<p><strong>ಚನ್ನರಾಯಪಟ್ಟಣ (ಹಾಸನ ಜಿಲ್ಲೆ): </strong>ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಭಾಗಿಯಾದ ಆರೋಪದಡಿ ಬೆಕ್ಕ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೇಶವಮೂರ್ತಿ ಅವರನ್ನು ಸಿಐಡಿ ಅಧಿಕಾರಿಗಳು ಭಾನುವಾರ ಬಂಧಿಸಿದ್ದಾರೆ.</p>.<p>ಗಾಂಧಿ ವೃತ್ತದ ಬಳಿಯಿರುವ ಮನೆಯಿಂದ ಕೇಶವಮೂರ್ತಿ ಅವರನ್ನು ವಿಚಾರಣೆಗಾಗಿ ಅಧಿಕಾರಿಗಳು ಶನಿವಾರ ಬೆಂಗಳೂರಿಗೆ ಕರೆದೊಯ್ದಿದ್ದರು. ಇದೇ ಪ್ರಕರಣದಲ್ಲಿ ಚನ್ನರಾಯಪಟ್ಟಣದ ಪುರಸಭೆ ಸದಸ್ಯರೊಬ್ಬರು ಭಾಗಿಯಾಗಿರುವ ಶಂಕೆ ಇದ್ದು, ಅವರ ಪತ್ತೆಗೆ ಮುಂದಾಗಿದ್ದಾರೆ.</p>.<p>ಬೆಕ್ಕ ಗ್ರಾಮದ ಚಂದ್ರಶೇಖರ್ ಅವರ ಪುತ್ರ ವೆಂಕಟೇಶ್ಪಿಎಸ್ಐ ಹುದ್ದೆಯ ತಾತ್ಕಾಲಿಕ ಪಟ್ಟಿಯಲ್ಲಿ ಆಯ್ಕೆಯಾಗಿದ್ದಾರೆ. ಇದಕ್ಕಾಗಿ ಚಂದ್ರಶೇಖರ್ ತನ್ನ ಸಂಬಂಧಿ ಕೇಶವಮೂರ್ತಿ ಮೂಲಕ ₹ 40 ಲಕ್ಷ ನೀಡಿದ್ದರು ಎನ್ನಲಾಗಿದೆ. ವೆಂಕಟೇಶ್ ಹಾಗೂ ಚಂದ್ರಶೇಖರ್ ಅವರನ್ನೂ ಸಿಐಡಿ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದರು.</p>.<p>ವೆಂಕಟೇಶ್ ಅರಸೀಕೆರೆ ತಾಲ್ಲೂಕಿನ ಗ್ರಾಮ ಪಂಚಾಯಿತಿಯೊಂದರಲ್ಲಿ ನರೇಗಾ ಯೋಜನೆಯಡಿ ಕಿರಿಯ ಎಂಜಿನಿಯರ್ ಆಗಿ ಹೊರಗುತ್ತಿಗೆ ಆಧಾರದಡಿ ಕೆಲಸ ಮಾಡುತ್ತಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನರಾಯಪಟ್ಟಣ (ಹಾಸನ ಜಿಲ್ಲೆ): </strong>ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಭಾಗಿಯಾದ ಆರೋಪದಡಿ ಬೆಕ್ಕ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೇಶವಮೂರ್ತಿ ಅವರನ್ನು ಸಿಐಡಿ ಅಧಿಕಾರಿಗಳು ಭಾನುವಾರ ಬಂಧಿಸಿದ್ದಾರೆ.</p>.<p>ಗಾಂಧಿ ವೃತ್ತದ ಬಳಿಯಿರುವ ಮನೆಯಿಂದ ಕೇಶವಮೂರ್ತಿ ಅವರನ್ನು ವಿಚಾರಣೆಗಾಗಿ ಅಧಿಕಾರಿಗಳು ಶನಿವಾರ ಬೆಂಗಳೂರಿಗೆ ಕರೆದೊಯ್ದಿದ್ದರು. ಇದೇ ಪ್ರಕರಣದಲ್ಲಿ ಚನ್ನರಾಯಪಟ್ಟಣದ ಪುರಸಭೆ ಸದಸ್ಯರೊಬ್ಬರು ಭಾಗಿಯಾಗಿರುವ ಶಂಕೆ ಇದ್ದು, ಅವರ ಪತ್ತೆಗೆ ಮುಂದಾಗಿದ್ದಾರೆ.</p>.<p>ಬೆಕ್ಕ ಗ್ರಾಮದ ಚಂದ್ರಶೇಖರ್ ಅವರ ಪುತ್ರ ವೆಂಕಟೇಶ್ಪಿಎಸ್ಐ ಹುದ್ದೆಯ ತಾತ್ಕಾಲಿಕ ಪಟ್ಟಿಯಲ್ಲಿ ಆಯ್ಕೆಯಾಗಿದ್ದಾರೆ. ಇದಕ್ಕಾಗಿ ಚಂದ್ರಶೇಖರ್ ತನ್ನ ಸಂಬಂಧಿ ಕೇಶವಮೂರ್ತಿ ಮೂಲಕ ₹ 40 ಲಕ್ಷ ನೀಡಿದ್ದರು ಎನ್ನಲಾಗಿದೆ. ವೆಂಕಟೇಶ್ ಹಾಗೂ ಚಂದ್ರಶೇಖರ್ ಅವರನ್ನೂ ಸಿಐಡಿ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದರು.</p>.<p>ವೆಂಕಟೇಶ್ ಅರಸೀಕೆರೆ ತಾಲ್ಲೂಕಿನ ಗ್ರಾಮ ಪಂಚಾಯಿತಿಯೊಂದರಲ್ಲಿ ನರೇಗಾ ಯೋಜನೆಯಡಿ ಕಿರಿಯ ಎಂಜಿನಿಯರ್ ಆಗಿ ಹೊರಗುತ್ತಿಗೆ ಆಧಾರದಡಿ ಕೆಲಸ ಮಾಡುತ್ತಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>