ಬುಧವಾರ, 9 ಜುಲೈ 2025
×
ADVERTISEMENT
ADVERTISEMENT

ವಿದ್ಯುತ್ ಕಳ್ಳತನ ಆರೋಪ– ದಂಡ ಕಟ್ಟುವೆ, ಯಾವುದೇ ಕ್ರಮಕ್ಕೆ ಸಿದ್ಧ: ಕುಮಾರಸ್ವಾಮಿ

Published : 14 ನವೆಂಬರ್ 2023, 9:40 IST
Last Updated : 14 ನವೆಂಬರ್ 2023, 9:40 IST
ಫಾಲೋ ಮಾಡಿ
Comments
ಈ ಅಚಾತುರ್ಯಕ್ಕೆ ನನ್ನ ವಿಷಾದವಿದೆ. ಬೆಸ್ಕಾಂ ಅಧಿಕಾರಿಗಳು ಬಂದು ಪರೀಕ್ಷೆ ಮಾಡಿ ನೋಟಿಸ್ ನೀಡಲಿ. ದಂಡ ಕಟ್ಟುತ್ತೇನೆ. ಇದನ್ನೇ ಕರ್ನಾಟಕ ಕಾಂಗ್ರೆಸ್‌ ದೊಡ್ಡದು ಮಾಡಿ ಪ್ರಚಾರ ಗಿಟ್ಟಿಸುವ ಕೆಲಸ ಮಾಡುತ್ತಿದೆ. ಆ ಪಕ್ಷದ ಕ್ಷುಲ್ಲಕ ಮನಃಸ್ಥಿತಿಯ ಬಗ್ಗೆ ನನಗೆ ಮರುಕ ಇದೆ.
– ಎಚ್‌.ಡಿ ಕುಮಾರಸ್ವಾಮಿ, ಜೆಡಿಎಸ್‌ ಶಾಸಕಾಂಕ ಪಕ್ಷದ ನಾಯಕ
ಇನ್ನೊಬ್ಬರ ರಕ್ತ ಕುಡಿದು ಧನದಾಹ ತೀರಿಸಿಕೊಂಡಿಲ್ಲ
ಎಕ್ಸ್‌ ‍ಪೋಸ್ಟ್‌ನಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರನ್ನು ಗುರಿ ಮಾಡಿರುವ ಎಚ್‌.ಡಿ ಕುಮಾರಸ್ವಾಮಿ, ನಾನೇನು ರಾಜ್ಯದ ಆಸ್ತಿ ಕಬಳಿಸಿಲ್ಲ. ಕಂಡವರ ಭೂಮಿಗೆ ಬೇಲಿ ಹಾಕಿಲ್ಲ. ಇನ್ನೊಬ್ಬರ ರಕ್ತ ಕುಡಿದು ಧನದಾಹ ತೀರಿಸಿಕೊಂಡಿಲ್ಲ ಎಂದು ಹೇಳಿದ್ದಾರೆ. ಕುಮಾರಸ್ವಾಮಿ ವಿದ್ಯುತ್ ಕಳ್ಳತನ ಮಾಡಿದ್ದಾರೆ. ಬೆಸ್ಕಾಂ ಕ್ರಮ ಕೈಗೊಳ್ಳಲಿ ಎಂದು ಉಪಮುಖ್ಯಮಂತ್ರಿಗಳು ಹೇಳಿದ್ದಾರೆ. ನಾನು ಮನೆಯಲ್ಲೇ ಇದ್ದೇನೆ. ಬೆಸ್ಕಾಂ ಅಧಿಕಾರಿಗಳು ಬರಲಿ. ಅವರ ಯಾವುದೇ ಕ್ರಮಕ್ಕೆ ನಾನು ಸಿದ್ಧನಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT