ಬೆಂಗಳೂರು: ಆರೋಗ್ಯ ಸಮಸ್ಯೆಯ ಕಾರಣದಿಂದ ದೆಹಲಿಯಲ್ಲಿ ಆಯೋಜನೆಗೊಂಡಿರುವ ಜಿ20 ಶೃಂಗಸಭೆಯ ಔತಣಕೂಟದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಹೇಳಿದ್ದಾರೆ.
ಎಕ್ಸ್ ಖಾತೆಯಲ್ಲಿ ಮಾಹಿತಿ ನೀಡಿದ ಅವರು, ‘ಆರೋಗ್ಯ ಕಾರಣಗಳಿಂದಾಗಿ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮುಜಿ ಅವರು ಆಯೋಜಿಸಿರುವ ಜಿ 20 ಔತಣಕೂಟದಲ್ಲಿ ನಾನು ಭಾಗವಹಿಸಲಾಗುತ್ತಿಲ್ಲ. ಈ ಬಗ್ಗೆ ಈಗಾಗಲೇ ಸರ್ಕಾರಕ್ಕೆ ತಿಳಿಸಿದ್ದೇನೆ. ಜಿ 20 ಶೃಂಗಸಭೆಯು ಯಶಸ್ವಿಯಾಗಲಿ ಎಂದು ನಾನು ಬಯಸುತ್ತೇನೆ’ ಎಂದು ಬರೆದು ಪ್ರಧಾನಿ ಕಚೇರಿ ಮತ್ತು ರಾಷ್ಟ್ರಪತಿ ಭವನವನ್ನು ಟ್ಯಾಗ್ ಮಾಡಿದ್ದಾರೆ.