<p><strong>ನವದೆಹಲಿ</strong>: ಕರ್ನಾಟಕದಲ್ಲಿ ನೀರಾವರಿ ಯೋಜನೆಗಳನ್ನು ಸಕಾಲಕ್ಕೆ ಕಾರ್ಯಗತ ಮಾಡಲಾಗದೇ ರಾಜ್ಯ ಕಾಂಗ್ರೆಸ್ ಸರ್ಕಾರವು ಕೇಂದ್ರ ಸರ್ಕಾರವನ್ನು ಅನಗತ್ಯವಾಗಿ ದೂರುತ್ತಿದೆ. ಸುಖಾಸುಮ್ಮನೆ ಅಪಪ್ರಚಾರ ಮಾಡುತ್ತಿದೆ ಎಂದು ರಾಜ್ಯಸಭಾ ಸದಸ್ಯ ಎಚ್.ಡಿ. ದೇವೇಗೌಡ ದೂರಿದರು.</p>.<p>ರಾಜ್ಯಸಭೆಯಲ್ಲಿ ಸೋಮವಾರ ಬಜೆಟ್ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ಎತ್ತಿನಹೊಳೆ, ಮೇಕೆದಾಟು ಯೋಜನೆಗಳ ವಿಳಂಬಕ್ಕೆ ರಾಜ್ಯ ಸರ್ಕಾರವೇ ಕಾರಣ. ಅದನ್ನು ಮರೆಮಾಚಿಕೊಳ್ಳಲು ಕೇಂದ್ರವನ್ನು ದೂರುತ್ತಿದೆ. ಕರ್ನಾಟಕದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷದಿಂದ ಎತ್ತಿನಹೊಳೆ ಯೋಜನೆ ಆಮೆಗತಿಯಲ್ಲಿ ಸಾಗಿದೆ’ ಎಂದರು. </p>.<p>ಎತ್ತಿನಹೊಳೆ ಯೋಜನೆ ಕಾರ್ಯಗತ ಮಾಡುವಲ್ಲಿ ಕಾಂಗ್ರೆಸ್ ಸರ್ಕಾರ ಅನೇಕ ತಪ್ಪುಗಳನ್ನು ಮಾಡಿದೆ. ಪರಿಸರಕ್ಕೆ ಧಕ್ಕೆ ತಂದಿದೆ ಹಾಗೂ ಅನೇಕ ಕಾನೂನು, ನಿಯಮಗಳನ್ನು ಉಲ್ಲಂಘನೆ ಮಾಡಿದೆ ಎಂದು ಆರೋಪ ಮಾಡಿದ ಅವರು, ‘ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ಯೋಜನೆಗೆ ಶಂಕುಸ್ಥಾಪನೆ ಮಾಡಲಾಗಿತ್ತು. ಆಗ ಜಗದೀಶ್ ಶೆಟ್ಟರ್ ಅವರು ರಾಜ್ಯದ ಮುಖ್ಯಮಂತ್ರಿ ಆಗಿದ್ದರು, ಆಗ ಆ ಯೋಜನೆಯ ಅಂದಾಜು ವೆಚ್ಚ ₹8 ಸಾವಿರ ಕೋಟಿ. ಈಗ ಯೋಜನಾ ಮೊತ್ತ ₹33 ಸಾವಿರ ಕೋಟಿಗೆ ಏರಿದೆ. ಈವರೆಗೂ ಒಂದು ಹನಿ ನೀರು ಕೂಡ ಹರಿದಿಲ್ಲ. ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆಗಳಿಗೆ ತೊಟ್ಟು ನೀರು ಹೋಗಿಲ್ಲ. ಅಷ್ಟೇ ಅಲ್ಲದೆ, ಆ ಯೋಜನೆ ಕಾರ್ಯಕಗತ ಆಗುತ್ತಿರುವ ಹಾಸನ ಜಿಲ್ಲೆಯ ಸಕಲೇಶಪುರಕ್ಕೆ ಹತ್ತಿರದಲ್ಲಿರುವ ಅರಸೀಕರೆಗೇ ನೀರು ಬಂದಿಲ್ಲ. ಈ ಬಗ್ಗೆ ನಾನು ಸಂಪುಟಗಟ್ಟಲೆ ಮಾಹಿತಿ ಇಟ್ಟುಕೊಂಡು ಮಾತನಾಡಬಲ್ಲೆ’ ಎಂದರು. </p>.<p>‘ನಾನು ನೀರಾವರಿ ಸಚಿವನಾಗಿ, ಮುಖ್ಯಮಂತ್ರಿಯಾಗಿ ಹಾಗೂ ಪ್ರಧಾನಿಯಾಗಿ ಕೆಲಸ ಮಾಡಿದ್ದೇನೆ. ನನಗೆ ಈ ಬಗ್ಗೆ ಪೂರ್ಣ ಮಾಹಿತಿ, ಅನುಭವ ಇದೆ. ಮೇಕೆದಾಟು ಯೋಜನೆಗೂ ರಾಜ್ಯ ಸರ್ಕಾರವೇ ಅಡ್ಡಿಯಾಗಿದೆ. ಈ ಯೋಜನೆ ಕಾರ್ಯಗತವಾಗುವ ಪ್ರಸ್ತಾವಿತ ಜಾಗ ನನಗೆ ಗೊತ್ತು. ಒಂದು ಕಡೆ ಆನೆ ಕಾರಿಡಾರ್, ಮತ್ತೊಂಡೆ ಅರಣ್ಯ ಮತ್ತು ನವ್ಯಜೀವಿ ಸಂಪತ್ತು ಇದೆ. ಪ್ರತಿದಿನವೂ ನಡೆಯುತ್ತಿರುವ ಮಾನವ-ವನ್ಯಜೀವಿ ಸಂಘರ್ಷದಿಂದ ಅಮಾಯಕರು ಬಲಿ ಆಗುತ್ತಿದ್ದಾರೆ. ಇದನ್ನು ತಡೆಯಲು ರಾಜ್ಯ ಸರ್ಕಾರಕ್ಕೆ ಆಗಿಲ್ಲ’ ಎಂದು ಅವರು ಟೀಕಿಸಿದರು. </p>.<p>‘ಯಾವ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ನೀರು ಕೊಡಬೇಕು ಎಂದು ಸರ್ಕಾರವು ಎತ್ತಿಹೊಳೆ ಯೋಜನೆ ಮೂಲಕ ರೂಪಿಸಿತ್ತೋ, ಈಗ ಆ ಯೋಜನೆ ಕಾರ್ಯಗತವಾಗದೇ ಅದೇ ಜಿಲ್ಲೆಗಳಿಗೆ ಬೆಂಗಳೂರಿನ ಕೊಳಚೆ ನೀರನ್ನು ಮೂರು ಹಂತಗಳಲ್ಲಿ ಶುದ್ಧೀಕರಿಸದೆ ಮಲೀನ ನೀರನ್ನು ಹರಿಸುತ್ತಿದೆ. ಆ ನೀರು ಮಾನವ ಬಳಕೆ ಯೋಗ್ಯವಲ್ಲದ್ದು. ಇದರ ಪರಿಣಾಮವಾಗಿ ಆ ಭಾಗದಲ್ಲಿ ಬೆಳೆಯುತ್ತಿರುವ ಬೆಳೆಗಳು ಹಾಗೂ ತರಕಾರಿಗಳು ವಿಷಕಾರಿಯಾಗುತ್ತಿದ್ದು, ಅವು ಸೇವನೆಗೆ ಯೋಗ್ಯವಲ್ಲದ್ದಾಗಿವೆ. ಜನರ ಜೀವದ ಜತೆಗೆ ರಾಜ್ಯ ಸರ್ಕಾರ ಚೆಲ್ಲಾಟವಾಡುತ್ತಿದೆ’ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. </p>.<p>‘ಈ ಎರಡೂ ಜಿಲ್ಲೆಗಳು ಎದುರಿಸುತ್ತಿರುವ ಸಮಸ್ಯೆ ದಿನದಿಂದ ದಿನಕ್ಕೆ ಬಿಗಡಾಯಿಸುತ್ತಿದ್ದು, ಪ್ರಧಾನಿ ನರೇದ್ರ ಮೋದಿ ಹಾಗೂ ಕೇಂದ್ರದ ಅರಣ್ಯ ಭೂಪೇಂದ್ರ ಯಾದವ್ ಕೂಡಲೇ ಮಧ್ಯಪ್ರವೇಶಿಸಿ ಸರಿಮಾಡಬೇಕು. ಇಲ್ಲವಾದರೆ ಈ ಜಿಲ್ಲೆಯ ಜನರು ವಿಪರೀತ ಬೆಲೆ ತೆರಲಿದ್ದಾರೆ’ ಎಂದು ಅವರು ಎಚ್ಚರಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕರ್ನಾಟಕದಲ್ಲಿ ನೀರಾವರಿ ಯೋಜನೆಗಳನ್ನು ಸಕಾಲಕ್ಕೆ ಕಾರ್ಯಗತ ಮಾಡಲಾಗದೇ ರಾಜ್ಯ ಕಾಂಗ್ರೆಸ್ ಸರ್ಕಾರವು ಕೇಂದ್ರ ಸರ್ಕಾರವನ್ನು ಅನಗತ್ಯವಾಗಿ ದೂರುತ್ತಿದೆ. ಸುಖಾಸುಮ್ಮನೆ ಅಪಪ್ರಚಾರ ಮಾಡುತ್ತಿದೆ ಎಂದು ರಾಜ್ಯಸಭಾ ಸದಸ್ಯ ಎಚ್.ಡಿ. ದೇವೇಗೌಡ ದೂರಿದರು.</p>.<p>ರಾಜ್ಯಸಭೆಯಲ್ಲಿ ಸೋಮವಾರ ಬಜೆಟ್ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ಎತ್ತಿನಹೊಳೆ, ಮೇಕೆದಾಟು ಯೋಜನೆಗಳ ವಿಳಂಬಕ್ಕೆ ರಾಜ್ಯ ಸರ್ಕಾರವೇ ಕಾರಣ. ಅದನ್ನು ಮರೆಮಾಚಿಕೊಳ್ಳಲು ಕೇಂದ್ರವನ್ನು ದೂರುತ್ತಿದೆ. ಕರ್ನಾಟಕದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷದಿಂದ ಎತ್ತಿನಹೊಳೆ ಯೋಜನೆ ಆಮೆಗತಿಯಲ್ಲಿ ಸಾಗಿದೆ’ ಎಂದರು. </p>.<p>ಎತ್ತಿನಹೊಳೆ ಯೋಜನೆ ಕಾರ್ಯಗತ ಮಾಡುವಲ್ಲಿ ಕಾಂಗ್ರೆಸ್ ಸರ್ಕಾರ ಅನೇಕ ತಪ್ಪುಗಳನ್ನು ಮಾಡಿದೆ. ಪರಿಸರಕ್ಕೆ ಧಕ್ಕೆ ತಂದಿದೆ ಹಾಗೂ ಅನೇಕ ಕಾನೂನು, ನಿಯಮಗಳನ್ನು ಉಲ್ಲಂಘನೆ ಮಾಡಿದೆ ಎಂದು ಆರೋಪ ಮಾಡಿದ ಅವರು, ‘ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ಯೋಜನೆಗೆ ಶಂಕುಸ್ಥಾಪನೆ ಮಾಡಲಾಗಿತ್ತು. ಆಗ ಜಗದೀಶ್ ಶೆಟ್ಟರ್ ಅವರು ರಾಜ್ಯದ ಮುಖ್ಯಮಂತ್ರಿ ಆಗಿದ್ದರು, ಆಗ ಆ ಯೋಜನೆಯ ಅಂದಾಜು ವೆಚ್ಚ ₹8 ಸಾವಿರ ಕೋಟಿ. ಈಗ ಯೋಜನಾ ಮೊತ್ತ ₹33 ಸಾವಿರ ಕೋಟಿಗೆ ಏರಿದೆ. ಈವರೆಗೂ ಒಂದು ಹನಿ ನೀರು ಕೂಡ ಹರಿದಿಲ್ಲ. ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆಗಳಿಗೆ ತೊಟ್ಟು ನೀರು ಹೋಗಿಲ್ಲ. ಅಷ್ಟೇ ಅಲ್ಲದೆ, ಆ ಯೋಜನೆ ಕಾರ್ಯಕಗತ ಆಗುತ್ತಿರುವ ಹಾಸನ ಜಿಲ್ಲೆಯ ಸಕಲೇಶಪುರಕ್ಕೆ ಹತ್ತಿರದಲ್ಲಿರುವ ಅರಸೀಕರೆಗೇ ನೀರು ಬಂದಿಲ್ಲ. ಈ ಬಗ್ಗೆ ನಾನು ಸಂಪುಟಗಟ್ಟಲೆ ಮಾಹಿತಿ ಇಟ್ಟುಕೊಂಡು ಮಾತನಾಡಬಲ್ಲೆ’ ಎಂದರು. </p>.<p>‘ನಾನು ನೀರಾವರಿ ಸಚಿವನಾಗಿ, ಮುಖ್ಯಮಂತ್ರಿಯಾಗಿ ಹಾಗೂ ಪ್ರಧಾನಿಯಾಗಿ ಕೆಲಸ ಮಾಡಿದ್ದೇನೆ. ನನಗೆ ಈ ಬಗ್ಗೆ ಪೂರ್ಣ ಮಾಹಿತಿ, ಅನುಭವ ಇದೆ. ಮೇಕೆದಾಟು ಯೋಜನೆಗೂ ರಾಜ್ಯ ಸರ್ಕಾರವೇ ಅಡ್ಡಿಯಾಗಿದೆ. ಈ ಯೋಜನೆ ಕಾರ್ಯಗತವಾಗುವ ಪ್ರಸ್ತಾವಿತ ಜಾಗ ನನಗೆ ಗೊತ್ತು. ಒಂದು ಕಡೆ ಆನೆ ಕಾರಿಡಾರ್, ಮತ್ತೊಂಡೆ ಅರಣ್ಯ ಮತ್ತು ನವ್ಯಜೀವಿ ಸಂಪತ್ತು ಇದೆ. ಪ್ರತಿದಿನವೂ ನಡೆಯುತ್ತಿರುವ ಮಾನವ-ವನ್ಯಜೀವಿ ಸಂಘರ್ಷದಿಂದ ಅಮಾಯಕರು ಬಲಿ ಆಗುತ್ತಿದ್ದಾರೆ. ಇದನ್ನು ತಡೆಯಲು ರಾಜ್ಯ ಸರ್ಕಾರಕ್ಕೆ ಆಗಿಲ್ಲ’ ಎಂದು ಅವರು ಟೀಕಿಸಿದರು. </p>.<p>‘ಯಾವ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ನೀರು ಕೊಡಬೇಕು ಎಂದು ಸರ್ಕಾರವು ಎತ್ತಿಹೊಳೆ ಯೋಜನೆ ಮೂಲಕ ರೂಪಿಸಿತ್ತೋ, ಈಗ ಆ ಯೋಜನೆ ಕಾರ್ಯಗತವಾಗದೇ ಅದೇ ಜಿಲ್ಲೆಗಳಿಗೆ ಬೆಂಗಳೂರಿನ ಕೊಳಚೆ ನೀರನ್ನು ಮೂರು ಹಂತಗಳಲ್ಲಿ ಶುದ್ಧೀಕರಿಸದೆ ಮಲೀನ ನೀರನ್ನು ಹರಿಸುತ್ತಿದೆ. ಆ ನೀರು ಮಾನವ ಬಳಕೆ ಯೋಗ್ಯವಲ್ಲದ್ದು. ಇದರ ಪರಿಣಾಮವಾಗಿ ಆ ಭಾಗದಲ್ಲಿ ಬೆಳೆಯುತ್ತಿರುವ ಬೆಳೆಗಳು ಹಾಗೂ ತರಕಾರಿಗಳು ವಿಷಕಾರಿಯಾಗುತ್ತಿದ್ದು, ಅವು ಸೇವನೆಗೆ ಯೋಗ್ಯವಲ್ಲದ್ದಾಗಿವೆ. ಜನರ ಜೀವದ ಜತೆಗೆ ರಾಜ್ಯ ಸರ್ಕಾರ ಚೆಲ್ಲಾಟವಾಡುತ್ತಿದೆ’ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. </p>.<p>‘ಈ ಎರಡೂ ಜಿಲ್ಲೆಗಳು ಎದುರಿಸುತ್ತಿರುವ ಸಮಸ್ಯೆ ದಿನದಿಂದ ದಿನಕ್ಕೆ ಬಿಗಡಾಯಿಸುತ್ತಿದ್ದು, ಪ್ರಧಾನಿ ನರೇದ್ರ ಮೋದಿ ಹಾಗೂ ಕೇಂದ್ರದ ಅರಣ್ಯ ಭೂಪೇಂದ್ರ ಯಾದವ್ ಕೂಡಲೇ ಮಧ್ಯಪ್ರವೇಶಿಸಿ ಸರಿಮಾಡಬೇಕು. ಇಲ್ಲವಾದರೆ ಈ ಜಿಲ್ಲೆಯ ಜನರು ವಿಪರೀತ ಬೆಲೆ ತೆರಲಿದ್ದಾರೆ’ ಎಂದು ಅವರು ಎಚ್ಚರಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>