ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸನ; ಚತುಷ್ಪಥಕ್ಕೆ ₹576 ಕೋಟಿ- ಸಚಿವ ನಿತಿನ್ ಗಡ್ಕರಿ

Published 15 ಮಾರ್ಚ್ 2024, 15:47 IST
Last Updated 15 ಮಾರ್ಚ್ 2024, 15:47 IST
ಅಕ್ಷರ ಗಾತ್ರ

ನವದೆಹಲಿ:  ಹಾಸನ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 373ರ ಯಡೇಗೌಡನಹಳ್ಳಿಯಿಂದ ಅರ್ಜುನಹಳ್ಳಿಯವರೆಗೆ ಚತುಷ್ಪಥ ಕಾಮಗಾರಿಗೆ ₹576.22 ಕೋಟಿ ಮಂಜೂರು ಮಾಡಲಾಗಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. 

ಈ ಬಗ್ಗೆ ಸಾಮಾಜಿಕ ಜಾಲ ತಾಣ ‘ಎಕ್ಸ್‌’ನಲ್ಲಿ ಬರೆದುಕೊಂಡಿರುವ ಅವರು, ‘22.3 ಕಿ.ಮೀ. ಉದ್ದದ ಹೆದ್ದಾರಿ ಚತುಷ್ಪಥಗೊಳ್ಳಲಿದೆ. ಚಿಕ್ಕಮಗಳೂರು, ಬೇಲೂರು, ಹಳೆಬೀಡು ಮತ್ತು ಶ್ರವಣಬೆಳಗೊಳದಂತಹ ಪ್ರವಾಸಿ ತಾಣಗಳಿಗೆ ಈ ಕಾರಿಡಾರ್ ಪ್ರಮುಖ ಕೊಂಡಿಯಾಗಿ ಕಾರ್ಯನಿರ್ವಹಿಸಲಿದೆ’ ಎಂದಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT