<p><strong>ಬೆಂಗಳೂರು</strong>: ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದುಪಡಿಸಿರುವ ಸಂದರ್ಭದಲ್ಲೇ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ಮುಂದಾಗಿರುವುದು ಮತಿಹೀನ ನಿರ್ಧಾರ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.</p>.<p>ಈ ಕುರಿತು ಶುಕ್ರವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ಇದು ರಾಜ್ಯ ಸರ್ಕಾರದ ಬುದ್ಧಿಭ್ರಮಣೆಯ ನಿರ್ಧಾರ. ಶಿಕ್ಷಣ ಸಚಿವರ ಐಲು–ಪೈಲು ನಿರ್ಧಾರದಿಂದ ರಾಜ್ಯದ ಜನರು ಹಾದಿ, ಬೀದಿಗಳಲ್ಲಿ ನಗುವಂತಾಗಿದೆ. ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಎರಡು ಪರೀಕ್ಷೆ ನಡೆಸುವ ಮೊಂಡುತನವನ್ನು ಸರ್ಕಾರ ಕೈಬಿಡಬೇಕು’ ಎಂದು ಆಗ್ರಹಿಸಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://cms.prajavani.net/karnataka-news/government-decided-to-not-to-conductt-puc-835881.html" itemprop="url">ಈ ವರ್ಷ ದ್ವಿತೀಯ ಪಿಯುಸಿ ಪರೀಕ್ಷೆ ಇಲ್ಲ: ಶಿಕ್ಷಣ ಸಚಿವ ಸುರೇಶ್ ಕುಮಾರ್ </a></p>.<p>‘ಶಿಕ್ಷಣ ಸಚಿವರು ಮಕ್ಕಳ ಜೀವದ ಜತೆ ಚೆಲ್ಲಾಟವಾಡುವ ರೀತಿಯಲ್ಲಿ ಕೈಗೊಂಡಿರುವ ಎಡಬಿಡಂಗಿತನದ ನಿರ್ಧಾರಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಡಿವಾಣ ಹಾಕಬೇಕು. ಪಿಯುಸಿ ಮಕ್ಕಳಿಗೆ ಪರೀಕ್ಷೆ ಇಲ್ಲದಿದ್ದರೆ ಅದೇ ನಿರ್ಧಾರ ಎಸ್ಸೆಸ್ಸೆಲ್ಸಿ ಮಕ್ಕಳಿಗೂ ಅನ್ವಯ ಆಗಬೇಕು’ ಎಂದು ಒತ್ತಾಯಿಸಿದ್ದಾರೆ.</p>.<p>ಪ್ರಧಾನಿಯ ’ಗುಮ್ಮ’ಕ್ಕೆ ಹೆದರಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಮಾಡಲಾಗಿದೆ. ಆದರೆ, ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಪರೀಕ್ಷೆ ನಡೆಸಲು ಶಿಕ್ಷಣ ಸಚಿವರು ಮುಂದಾಗಿದ್ದಾರೆ. ಇವರು ಪೋಷಕರು, ವಿದ್ಯಾರ್ಥಿಗಳ ತಾಳ್ಮೆ ಕೆಣಕುವ ಪರೀಕ್ಷಾ ಮಂತ್ರಿಯೇ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://cms.prajavani.net/karnataka-news/education-if-the-covid-cases-are-not-reduced-sslc-exam-will-also-cancel-chief-minister-bs-835977.html" itemprop="url">ಸೋಂಕು ಕಡಿಮೆಯಾಗದಿದ್ದರೆ ಎಸ್ಸೆಸ್ಸೆಲ್ಸಿ ಪರೀಕ್ಷೆಯೂ ರದ್ದು: ಬಿ.ಎಸ್.ಯಡಿಯೂರಪ್ಪ </a></p>.<p>‘ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ವಿಚಾರದಲ್ಲಿ ಶಿಕ್ಷಣ ಸಚಿವರು ಮೌನಿಯಾಗಿದ್ದಾರೆ. ಬಿಸಿಯೂಟ ಸಿಗದೆ ಕಂಗಾಲಾಗಿರುವ ಬಡ ಮಕ್ಕಳ ಬಗ್ಗೆಯೂ ಮಾತನಾಡುವುದಿಲ್ಲ’ ಎಂದು ಟೀಕಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದುಪಡಿಸಿರುವ ಸಂದರ್ಭದಲ್ಲೇ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ಮುಂದಾಗಿರುವುದು ಮತಿಹೀನ ನಿರ್ಧಾರ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.</p>.<p>ಈ ಕುರಿತು ಶುಕ್ರವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ಇದು ರಾಜ್ಯ ಸರ್ಕಾರದ ಬುದ್ಧಿಭ್ರಮಣೆಯ ನಿರ್ಧಾರ. ಶಿಕ್ಷಣ ಸಚಿವರ ಐಲು–ಪೈಲು ನಿರ್ಧಾರದಿಂದ ರಾಜ್ಯದ ಜನರು ಹಾದಿ, ಬೀದಿಗಳಲ್ಲಿ ನಗುವಂತಾಗಿದೆ. ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಎರಡು ಪರೀಕ್ಷೆ ನಡೆಸುವ ಮೊಂಡುತನವನ್ನು ಸರ್ಕಾರ ಕೈಬಿಡಬೇಕು’ ಎಂದು ಆಗ್ರಹಿಸಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://cms.prajavani.net/karnataka-news/government-decided-to-not-to-conductt-puc-835881.html" itemprop="url">ಈ ವರ್ಷ ದ್ವಿತೀಯ ಪಿಯುಸಿ ಪರೀಕ್ಷೆ ಇಲ್ಲ: ಶಿಕ್ಷಣ ಸಚಿವ ಸುರೇಶ್ ಕುಮಾರ್ </a></p>.<p>‘ಶಿಕ್ಷಣ ಸಚಿವರು ಮಕ್ಕಳ ಜೀವದ ಜತೆ ಚೆಲ್ಲಾಟವಾಡುವ ರೀತಿಯಲ್ಲಿ ಕೈಗೊಂಡಿರುವ ಎಡಬಿಡಂಗಿತನದ ನಿರ್ಧಾರಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಡಿವಾಣ ಹಾಕಬೇಕು. ಪಿಯುಸಿ ಮಕ್ಕಳಿಗೆ ಪರೀಕ್ಷೆ ಇಲ್ಲದಿದ್ದರೆ ಅದೇ ನಿರ್ಧಾರ ಎಸ್ಸೆಸ್ಸೆಲ್ಸಿ ಮಕ್ಕಳಿಗೂ ಅನ್ವಯ ಆಗಬೇಕು’ ಎಂದು ಒತ್ತಾಯಿಸಿದ್ದಾರೆ.</p>.<p>ಪ್ರಧಾನಿಯ ’ಗುಮ್ಮ’ಕ್ಕೆ ಹೆದರಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಮಾಡಲಾಗಿದೆ. ಆದರೆ, ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಪರೀಕ್ಷೆ ನಡೆಸಲು ಶಿಕ್ಷಣ ಸಚಿವರು ಮುಂದಾಗಿದ್ದಾರೆ. ಇವರು ಪೋಷಕರು, ವಿದ್ಯಾರ್ಥಿಗಳ ತಾಳ್ಮೆ ಕೆಣಕುವ ಪರೀಕ್ಷಾ ಮಂತ್ರಿಯೇ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://cms.prajavani.net/karnataka-news/education-if-the-covid-cases-are-not-reduced-sslc-exam-will-also-cancel-chief-minister-bs-835977.html" itemprop="url">ಸೋಂಕು ಕಡಿಮೆಯಾಗದಿದ್ದರೆ ಎಸ್ಸೆಸ್ಸೆಲ್ಸಿ ಪರೀಕ್ಷೆಯೂ ರದ್ದು: ಬಿ.ಎಸ್.ಯಡಿಯೂರಪ್ಪ </a></p>.<p>‘ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ವಿಚಾರದಲ್ಲಿ ಶಿಕ್ಷಣ ಸಚಿವರು ಮೌನಿಯಾಗಿದ್ದಾರೆ. ಬಿಸಿಯೂಟ ಸಿಗದೆ ಕಂಗಾಲಾಗಿರುವ ಬಡ ಮಕ್ಕಳ ಬಗ್ಗೆಯೂ ಮಾತನಾಡುವುದಿಲ್ಲ’ ಎಂದು ಟೀಕಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>