<p><strong>ಬೆಳಗಾವಿ</strong>: ‘ಬಿಜೆಪಿಯೇ ದ್ವೇಷಭಾಷಣದ ಪಿತಾಮಹ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದರು.</p>.<p>ಇಲ್ಲಿನ ಸರ್ಕಿಟ್ ಹೌಸ್ ಬಳಿ ಗುರುವಾರ ಬೆಳಿಗ್ಗೆ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಬಿಜೆಪಿಯವರು ಮತ-ಮತಗಳ ನಡುವೆ, ಜಾತಿ-ಜಾತಿಗಳ ನಡುವೆ, ಧರ್ಮ-ಧರ್ಮಗಳ ನಡುವೆ ದ್ವೇಷ ತರುತ್ತಾರೆ. ವೈಯಕ್ತಿಕ ದಾಳಿ ನಡೆಸುತ್ತಾರೆ. ದ್ವೇಷಭಾಷಣ ನಿಷೇಧ ಮಾಡಿದರೆ, ಬಿಜೆಪಿಯವರಿಗೇ ತೊಂದರೆ ಆಗುತ್ತದೆ ಅಲ್ಲವೆ. ಅದಕ್ಕಾಗಿಯೇ ಆ ಮಸೂದೆಯನ್ನು ವಿರೋಧಿಸುತ್ತಿದ್ದಾರೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<p>‘ಇವರು ದ್ವೇಷ ಭಾಷಣ ಮಾಡದೇ ಇದ್ದರೆ, ಸಮಸ್ಯೆಯೇ ಇರುವುದಿಲ್ಲವಲ್ಲ. ಅವರಿಗೆ ಸಂವಿಧಾನದ ಬಗ್ಗೆ ಗೌರವ ಇದ್ದರೆ, ಅದರ ಅನುಸಾರ ನಡೆದುಕೊಳ್ಳಲಿ. ಸಂವಿಧಾನದ ರಕ್ಷಣೆಗಾಗಿಯೇ ನಾವು ಈ ಮಸೂದೆ ತರುತ್ತಿದ್ದೇವೆ’ ಎಂದರು.</p>.<p>ಸತ್ಯ ಹೇಳಿದರೆ ಕೆಲವರಿಗೆ ದ್ವೇಷದಂತೆ ಕಾಣುತ್ತದೆ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಹೀಗಿದ್ದಲ್ಲಿ ದ್ವೇಷ ಭಾಷಣ ಎಂಬುದನ್ನು ಹೇಗೆ ವ್ಯಾಖ್ಯಾನ ಮಾಡುತ್ತೀರಿ ಎಂದು ಸುದ್ದಿಗಾರರು ಪ್ರಶ್ನಿಸಿದಾಗ, ‘ಅದನ್ನು ಸದನದಲ್ಲಿ ಹೇಳುತ್ತೇವೆ’ ಎಂದರು.</p>.ದ್ವೇಷ ಭಾಷಣ ಕಾಯ್ದೆ ವಿರುದ್ಧ ಕಾನೂನು ಹೋರಾಟ: ಬಸವರಾಜ ಬೊಮ್ಮಾಯಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ‘ಬಿಜೆಪಿಯೇ ದ್ವೇಷಭಾಷಣದ ಪಿತಾಮಹ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದರು.</p>.<p>ಇಲ್ಲಿನ ಸರ್ಕಿಟ್ ಹೌಸ್ ಬಳಿ ಗುರುವಾರ ಬೆಳಿಗ್ಗೆ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಬಿಜೆಪಿಯವರು ಮತ-ಮತಗಳ ನಡುವೆ, ಜಾತಿ-ಜಾತಿಗಳ ನಡುವೆ, ಧರ್ಮ-ಧರ್ಮಗಳ ನಡುವೆ ದ್ವೇಷ ತರುತ್ತಾರೆ. ವೈಯಕ್ತಿಕ ದಾಳಿ ನಡೆಸುತ್ತಾರೆ. ದ್ವೇಷಭಾಷಣ ನಿಷೇಧ ಮಾಡಿದರೆ, ಬಿಜೆಪಿಯವರಿಗೇ ತೊಂದರೆ ಆಗುತ್ತದೆ ಅಲ್ಲವೆ. ಅದಕ್ಕಾಗಿಯೇ ಆ ಮಸೂದೆಯನ್ನು ವಿರೋಧಿಸುತ್ತಿದ್ದಾರೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<p>‘ಇವರು ದ್ವೇಷ ಭಾಷಣ ಮಾಡದೇ ಇದ್ದರೆ, ಸಮಸ್ಯೆಯೇ ಇರುವುದಿಲ್ಲವಲ್ಲ. ಅವರಿಗೆ ಸಂವಿಧಾನದ ಬಗ್ಗೆ ಗೌರವ ಇದ್ದರೆ, ಅದರ ಅನುಸಾರ ನಡೆದುಕೊಳ್ಳಲಿ. ಸಂವಿಧಾನದ ರಕ್ಷಣೆಗಾಗಿಯೇ ನಾವು ಈ ಮಸೂದೆ ತರುತ್ತಿದ್ದೇವೆ’ ಎಂದರು.</p>.<p>ಸತ್ಯ ಹೇಳಿದರೆ ಕೆಲವರಿಗೆ ದ್ವೇಷದಂತೆ ಕಾಣುತ್ತದೆ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಹೀಗಿದ್ದಲ್ಲಿ ದ್ವೇಷ ಭಾಷಣ ಎಂಬುದನ್ನು ಹೇಗೆ ವ್ಯಾಖ್ಯಾನ ಮಾಡುತ್ತೀರಿ ಎಂದು ಸುದ್ದಿಗಾರರು ಪ್ರಶ್ನಿಸಿದಾಗ, ‘ಅದನ್ನು ಸದನದಲ್ಲಿ ಹೇಳುತ್ತೇವೆ’ ಎಂದರು.</p>.ದ್ವೇಷ ಭಾಷಣ ಕಾಯ್ದೆ ವಿರುದ್ಧ ಕಾನೂನು ಹೋರಾಟ: ಬಸವರಾಜ ಬೊಮ್ಮಾಯಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>