47 ವರ್ಷದ ಸಂತ್ರಸ್ತ ಮಹಿಳೆ ಹೊಳೆನರಸೀಪುರ ಠಾಣೆಗೆ ದೂರು ನೀಡಿದ್ದಾರೆ. ದೂರು ಪಡೆದ ಪೊಲೀಸರು ಅತ್ಯಾಚಾರದ ಕಾಲಂನಡಿ ಪ್ರಕರಣ ದಾಖಲಿಸದೇ ಬೇರೆ ಕಲಂಗಳನ್ನು ನಮೂದಿಸಿದ್ದಾರೆ. ಪ್ರಭಾವಿ ರಾಜಕಾರಣಿಗಳ ಕುಟುಂಬದವರನ್ನು ರಕ್ಷಿಸಲು ಹೀಗೆ ಮಾಡಿರುವ ಶಂಕೆ ಇದೆ. ಆರೋಪಿ ಚಿತ್ರೀಕರಿಸಿರುವ ನೂರಾರು ವಿಡಿಯೊಗಳಲ್ಲಿ ಅತ್ಯಾಚಾರ ನಡೆದಿರುವುದೂ ಸ್ಪಷ್ಟವಾಗಿದೆ. ಇವೆಲ್ಲವನ್ನೂ ಸಂತ್ರಸ್ತ ಮಹಿಳೆ ನೀಡಿರುವ ದೂರಿನ ಜತೆಗೇ ವಿಚಾರಣೆ ನಡೆಸಬೇಕು ಎಂದು ಜನವಾದಿ ಮಹಿಳಾ ಸಂಘಟನೆ ಅಧ್ಯಕ್ಷೆ ಮೀನಾಕ್ಷಿ ಬಾಳಿ, ಉಪಾಧ್ಯಕ್ಷೆ ಕೆ.ನೀಲಾ, ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟದ ಸಬಿಹಾ ಭೂಮಿಗೌಡ, ಡಿವೈಎಫ್ಐ ಅಧ್ಯಕ್ಷ ಮುನೀರ್ ಕಾಟಿಪಳ್ಳ, ಪ್ರಗತಿಪರ ಚಳವಳಿ ಮುಖಂಡರಾದ ನವೀನ್ ಸೂರಿಂಜೆ, ಅಖಿಲಾ ವಿದ್ಯಾಸಂದ್ರ, ಜ್ಯೋತಿ ಅನಂತ ಸುಬ್ಬರಾವ್, ವಿನಯ್ ಶ್ರೀನಿವಾಸ್ ಮತ್ತಿತರರು ಒತ್ತಾಯಿಸಿದ್ದಾರೆ.