<p><strong>ನವದೆಹಲಿ</strong>: ‘ನದಿ ಜಲ ಸಂಪನ್ಮೂಲ ಸದ್ವಿನಿಯೋಗಕ್ಕೆ ಎಲ್ಲಾ ಪರಿಣಾಮಕಾರಿ ಕ್ರಮಗಳ ಅಗತ್ಯವಿದೆ. ಅದಕ್ಕೆ ದೀರ್ಘಾವಧಿ ಕಾರ್ಯಕ್ರಮಗಳ ಅನುಷ್ಠಾನ ಅಗತ್ಯವಿದೆ. ಆದ್ದರಿಂದ ಗೋದಾವರಿ-ಕಾವೇರಿ ನದಿ ಜೋಡಣೆ ಯೋಜನೆಗೆ ಆದ್ಯತೆ ನೀಡಬೇಕು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಆಗ್ರಹಿಸಿದರು. </p>.<p>ರಾಜ್ಯಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯಲ್ಲಿ ಗುರುವಾರ ಪಾಲ್ಗೊಂಡು ಮಾತನಾಡಿದ ಅವರು, ಬೆಂಗಳೂರಿನ ಕುಡಿಯುವ ನೀರಿನ ಬವಣೆಯ ಬಗ್ಗೆ ಮತ್ತೊಮ್ಮೆ ಗಮನ ಸೆಳೆದರು. </p>.<p>ಬೆಂಗಳೂರಿನಲ್ಲಿ ನೀರಿನ ಟ್ಯಾಂಕರ್ಗಳು ಬಡ ನಿವಾಸಿಗಳನ್ನು ಶೋಷಿಸುತ್ತಿವೆ ಎಂಬ ಅಂಶವನ್ನು ಸದನದ ಗಮನಕ್ಕೆ ತಂದ ಅವರು, ಹಣಕಾಸು ಸಚಿವರು ಕುಡಿಯುವ ನೀರಿನ ಯೋಜನೆಗಳಿಗೆ ₹1,400 ಕೋಟಿ ಮಂಜೂರು ಮಾಡಿದ್ದಾರೆ. ಆದರೆ, ದೀರ್ಘಾವಧಿಯ ನೀರಿನ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಗೋದಾವರಿ-ಕಾವೇರಿ ಜೋಡಣೆಗೆ ಆದ್ಯತೆ ನೀಡಬೇಕು’ ಎಂದು ಸಲಹೆ ನೀಡಿದರು. </p>.<p>ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಭಾಗದಿಂದ ಯುವಜನರು ನಗರಗಳಿಗೆ ವಲಸೆ ಬರುವ ಪ್ರಮಾಣ ಹೆಚ್ಚುತ್ತಲೇ ಇದೆ ಎಂದು ಕಳವಳ ವ್ಯಕ್ತಪಡಿಸಿದರು.</p>.<p>ಬೆಂಗಳೂರಿನ ಜನಸಂಖ್ಯೆ ಈಗ 1.40 ಕೋಟಿಗೆ ಮುಟ್ಟಿದೆ. ಎಲ್ಲ ಯುವಕರು ತಮ್ಮ ವಿದ್ಯಾಭ್ಯಾಸ ಮುಗಿದ ತಕ್ಷಣ ಹಳ್ಳಿಗಳನ್ನು ತೊರೆದು ನಗರಗಳಿಗೆ ಬಂದು ಸೇರುತ್ತಿದ್ದಾರೆ. ಇದು ಜೀವನೋಪಾಯದ ಸಮತೋಲನವನ್ನು ತಪ್ಪಿಸುತ್ತಿದೆ. ಯುವಕರಿಗೆ ತಮ್ಮ ಪ್ರದೇಶಗಳಿಗಳಲ್ಲಿಯೇ ಹೆಚ್ಚೆಚ್ಚು ಉದ್ಯೋಗಾವಕಾಶ ಕಲ್ಪಿಸುವ ಅಗತ್ಯವಿದೆ ಎಂದು ಹೇಳಿದರು. </p>.<p>ಕೃಷಿ ಉತ್ಪನ್ನಗಳಿಗೆ ಹೆಚ್ಚು ಬೆಂಬಲ ನೀಡುವುದನ್ನು ನಾವು ಮುಂದುವರಿಸಬೇಕು. ಬಿಹಾರದಲ್ಲಿ ಮಖಾನಾ ಮಂಡಳಿ ರಚನೆ ಮಾಡಿರುವುದನ್ನು ಸ್ವಾಗತಿಸುತ್ತೇನೆ. ಅದೇ ರೀತಿ ಹಲಸಿನ ಹಣ್ಣು, ನೇರಳೆ, ಹುಣಸೆಹಣ್ಣು ಮಂಡಳಿ ರಚಿಸಬೇಕು ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ನದಿ ಜಲ ಸಂಪನ್ಮೂಲ ಸದ್ವಿನಿಯೋಗಕ್ಕೆ ಎಲ್ಲಾ ಪರಿಣಾಮಕಾರಿ ಕ್ರಮಗಳ ಅಗತ್ಯವಿದೆ. ಅದಕ್ಕೆ ದೀರ್ಘಾವಧಿ ಕಾರ್ಯಕ್ರಮಗಳ ಅನುಷ್ಠಾನ ಅಗತ್ಯವಿದೆ. ಆದ್ದರಿಂದ ಗೋದಾವರಿ-ಕಾವೇರಿ ನದಿ ಜೋಡಣೆ ಯೋಜನೆಗೆ ಆದ್ಯತೆ ನೀಡಬೇಕು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಆಗ್ರಹಿಸಿದರು. </p>.<p>ರಾಜ್ಯಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯಲ್ಲಿ ಗುರುವಾರ ಪಾಲ್ಗೊಂಡು ಮಾತನಾಡಿದ ಅವರು, ಬೆಂಗಳೂರಿನ ಕುಡಿಯುವ ನೀರಿನ ಬವಣೆಯ ಬಗ್ಗೆ ಮತ್ತೊಮ್ಮೆ ಗಮನ ಸೆಳೆದರು. </p>.<p>ಬೆಂಗಳೂರಿನಲ್ಲಿ ನೀರಿನ ಟ್ಯಾಂಕರ್ಗಳು ಬಡ ನಿವಾಸಿಗಳನ್ನು ಶೋಷಿಸುತ್ತಿವೆ ಎಂಬ ಅಂಶವನ್ನು ಸದನದ ಗಮನಕ್ಕೆ ತಂದ ಅವರು, ಹಣಕಾಸು ಸಚಿವರು ಕುಡಿಯುವ ನೀರಿನ ಯೋಜನೆಗಳಿಗೆ ₹1,400 ಕೋಟಿ ಮಂಜೂರು ಮಾಡಿದ್ದಾರೆ. ಆದರೆ, ದೀರ್ಘಾವಧಿಯ ನೀರಿನ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಗೋದಾವರಿ-ಕಾವೇರಿ ಜೋಡಣೆಗೆ ಆದ್ಯತೆ ನೀಡಬೇಕು’ ಎಂದು ಸಲಹೆ ನೀಡಿದರು. </p>.<p>ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಭಾಗದಿಂದ ಯುವಜನರು ನಗರಗಳಿಗೆ ವಲಸೆ ಬರುವ ಪ್ರಮಾಣ ಹೆಚ್ಚುತ್ತಲೇ ಇದೆ ಎಂದು ಕಳವಳ ವ್ಯಕ್ತಪಡಿಸಿದರು.</p>.<p>ಬೆಂಗಳೂರಿನ ಜನಸಂಖ್ಯೆ ಈಗ 1.40 ಕೋಟಿಗೆ ಮುಟ್ಟಿದೆ. ಎಲ್ಲ ಯುವಕರು ತಮ್ಮ ವಿದ್ಯಾಭ್ಯಾಸ ಮುಗಿದ ತಕ್ಷಣ ಹಳ್ಳಿಗಳನ್ನು ತೊರೆದು ನಗರಗಳಿಗೆ ಬಂದು ಸೇರುತ್ತಿದ್ದಾರೆ. ಇದು ಜೀವನೋಪಾಯದ ಸಮತೋಲನವನ್ನು ತಪ್ಪಿಸುತ್ತಿದೆ. ಯುವಕರಿಗೆ ತಮ್ಮ ಪ್ರದೇಶಗಳಿಗಳಲ್ಲಿಯೇ ಹೆಚ್ಚೆಚ್ಚು ಉದ್ಯೋಗಾವಕಾಶ ಕಲ್ಪಿಸುವ ಅಗತ್ಯವಿದೆ ಎಂದು ಹೇಳಿದರು. </p>.<p>ಕೃಷಿ ಉತ್ಪನ್ನಗಳಿಗೆ ಹೆಚ್ಚು ಬೆಂಬಲ ನೀಡುವುದನ್ನು ನಾವು ಮುಂದುವರಿಸಬೇಕು. ಬಿಹಾರದಲ್ಲಿ ಮಖಾನಾ ಮಂಡಳಿ ರಚನೆ ಮಾಡಿರುವುದನ್ನು ಸ್ವಾಗತಿಸುತ್ತೇನೆ. ಅದೇ ರೀತಿ ಹಲಸಿನ ಹಣ್ಣು, ನೇರಳೆ, ಹುಣಸೆಹಣ್ಣು ಮಂಡಳಿ ರಚಿಸಬೇಕು ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>