<p><strong>ಹಾಸನ</strong>: ‘ಸಿಎಎ ಕಾಯ್ದೆ ಜಾರಿಯಿಂದ ಮುಸ್ಲಿಮರಿಗೆ ಮಾತ್ರವಲ್ಲ ಹಿಂದೂಗಳಿಗೂ ತೊಂದರೆಯಿದೆ. ಆದರೆ, ಇದರ ವಿರುದ್ಧ ಗಟ್ಟಿಯಾಗಿ ಧ್ವನಿ ಎತ್ತಲು ಜೆಡಿಎಸ್ ಪಕ್ಷದಲ್ಲಿ ಇರುವುದು ಇಬ್ಬರೇ ಸಂಸದರು’ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಹೇಳಿದರು.</p>.<p>ಬೇಲೂರು ತಾಲ್ಲೂಕಿನ ಹಳೇಬೀಡಿನಲ್ಲಿ ನಡೆಯುವ ತರಳಬಾಳು ಹುಣ್ಣಿಮೆ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಲುವಾಗಿ ಹಾಸನಕ್ಕೆ ಭೇಟಿ ನೀಡಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>ಸಿಎಎ ಪ್ರತಿಭಟನಕಾರರ ವಿರುದ್ಧ ಗುಂಡು ಹಾರಿಸುವುದರಿಂದ ಸಮಸ್ಯೆ ಬಗೆಹರಿಯುವುದಿಲ್ಲ. ಪರಸ್ಪರ ಕೂತು ಚರ್ಚಿಸಿ ತೀರ್ಮಾನ ಕೈಗೊಳ್ಳಬೇಕು ಎಂದರು.</p>.<p>ಮುಸ್ಲಿಂ ಜನಾಂಗದವರನ್ನು ಬಿಟ್ಟು ಕಾಯ್ದೆ ರೂಪಿಸಲಾಗಿದೆ. ಅಸ್ಸಾಂನಲ್ಲಿ ಬುಡಕಟ್ಟು ಜನಾಂಗ ವಾಸಿಸುತ್ತಿದ್ದು ಎನ್ಆರ್ಸಿ ಕಾಯ್ದೆ ಜಾರಿಗೊಳಿಸಿದರೆ ಅವರಿಗೆ ತೊಂದರೆ ಉಂಟಾಗಲಿದೆ. ಸಮಸ್ಯೆ ಬಗ್ಗೆ ನಾನು ಪ್ರಧಾನಿಯಾಗಿದ್ದಾಗಿನಿಂದಲೂ ಅರಿವಿದೆ ಎಂದು ಹೇಳಿದರು.</p>.<p>‘ನನ್ನ ಅವಧಿಯಲ್ಲಿ ಮುಸ್ಲಿಮರ ಅನೇಕ ಸಮಸ್ಯೆಗಳನ್ನು ಬಗೆಹರಿಸಲಾಗಿತ್ತು. ಅನೇಕರನ್ನು ಬಿಬಿಎಂಪಿ ಸದಸ್ಯರನ್ನಾಗಿ ಮಾಡಿದ್ದೇನೆ. ಆದರೆ, ಚುನಾವಣಾ ಸಂದರ್ಭದಲ್ಲಿ ರಾಹುಲ್ ಗಾಂಧಿ ನಮ್ಮನ್ನು ಬಿಜೆಪಿ ಬಿ ಟೀಮ್ ಎಂದರು. ಇದರಿಂದ ಮತಗಳಿಗೆಯಲ್ಲಿ ವ್ಯತ್ಯಾಸ ಉಂಟಾಯಿತು’ ಎಂದು ಹೇಳಿದರು.</p>.<p>ನನಗೆ ರಾಜಕೀಯದಲ್ಲಿ 60 ವರ್ಷಗಳ ಅನುಭವವಿದೆ. ಆ ಅನುಭವದಿಂದಲೇ ಪಕ್ಷ ಸಂಘಟಿಸುವ ಕೆಲಸವನ್ನು ಕೊನೆವರೆಗೂ ಮಾಡುತ್ತೇನೆ ಎಂದು ಹೇಳಿದರು.</p>.<p>ಇನ್ನೂ ಬಜೆಟ್ ಪ್ರತಿ ಓದಿಲ್ಲ ಓದಿದ ಬಳಿಕ ಮಾತನಾಡುತ್ತೇನೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ</strong>: ‘ಸಿಎಎ ಕಾಯ್ದೆ ಜಾರಿಯಿಂದ ಮುಸ್ಲಿಮರಿಗೆ ಮಾತ್ರವಲ್ಲ ಹಿಂದೂಗಳಿಗೂ ತೊಂದರೆಯಿದೆ. ಆದರೆ, ಇದರ ವಿರುದ್ಧ ಗಟ್ಟಿಯಾಗಿ ಧ್ವನಿ ಎತ್ತಲು ಜೆಡಿಎಸ್ ಪಕ್ಷದಲ್ಲಿ ಇರುವುದು ಇಬ್ಬರೇ ಸಂಸದರು’ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಹೇಳಿದರು.</p>.<p>ಬೇಲೂರು ತಾಲ್ಲೂಕಿನ ಹಳೇಬೀಡಿನಲ್ಲಿ ನಡೆಯುವ ತರಳಬಾಳು ಹುಣ್ಣಿಮೆ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಲುವಾಗಿ ಹಾಸನಕ್ಕೆ ಭೇಟಿ ನೀಡಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>ಸಿಎಎ ಪ್ರತಿಭಟನಕಾರರ ವಿರುದ್ಧ ಗುಂಡು ಹಾರಿಸುವುದರಿಂದ ಸಮಸ್ಯೆ ಬಗೆಹರಿಯುವುದಿಲ್ಲ. ಪರಸ್ಪರ ಕೂತು ಚರ್ಚಿಸಿ ತೀರ್ಮಾನ ಕೈಗೊಳ್ಳಬೇಕು ಎಂದರು.</p>.<p>ಮುಸ್ಲಿಂ ಜನಾಂಗದವರನ್ನು ಬಿಟ್ಟು ಕಾಯ್ದೆ ರೂಪಿಸಲಾಗಿದೆ. ಅಸ್ಸಾಂನಲ್ಲಿ ಬುಡಕಟ್ಟು ಜನಾಂಗ ವಾಸಿಸುತ್ತಿದ್ದು ಎನ್ಆರ್ಸಿ ಕಾಯ್ದೆ ಜಾರಿಗೊಳಿಸಿದರೆ ಅವರಿಗೆ ತೊಂದರೆ ಉಂಟಾಗಲಿದೆ. ಸಮಸ್ಯೆ ಬಗ್ಗೆ ನಾನು ಪ್ರಧಾನಿಯಾಗಿದ್ದಾಗಿನಿಂದಲೂ ಅರಿವಿದೆ ಎಂದು ಹೇಳಿದರು.</p>.<p>‘ನನ್ನ ಅವಧಿಯಲ್ಲಿ ಮುಸ್ಲಿಮರ ಅನೇಕ ಸಮಸ್ಯೆಗಳನ್ನು ಬಗೆಹರಿಸಲಾಗಿತ್ತು. ಅನೇಕರನ್ನು ಬಿಬಿಎಂಪಿ ಸದಸ್ಯರನ್ನಾಗಿ ಮಾಡಿದ್ದೇನೆ. ಆದರೆ, ಚುನಾವಣಾ ಸಂದರ್ಭದಲ್ಲಿ ರಾಹುಲ್ ಗಾಂಧಿ ನಮ್ಮನ್ನು ಬಿಜೆಪಿ ಬಿ ಟೀಮ್ ಎಂದರು. ಇದರಿಂದ ಮತಗಳಿಗೆಯಲ್ಲಿ ವ್ಯತ್ಯಾಸ ಉಂಟಾಯಿತು’ ಎಂದು ಹೇಳಿದರು.</p>.<p>ನನಗೆ ರಾಜಕೀಯದಲ್ಲಿ 60 ವರ್ಷಗಳ ಅನುಭವವಿದೆ. ಆ ಅನುಭವದಿಂದಲೇ ಪಕ್ಷ ಸಂಘಟಿಸುವ ಕೆಲಸವನ್ನು ಕೊನೆವರೆಗೂ ಮಾಡುತ್ತೇನೆ ಎಂದು ಹೇಳಿದರು.</p>.<p>ಇನ್ನೂ ಬಜೆಟ್ ಪ್ರತಿ ಓದಿಲ್ಲ ಓದಿದ ಬಳಿಕ ಮಾತನಾಡುತ್ತೇನೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>