<p><strong>ಬೆಂಗಳೂರು</strong>: ‘ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸುವಂತೆ ಎಚ್.ಡಿ.ದೇವೇಗೌಡರನ್ನು ಮನವೊಲಿಸುವುದು ಸುಲಭದ ಕೆಲಸವಾಗಿರಲಿಲ್ಲ. ಎಲ್ಲರ ಆಶೋತ್ತರಗಳಿಗೆ ಪ್ರೀತಿ ಪೂರ್ವಕವಾಗಿ ಮಣಿದರು’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.</p>.<p>ರಾಜ್ಯಸಭಾ ಚುನಾವಣೆಗೆ ಎಚ್.ಡಿ ದೇವೇಗೌಡ ಸ್ಪರ್ಧಿಸುವುದನ್ನು ಕುಮಾರಸ್ವಾಮಿ ಸೋಮವಾರ ಬೆಳಿಗ್ಗೆ ಟ್ವೀಟ್ ಮೂಲಕ ಮಾಹಿತಿ ನೀಡಿದರು.</p>.<p>ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ಭಾನುವಾರ ರಾತ್ರಿ ದೇವೇಗೌಡರಿಗೆ ಕರೆ ಮಾಡಿ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ವಿನಂತಿಸಿ, ಬೆಂಬಲ ನೀಡುವುದಾಗಿ ಭರವಸೆ ನೀಡಿದರು ಎಂದು ಮೂಲಗಳು ಹೇಳಿವೆ.</p>.<p>‘ನಮ್ಮ ಪಕ್ಷದ ಶಾಸಕರು, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ಮತ್ತು ರಾಷ್ಟ್ರದ ಹಲವು ನಾಯಕರ ಮನವಿ ಮೇರೆಗೆ ದೇವೇಗೌಡರು ಸ್ಪರ್ಧಿಸಲು ಒಪ್ಪಿಕೊಂಡಿದ್ದಾರೆ’ ಎಂದು ಕುಮಾರಸ್ವಾಮಿ ಹೇಳಿದ್ದಾರೆ.</p>.<p>‘ರಾಜಕೀಯದಲ್ಲಿ ಜನರಿಂದಲೇ ಗೆಲುವು ಸೋಲುಗಳನ್ನು ಕಂಡಿರುವ, ಜನರಿಂದಲೇ ದೇಶದ ಅತ್ಯುನ್ನತ ಸ್ಥಾನಕ್ಕೇರಿದ ದೇವೇಗೌಡರನ್ನು ಒಪ್ಪಿಸುವುದು ಸುಲಭವಾಗಿರಲಿಲ್ಲ. ರಾಜ್ಯಸಭೆಯಲ್ಲಿ ದೇವೇಗೌಡರು ರಾಜ್ಯದ ಅಗ್ರ ಪ್ರತಿನಿಧಿಯಾಗಲಿದ್ದಾರೆ. ಮಂಗಳವಾರ ನಾಮಪತ್ರ ಸಲ್ಲಿಸಲಿದ್ದಾರೆ‘ ಎಂದು ಟ್ವೀಟ್ನಲ್ಲಿ ತಿಳಿಸಿದ್ದಾರೆ.</p>.<p>ವಿಧಾನಸಭೆಯಲ್ಲಿ ಜೆಡಿಎಸ್ 34 ಸದಸ್ಯ ಬಲ ಹೊಂದಿದ್ದು, ಹೆಚ್ಚುವರಿ ಮತವನ್ನು ದೇವೇಗೌಡರಿಗೆ ನೀಡಲು ಕಾಂಗ್ರೆಸ್ ಒಪ್ಪಿದೆ. ಗೌಡರ ವಿರುದ್ಧ ಅಭ್ಯರ್ಥಿಯನ್ನು ಕಣಕ್ಕಿಳಿಸದೇ ಇರಲು ಬಿಜೆಪಿಯೂ ನಿರ್ಧರಿಸಿದೆ.</p>.<p><strong>‘ಬಿಜೆಪಿಯ ಎಲ್ಲ ವ್ಯಕ್ತಿಗಳಿಂದ ಸಂಪರ್ಕ ಕಡಿದುಕೊಳ್ಳಿ’</strong><br />‘ಬಿಜೆಪಿಯ ಶಾಸಕರು, ಮಂತ್ರಿಗಳು ಮತ್ತು ನಾಯಕರು ಸೇರಿದಂತೆ ಯಾರ ಜತೆಗೂ ಸಂಪರ್ಕ ಇಟ್ಟುಕೊಳ್ಳಬಾರದು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ ಶಾಸಕರಿಗೆ ತಾಕೀತು ಮಾಡಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರ ನಾಮಪತ್ರ ಸಲ್ಲಿಕೆಯ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿದರು.</p>.<p>ಈ ಸಂಬಂಧ ನಾನು ನಮ್ಮ ಎಲ್ಲ ಶಾಸಕರಿಗೂ ನಿರ್ದೇಶನ ನೀಡಿದ್ದೇನೆ. ಅಭಿವೃದ್ಧಿ ಕಾರ್ಯದ ಹೆಸರಿನಲ್ಲಿ ನಿಮ್ಮನ್ನು ಕರೆದು ಸಿಲುಕಿಸುವ ಪ್ರಯತ್ನ ಮಾಡಬಹುದು. ನಿಮ್ಮ ಹೆಸರು ದುರುಪಯೋಗ ಮಾಡಿಕೊಳ್ಳಬಹುದು. ಹೀಗಾಗಿ ಯಾರೂ ಬಿಜೆಪಿಯವರ ಜತೆ ಸೇರಬಾರದು ಎಂದು ಕಟ್ಟುನಿಟ್ಟಾಗಿ ಹೇಳಿದ್ದೇನೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸುವಂತೆ ಎಚ್.ಡಿ.ದೇವೇಗೌಡರನ್ನು ಮನವೊಲಿಸುವುದು ಸುಲಭದ ಕೆಲಸವಾಗಿರಲಿಲ್ಲ. ಎಲ್ಲರ ಆಶೋತ್ತರಗಳಿಗೆ ಪ್ರೀತಿ ಪೂರ್ವಕವಾಗಿ ಮಣಿದರು’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.</p>.<p>ರಾಜ್ಯಸಭಾ ಚುನಾವಣೆಗೆ ಎಚ್.ಡಿ ದೇವೇಗೌಡ ಸ್ಪರ್ಧಿಸುವುದನ್ನು ಕುಮಾರಸ್ವಾಮಿ ಸೋಮವಾರ ಬೆಳಿಗ್ಗೆ ಟ್ವೀಟ್ ಮೂಲಕ ಮಾಹಿತಿ ನೀಡಿದರು.</p>.<p>ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ಭಾನುವಾರ ರಾತ್ರಿ ದೇವೇಗೌಡರಿಗೆ ಕರೆ ಮಾಡಿ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ವಿನಂತಿಸಿ, ಬೆಂಬಲ ನೀಡುವುದಾಗಿ ಭರವಸೆ ನೀಡಿದರು ಎಂದು ಮೂಲಗಳು ಹೇಳಿವೆ.</p>.<p>‘ನಮ್ಮ ಪಕ್ಷದ ಶಾಸಕರು, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ಮತ್ತು ರಾಷ್ಟ್ರದ ಹಲವು ನಾಯಕರ ಮನವಿ ಮೇರೆಗೆ ದೇವೇಗೌಡರು ಸ್ಪರ್ಧಿಸಲು ಒಪ್ಪಿಕೊಂಡಿದ್ದಾರೆ’ ಎಂದು ಕುಮಾರಸ್ವಾಮಿ ಹೇಳಿದ್ದಾರೆ.</p>.<p>‘ರಾಜಕೀಯದಲ್ಲಿ ಜನರಿಂದಲೇ ಗೆಲುವು ಸೋಲುಗಳನ್ನು ಕಂಡಿರುವ, ಜನರಿಂದಲೇ ದೇಶದ ಅತ್ಯುನ್ನತ ಸ್ಥಾನಕ್ಕೇರಿದ ದೇವೇಗೌಡರನ್ನು ಒಪ್ಪಿಸುವುದು ಸುಲಭವಾಗಿರಲಿಲ್ಲ. ರಾಜ್ಯಸಭೆಯಲ್ಲಿ ದೇವೇಗೌಡರು ರಾಜ್ಯದ ಅಗ್ರ ಪ್ರತಿನಿಧಿಯಾಗಲಿದ್ದಾರೆ. ಮಂಗಳವಾರ ನಾಮಪತ್ರ ಸಲ್ಲಿಸಲಿದ್ದಾರೆ‘ ಎಂದು ಟ್ವೀಟ್ನಲ್ಲಿ ತಿಳಿಸಿದ್ದಾರೆ.</p>.<p>ವಿಧಾನಸಭೆಯಲ್ಲಿ ಜೆಡಿಎಸ್ 34 ಸದಸ್ಯ ಬಲ ಹೊಂದಿದ್ದು, ಹೆಚ್ಚುವರಿ ಮತವನ್ನು ದೇವೇಗೌಡರಿಗೆ ನೀಡಲು ಕಾಂಗ್ರೆಸ್ ಒಪ್ಪಿದೆ. ಗೌಡರ ವಿರುದ್ಧ ಅಭ್ಯರ್ಥಿಯನ್ನು ಕಣಕ್ಕಿಳಿಸದೇ ಇರಲು ಬಿಜೆಪಿಯೂ ನಿರ್ಧರಿಸಿದೆ.</p>.<p><strong>‘ಬಿಜೆಪಿಯ ಎಲ್ಲ ವ್ಯಕ್ತಿಗಳಿಂದ ಸಂಪರ್ಕ ಕಡಿದುಕೊಳ್ಳಿ’</strong><br />‘ಬಿಜೆಪಿಯ ಶಾಸಕರು, ಮಂತ್ರಿಗಳು ಮತ್ತು ನಾಯಕರು ಸೇರಿದಂತೆ ಯಾರ ಜತೆಗೂ ಸಂಪರ್ಕ ಇಟ್ಟುಕೊಳ್ಳಬಾರದು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ ಶಾಸಕರಿಗೆ ತಾಕೀತು ಮಾಡಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರ ನಾಮಪತ್ರ ಸಲ್ಲಿಕೆಯ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿದರು.</p>.<p>ಈ ಸಂಬಂಧ ನಾನು ನಮ್ಮ ಎಲ್ಲ ಶಾಸಕರಿಗೂ ನಿರ್ದೇಶನ ನೀಡಿದ್ದೇನೆ. ಅಭಿವೃದ್ಧಿ ಕಾರ್ಯದ ಹೆಸರಿನಲ್ಲಿ ನಿಮ್ಮನ್ನು ಕರೆದು ಸಿಲುಕಿಸುವ ಪ್ರಯತ್ನ ಮಾಡಬಹುದು. ನಿಮ್ಮ ಹೆಸರು ದುರುಪಯೋಗ ಮಾಡಿಕೊಳ್ಳಬಹುದು. ಹೀಗಾಗಿ ಯಾರೂ ಬಿಜೆಪಿಯವರ ಜತೆ ಸೇರಬಾರದು ಎಂದು ಕಟ್ಟುನಿಟ್ಟಾಗಿ ಹೇಳಿದ್ದೇನೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>