<p><strong>ಬೆಂಗಳೂರು: </strong>ಏಸುಕ್ರಿಸ್ತ ಮತ್ತು ಟಿಪ್ಪು ಸುಲ್ತಾನ್ ಅವರ ಜೀವನ ಚರಿತ್ರೆಯನ್ನು ಶಾಲಾ ಪಠ್ಯದಿಂದ ಕೈಬಿಟ್ಟಿರುವುದಕ್ಕೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಆಕ್ರೋಶ ವ್ಯಕ್ತಪಡಿಸಿದರು.</p>.<p>ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನೆರೆಹೊರೆಯವರನ್ನು ತನ್ನಂತೆ ಕಾಣಬೇಕು ಎಂದು ಬೋಧಿಸಿದ ಶಾಂತಿದೂತ ಏಸುಕ್ರಿಸ್ತ. ಇಂತಹ ಮಹಾತ್ಮರ ಜೀವನ ಚರಿತ್ರೆಯನ್ನು ಮಕ್ಕಳು ತಿಳಿದುಕೊಳ್ಳಲು ಅವಕಾಶ ಇಲ್ಲದಂತೆ ಮಾಡಿರುವುದು ಸರಿಯಲ್ಲ’ ಎಂದರು.</p>.<p>‘ಸ್ವಾತಂತ್ರ್ಯ ಹೋರಾಟಗಾರ ಟಿಪ್ಪು ಸುಲ್ತಾನ್ ಎಂಬುದನ್ನು ನಾವು ಪ್ರಾಥಮಿಕ ಶಾಲೆಯಿಂದ ಓದಿಕೊಂಡು ಬಂದಿದ್ದೇವೆ. ಅವರ ಹೆಸರಿನಲ್ಲಿಕಲಬುರ್ಗಿ, ವಿಜಯಪುರ, ಶ್ರೀರಂಗಪಟ್ಟಣ, ರಾಮನಗರ, ಧಾರವಾಡದಲ್ಲಿ ವಸತಿ ಶಾಲೆಗಳನ್ನು ತೆರೆಯಲಾಗಿದೆ. ಆಗಯಾರೂ ವಿರೋಧ ಮಾಡಿರಲಿಲ್ಲ. ಈಗ ಈ ವಿಚಾರವನ್ನು ಅನಗತ್ಯವಾಗಿ ಸೃಷ್ಟಿ ಮಾಡುವ ಅಗತ್ಯ ಸರ್ಕಾರಕ್ಕೆ ಇರಲಿಲ್ಲ. ಸರ್ಕಾರ ಪುನರ್ ಪರಿಶೀಲನೆ ನಡೆಸಬೇಕು. ಎಲ್ಲರಿಗೂ ಸಮಾಧಾನ ಆಗುವ ರೀತಿಯ ನಿರ್ಧಾರ ತೆಗೆದುಕೊಳ್ಳಬೇಕು’ ಎಂದು ಒತ್ತಾಯಿಸಿದರು.</p>.<p class="Subhead">ರಾಜ್ಯದಾದ್ಯಂತ ಹೋರಾಟ: ರಾಜ್ಯ ಸರ್ಕಾರದ ರೈತ ಮತ್ತು ಕಾರ್ಮಿಕ ವಿರೋಧಿ ಕಾಯ್ದೆಗಳ ವಿರುದ್ಧ ಹೋರಾಟ ನಡೆಸಲು ಇದೇ 4ರಂದು ಪೂರ್ವಭಾವಿ ಸಭೆ ಕರೆಯಲಾಗಿದೆ ಎಂದು ದೇವೇಗೌಡ ಹೇಳಿದರು.</p>.<p class="Briefhead"><strong>ಪಿಎಸ್ಐ ಆತ್ಮಹತ್ಯೆ: ತನಿಖೆಗೆ ಆಗ್ರಹ</strong></p>.<p>‘ಹಾಸನ ಜಿಲ್ಲೆಚನ್ನರಾಯಪಟ್ಟಣದ ಸಬ್ಇನ್ಸ್ಪೆಕ್ಟರ್ ಆತ್ಮಹತ್ಯೆ ಪ್ರಕರಣದ ಬಗ್ಗೆ ಸರಿಯಾದ ತನಿಖೆ ನಡೆಸಬೇಕು’ ಎಂದು ದೇವೇಗೌಡ ಆಗ್ರಹಿಸಿದರು.</p>.<p>‘ಆತ್ಮಹತ್ಯೆ ಮಾಡಿಕೊಳ್ಳುವ ಮಟ್ಟಕ್ಕೆ ಅವರಿಗೆ ಹಿಂಸೆ ನೀಡಲಾಗಿದೆ ಎಂಬ ಆರೋಪಗಳಿವೆ. ಗೃಹ ಸಚಿವರು ಯಾವುದೇ ಒತ್ತಡಕ್ಕೂ ಮಣಿಯದೆ ನಿಸ್ಪಕ್ಷಪಾತ ತನಿಖೆ ನಡೆಸಬೇಕು. ಇಲ್ಲದಿದ್ದರೆ ಸರ್ಕಾರದ ವಿರುದ್ಧ ಹೋರಾಟ ನಡೆಸಲಾಗುವುದು’ ಎಂದು ಎಚ್ಚರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಏಸುಕ್ರಿಸ್ತ ಮತ್ತು ಟಿಪ್ಪು ಸುಲ್ತಾನ್ ಅವರ ಜೀವನ ಚರಿತ್ರೆಯನ್ನು ಶಾಲಾ ಪಠ್ಯದಿಂದ ಕೈಬಿಟ್ಟಿರುವುದಕ್ಕೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಆಕ್ರೋಶ ವ್ಯಕ್ತಪಡಿಸಿದರು.</p>.<p>ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನೆರೆಹೊರೆಯವರನ್ನು ತನ್ನಂತೆ ಕಾಣಬೇಕು ಎಂದು ಬೋಧಿಸಿದ ಶಾಂತಿದೂತ ಏಸುಕ್ರಿಸ್ತ. ಇಂತಹ ಮಹಾತ್ಮರ ಜೀವನ ಚರಿತ್ರೆಯನ್ನು ಮಕ್ಕಳು ತಿಳಿದುಕೊಳ್ಳಲು ಅವಕಾಶ ಇಲ್ಲದಂತೆ ಮಾಡಿರುವುದು ಸರಿಯಲ್ಲ’ ಎಂದರು.</p>.<p>‘ಸ್ವಾತಂತ್ರ್ಯ ಹೋರಾಟಗಾರ ಟಿಪ್ಪು ಸುಲ್ತಾನ್ ಎಂಬುದನ್ನು ನಾವು ಪ್ರಾಥಮಿಕ ಶಾಲೆಯಿಂದ ಓದಿಕೊಂಡು ಬಂದಿದ್ದೇವೆ. ಅವರ ಹೆಸರಿನಲ್ಲಿಕಲಬುರ್ಗಿ, ವಿಜಯಪುರ, ಶ್ರೀರಂಗಪಟ್ಟಣ, ರಾಮನಗರ, ಧಾರವಾಡದಲ್ಲಿ ವಸತಿ ಶಾಲೆಗಳನ್ನು ತೆರೆಯಲಾಗಿದೆ. ಆಗಯಾರೂ ವಿರೋಧ ಮಾಡಿರಲಿಲ್ಲ. ಈಗ ಈ ವಿಚಾರವನ್ನು ಅನಗತ್ಯವಾಗಿ ಸೃಷ್ಟಿ ಮಾಡುವ ಅಗತ್ಯ ಸರ್ಕಾರಕ್ಕೆ ಇರಲಿಲ್ಲ. ಸರ್ಕಾರ ಪುನರ್ ಪರಿಶೀಲನೆ ನಡೆಸಬೇಕು. ಎಲ್ಲರಿಗೂ ಸಮಾಧಾನ ಆಗುವ ರೀತಿಯ ನಿರ್ಧಾರ ತೆಗೆದುಕೊಳ್ಳಬೇಕು’ ಎಂದು ಒತ್ತಾಯಿಸಿದರು.</p>.<p class="Subhead">ರಾಜ್ಯದಾದ್ಯಂತ ಹೋರಾಟ: ರಾಜ್ಯ ಸರ್ಕಾರದ ರೈತ ಮತ್ತು ಕಾರ್ಮಿಕ ವಿರೋಧಿ ಕಾಯ್ದೆಗಳ ವಿರುದ್ಧ ಹೋರಾಟ ನಡೆಸಲು ಇದೇ 4ರಂದು ಪೂರ್ವಭಾವಿ ಸಭೆ ಕರೆಯಲಾಗಿದೆ ಎಂದು ದೇವೇಗೌಡ ಹೇಳಿದರು.</p>.<p class="Briefhead"><strong>ಪಿಎಸ್ಐ ಆತ್ಮಹತ್ಯೆ: ತನಿಖೆಗೆ ಆಗ್ರಹ</strong></p>.<p>‘ಹಾಸನ ಜಿಲ್ಲೆಚನ್ನರಾಯಪಟ್ಟಣದ ಸಬ್ಇನ್ಸ್ಪೆಕ್ಟರ್ ಆತ್ಮಹತ್ಯೆ ಪ್ರಕರಣದ ಬಗ್ಗೆ ಸರಿಯಾದ ತನಿಖೆ ನಡೆಸಬೇಕು’ ಎಂದು ದೇವೇಗೌಡ ಆಗ್ರಹಿಸಿದರು.</p>.<p>‘ಆತ್ಮಹತ್ಯೆ ಮಾಡಿಕೊಳ್ಳುವ ಮಟ್ಟಕ್ಕೆ ಅವರಿಗೆ ಹಿಂಸೆ ನೀಡಲಾಗಿದೆ ಎಂಬ ಆರೋಪಗಳಿವೆ. ಗೃಹ ಸಚಿವರು ಯಾವುದೇ ಒತ್ತಡಕ್ಕೂ ಮಣಿಯದೆ ನಿಸ್ಪಕ್ಷಪಾತ ತನಿಖೆ ನಡೆಸಬೇಕು. ಇಲ್ಲದಿದ್ದರೆ ಸರ್ಕಾರದ ವಿರುದ್ಧ ಹೋರಾಟ ನಡೆಸಲಾಗುವುದು’ ಎಂದು ಎಚ್ಚರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>