರವಣಬೆಳಗೊಳದಂತಹ ಪ್ರವಾಸಿ ತಾಣಗಳಿಗೆ ಈ ಕಾರಿಡಾರ್ ಪ್ರಮುಖ ಕೊಂಡಿಯಾಗಿ ಕಾರ್ಯನಿರ್ವಹಿಸಲಿದೆ’ ಎಂದಿದ್ದಾರೆ.