ಶುಕ್ರವಾರ ಬೆಂಗಳೂರಿನ ಮಲ್ಲೇಶ್ವರದ ಮಂಜುನಾಥ್ ಎಂಬುವವನನ್ನು ಬಂಧಿಸಿದ್ದ ಪೊಲೀಸರು ₹ 1 ಕೋಟಿ ನಗದು ವಶಪಡಿಸಿಕೊಂಡಿದ್ದರು. ಈ ಸಂಬಂಧ ನಗರದ ಚಿನ್ನಾಭರಣ ವ್ಯಾಪಾರಿ ರಾಜು ಪವಾರ್ ಎಂಬಾತನ ಮನೆ, ಕಚೇರಿಗಳ ಮೇಲೆ ಶುಕ್ರವಾರ ರಾತ್ರಿ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.