<p><strong>ನವದೆಹಲಿ:</strong> ಕರ್ನಾಟಕದಲ್ಲಿ ಅಹಿಂದ ಸಮಾವೇಶಕ್ಕೆ ಆಹ್ವಾನ ನೀಡಿದರೆ ಹೋಗುತ್ತೇವೆ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ತಿಳಿಸಿದರು. </p>.<p>ಬುಧವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಅಹಿಂದ ಕಾಂಗ್ರೆಸ್ಗೆ ಮುಖ್ಯ ಮತ ಬ್ಯಾಂಕ್. ಸಮಾವೇಶವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ಅಲ್ಲ. ಅವರೇ ನಮಗೆಲ್ಲ ಶಕ್ತಿ’ ಎಂದರು. </p>.<p>ಅಧಿಕಾರ ಹಂಚಿಕೆ ಬಗ್ಗೆ ಮಾಜಿ ಸಚಿವ ಕೆ.ಎನ್.ರಾಜಣ್ಣ ಏನು ಹೇಳಿದ್ದಾರೆ ಎಂಬುದು ಗೊತ್ತಿಲ್ಲ. ನಮ್ಮಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ. ಹೈಕಮಾಂಡ್ ತೀರ್ಮಾನ ಮಾಡಿದಾಗ ಸಚಿವ ಸಂಪುಟ ಪುನರ್ ರಚನೆ ಆಗುತ್ತದೆ ಎಂದರು. </p>.<p>ರಾಜ್ಯದಲ್ಲಿ ಒಳ ಮೀಸಲಾತಿ ಜಾರಿ ಮಾಡಿರುವ ಬಗ್ಗೆ ಕೇಂದ್ರ ಪರಿಶಿಷ್ಟ ಜಾತಿ ಆಯೋಗಕ್ಕೆ ಮಾಹಿತಿ ನೀಡಲಾಗಿದೆ. ರಾಜ್ಯದಲ್ಲಿ ಮೀಸಲಾತಿ ಹೆಚ್ಚಳ ಮಾಡುವಂತೆ ಕೇಂದ್ರ ಸಮಾಜ ಕಲ್ಯಾಣ ಸಚಿವರಿಗೆ ಮನವಿ ಮಾಡಲಾಗಿದೆ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕರ್ನಾಟಕದಲ್ಲಿ ಅಹಿಂದ ಸಮಾವೇಶಕ್ಕೆ ಆಹ್ವಾನ ನೀಡಿದರೆ ಹೋಗುತ್ತೇವೆ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ತಿಳಿಸಿದರು. </p>.<p>ಬುಧವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಅಹಿಂದ ಕಾಂಗ್ರೆಸ್ಗೆ ಮುಖ್ಯ ಮತ ಬ್ಯಾಂಕ್. ಸಮಾವೇಶವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ಅಲ್ಲ. ಅವರೇ ನಮಗೆಲ್ಲ ಶಕ್ತಿ’ ಎಂದರು. </p>.<p>ಅಧಿಕಾರ ಹಂಚಿಕೆ ಬಗ್ಗೆ ಮಾಜಿ ಸಚಿವ ಕೆ.ಎನ್.ರಾಜಣ್ಣ ಏನು ಹೇಳಿದ್ದಾರೆ ಎಂಬುದು ಗೊತ್ತಿಲ್ಲ. ನಮ್ಮಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ. ಹೈಕಮಾಂಡ್ ತೀರ್ಮಾನ ಮಾಡಿದಾಗ ಸಚಿವ ಸಂಪುಟ ಪುನರ್ ರಚನೆ ಆಗುತ್ತದೆ ಎಂದರು. </p>.<p>ರಾಜ್ಯದಲ್ಲಿ ಒಳ ಮೀಸಲಾತಿ ಜಾರಿ ಮಾಡಿರುವ ಬಗ್ಗೆ ಕೇಂದ್ರ ಪರಿಶಿಷ್ಟ ಜಾತಿ ಆಯೋಗಕ್ಕೆ ಮಾಹಿತಿ ನೀಡಲಾಗಿದೆ. ರಾಜ್ಯದಲ್ಲಿ ಮೀಸಲಾತಿ ಹೆಚ್ಚಳ ಮಾಡುವಂತೆ ಕೇಂದ್ರ ಸಮಾಜ ಕಲ್ಯಾಣ ಸಚಿವರಿಗೆ ಮನವಿ ಮಾಡಲಾಗಿದೆ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>