<p><strong>ಬೆಂಗಳೂರು</strong>: ‘ಕೂತರೆ ಎದ್ದೇಳಲು ಆಗಲ್ಲ. ನನ್ನಲ್ಲಿ ಶಕ್ತಿ ಇಲ್ಲ ಎಂದು ಕೆಲವರು ಅಪಹಾಸ್ಯ ಮಾಡುತ್ತಿದ್ದಾರೆ. ಶಕ್ತಿ ಇದೆ ಎಂಬುದನ್ನು ಹೋರಾಟದ ಮೂಲಕ ತೋರಿಸುತ್ತೇನೆ’ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಕೆ.ಎನ್.ರಾಜಣ್ಣ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತ್ಯುತ್ತರ ನೀಡಿದರು.</p>.<p>ಜೆಡಿಎಸ್ ಬೆಂಗಳೂರು ನಗರ ಘಟಕ ಜೆ.ಪಿ.ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ‘ಜನತಾ ಮಿತ್ರ’ ವಾಹನಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಭಗವಂತನ ಅನುಗ್ರಹ, ದೈವಶಕ್ತಿ ನಮ್ಮ ಮೇಲೆ ಇದೆ. ಹೋರಾಟದ ಬದುಕಿನಲ್ಲಿ ಎಂದಿಗೂ ಎದೆಗುಂದಿಲ್ಲ. ಮುಂದೆಯೂ ಎದೆಗುಂದುವುದಿಲ್ಲ’ ಎಂದರು.</p>.<p>‘ಹಳ್ಳಿ ರೈತನ ಮಗ, ಇವನು ಸಾಧಿಸಬಲ್ಲ ಎಂದು ಹೇಳಿದ್ದ ಮಹಾನಾಯಕರೂ ಇದ್ದಾರೆ. ಪಕ್ಷವನ್ನು ಇಲ್ಲದಂತೆ ಮಾಡಬೇಕು ಎಂದು ಹೊರಟವರೂ ಇದ್ದಾರೆ. ಅದು ಆಗುವುದಿಲ್ಲ ಎಂಬುದು ಈಗ ಗೊತ್ತಾಗಿದೆ. ಕಾರ್ಯಕರ್ತರು ಆ ಶಕ್ತಿಯನ್ನು ಉಳಿಸಿಕೊಂಡಿದ್ದಾರೆ’ ಎಂದು ಹೇಳಿದರು.</p>.<p>‘ನಾನು ಮುಖ್ಯಮಂತ್ರಿ ಆಗಿದ್ದಾಗ ಬೆಂಗಳೂರಿಗೆ ಏನೆಲ್ಲಾ ಕೊಡುಗೆ ನೀಡಿದ್ದೇನೆ ಎಂಬುದನ್ನು ಮಾತನಾಡಬಲ್ಲೆ. ವಿವರವಾಗಿ ಹೇಳುವ ಕಾಲ ಬರುತ್ತದೆ. ಆಗ ಹೇಳುತ್ತೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಕೂತರೆ ಎದ್ದೇಳಲು ಆಗಲ್ಲ. ನನ್ನಲ್ಲಿ ಶಕ್ತಿ ಇಲ್ಲ ಎಂದು ಕೆಲವರು ಅಪಹಾಸ್ಯ ಮಾಡುತ್ತಿದ್ದಾರೆ. ಶಕ್ತಿ ಇದೆ ಎಂಬುದನ್ನು ಹೋರಾಟದ ಮೂಲಕ ತೋರಿಸುತ್ತೇನೆ’ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಕೆ.ಎನ್.ರಾಜಣ್ಣ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತ್ಯುತ್ತರ ನೀಡಿದರು.</p>.<p>ಜೆಡಿಎಸ್ ಬೆಂಗಳೂರು ನಗರ ಘಟಕ ಜೆ.ಪಿ.ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ‘ಜನತಾ ಮಿತ್ರ’ ವಾಹನಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಭಗವಂತನ ಅನುಗ್ರಹ, ದೈವಶಕ್ತಿ ನಮ್ಮ ಮೇಲೆ ಇದೆ. ಹೋರಾಟದ ಬದುಕಿನಲ್ಲಿ ಎಂದಿಗೂ ಎದೆಗುಂದಿಲ್ಲ. ಮುಂದೆಯೂ ಎದೆಗುಂದುವುದಿಲ್ಲ’ ಎಂದರು.</p>.<p>‘ಹಳ್ಳಿ ರೈತನ ಮಗ, ಇವನು ಸಾಧಿಸಬಲ್ಲ ಎಂದು ಹೇಳಿದ್ದ ಮಹಾನಾಯಕರೂ ಇದ್ದಾರೆ. ಪಕ್ಷವನ್ನು ಇಲ್ಲದಂತೆ ಮಾಡಬೇಕು ಎಂದು ಹೊರಟವರೂ ಇದ್ದಾರೆ. ಅದು ಆಗುವುದಿಲ್ಲ ಎಂಬುದು ಈಗ ಗೊತ್ತಾಗಿದೆ. ಕಾರ್ಯಕರ್ತರು ಆ ಶಕ್ತಿಯನ್ನು ಉಳಿಸಿಕೊಂಡಿದ್ದಾರೆ’ ಎಂದು ಹೇಳಿದರು.</p>.<p>‘ನಾನು ಮುಖ್ಯಮಂತ್ರಿ ಆಗಿದ್ದಾಗ ಬೆಂಗಳೂರಿಗೆ ಏನೆಲ್ಲಾ ಕೊಡುಗೆ ನೀಡಿದ್ದೇನೆ ಎಂಬುದನ್ನು ಮಾತನಾಡಬಲ್ಲೆ. ವಿವರವಾಗಿ ಹೇಳುವ ಕಾಲ ಬರುತ್ತದೆ. ಆಗ ಹೇಳುತ್ತೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>