<p><strong>ಬೆಂಗಳೂರು</strong>: ಸರ್ಕಾರ ಸಿದ್ಧಪಡಿಸಿದ ಭಾಷಣವನ್ನು ಓದದೇ ತಾವೇ ಸಿದ್ಧಪಡಿಸಿದ ಭಾಷಣವನ್ನು ಓದಿ ಸದನದಿಂದ ಹೊರನಡೆದ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರ ನಡೆಯನ್ನು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಮರ್ಥಿಸಿಕೊಂಡಿದ್ದಾರೆ.</p><p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ತನ್ನ ವೈಫಲ್ಯಗಳನ್ನು ಜನರಿಂದ ಮರೆಮಾಚುವ ಉದ್ದೇಶದಿಂದ ರಾಜ್ಯ ಸರ್ಕಾರ ಜಂಟಿ ಅಧಿವೇಶನವನ್ನು ದುರುಪಯೋಗಪಡಿಸಿಕೊಂಡಿದೆ’ ಎಂದು ಆರೋಪಿಸಿದ್ದಾರೆ.</p><p>ಈ ಸರ್ಕಾರದ ಸಣ್ಣತನದ ನಡವಳಿಕೆಯಿಂದ ಇಂತಹ ಒಂದು ಪ್ರಕರಣ ಕರ್ನಾಟಕದಲ್ಲಿ ಮೊದಲ ಬಾರಿಗೆ ನಡೆದಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.</p><p>‘ಬೀದಿಯಲ್ಲಿ ಚರ್ಚೆ ಮಾಡುವಂತಹ ವಿಷಯಗಳನ್ನು ಈ ಸರ್ಕಾರ ಮತ್ತು ಅದರ ಮಂತ್ರಿಗಳು ರಾಜ್ಯಪಾಲರ ಮುಖಾಂತರ ವಿಧಾನಸಭೆಯಲ್ಲಿ ಹೇಳಿಸಬೇಕು ಎಂದು ಬಯಸಿದ್ದರು. ಹೀಗಾಗಿ ಇವತ್ತಿನ ಘಟನೆ ನಡೆದಿದೆ’ ಎಂದು ತಿಳಿಸಿದ್ದಾರೆ.</p><p>ಒಟ್ಟಾರೆ ಈ ಸರ್ಕಾರ ತನ್ನ ತಪ್ಪುಗಳನ್ನು ಮರೆಮಾಚಲು ಜಂಟಿ ಅಧಿವೇಶನ ದುರುಪಯೋಗಪಡಿಸಿಕೊಂಡಿದೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಸರ್ಕಾರ ಸಿದ್ಧಪಡಿಸಿದ ಭಾಷಣವನ್ನು ಓದದೇ ತಾವೇ ಸಿದ್ಧಪಡಿಸಿದ ಭಾಷಣವನ್ನು ಓದಿ ಸದನದಿಂದ ಹೊರನಡೆದ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರ ನಡೆಯನ್ನು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಮರ್ಥಿಸಿಕೊಂಡಿದ್ದಾರೆ.</p><p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ತನ್ನ ವೈಫಲ್ಯಗಳನ್ನು ಜನರಿಂದ ಮರೆಮಾಚುವ ಉದ್ದೇಶದಿಂದ ರಾಜ್ಯ ಸರ್ಕಾರ ಜಂಟಿ ಅಧಿವೇಶನವನ್ನು ದುರುಪಯೋಗಪಡಿಸಿಕೊಂಡಿದೆ’ ಎಂದು ಆರೋಪಿಸಿದ್ದಾರೆ.</p><p>ಈ ಸರ್ಕಾರದ ಸಣ್ಣತನದ ನಡವಳಿಕೆಯಿಂದ ಇಂತಹ ಒಂದು ಪ್ರಕರಣ ಕರ್ನಾಟಕದಲ್ಲಿ ಮೊದಲ ಬಾರಿಗೆ ನಡೆದಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.</p><p>‘ಬೀದಿಯಲ್ಲಿ ಚರ್ಚೆ ಮಾಡುವಂತಹ ವಿಷಯಗಳನ್ನು ಈ ಸರ್ಕಾರ ಮತ್ತು ಅದರ ಮಂತ್ರಿಗಳು ರಾಜ್ಯಪಾಲರ ಮುಖಾಂತರ ವಿಧಾನಸಭೆಯಲ್ಲಿ ಹೇಳಿಸಬೇಕು ಎಂದು ಬಯಸಿದ್ದರು. ಹೀಗಾಗಿ ಇವತ್ತಿನ ಘಟನೆ ನಡೆದಿದೆ’ ಎಂದು ತಿಳಿಸಿದ್ದಾರೆ.</p><p>ಒಟ್ಟಾರೆ ಈ ಸರ್ಕಾರ ತನ್ನ ತಪ್ಪುಗಳನ್ನು ಮರೆಮಾಚಲು ಜಂಟಿ ಅಧಿವೇಶನ ದುರುಪಯೋಗಪಡಿಸಿಕೊಂಡಿದೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>