ಜೆಡಿಎಸ್ ಪಕ್ಷದ ಕಚೇರಿಯಲ್ಲಿ ಬೆಂಗಳೂರು ಲೋಕಸಭಾ ಕ್ಷೇತ್ರದ ಸಭೆ ನಡೆಸಿದ ಅವರು, ಮುಖ್ಯಮಂತ್ರಿಬಿ.ಎಸ್.ಯಡಿಯೂರಪ್ಪ ಅವರಿಗೆ ಅಭಿನಂದನೆ ಸಲ್ಲಿಸಿದರು. ಮುಂದುವರಿದು, ‘ಗೋಪಾಲಯ್ಯ ಅವರು ನಮ್ಮ ಮೇಲೆ ಅನೇಕ ತಪ್ಪು ಹೇಳಿಕೆ ನೀಡಿದ್ದಾರೆ. ಕುಮಾರಸ್ವಾಮಿ ವಿರುದ್ಧ ಹೇಳಿಕೆ ನೀಡಿ ಬಾಂಬೆಗೆ ಹೋಗಿದ್ದಾರೆ.ಸಭಾಧ್ಯಕ್ಷರು ಈ ವಾರದಲ್ಲಿ ತೀರ್ಮಾನ ಕೊಡುವುದಾಗಿ ತಿಳಿಸಿದ್ದಾರೆ. ನಂತರ ಚುನಾವಣೆ ಇರುತ್ತೋ ಇಲ್ವೋ ಗೊತ್ತಿಲ್ಲ’ ಎಂದರು.