ಮುಕ್ತ ಮಾರುಕಟ್ಟೆಯಲ್ಲಿ ₹ 2.30 ರೂಪಾಯಿಗೆ ಲಭ್ಯವಿದ್ದ ಸೋಲಾರ್ ವಿದ್ಯುತ್ತನ್ನು ₹ 9.50 ರೂಪಾಯಿ ಕೊಟ್ಟು ಖರೀದಿಸಲು ಒಪ್ಪಂದ ಮಾಡಿಕೊಳ್ಳಲಾಗಿತ್ತು. ಅಂದು ವಿಧಾನಸಭಾಧ್ಯಕ್ಷರಾಗಿದ್ದ ಕಾಗೋಡು ತಿಮ್ಮಪ್ಪ ಅವರು ಸದನ ಸಮಿತಿ ರಚಿಸಿದ್ದರು. ಇದುವರೆಗೂ ವರದಿ ಏನಾಯಿತು ಎಂಬ ಮಾಹಿತಿ ಇಲ್ಲ. ಈಗ ಕುರಿ ಕಾಯೋಕೆ ತೋಳ ತಂದ ಹಾಗಾಯ್ತು. ಸರ್ಕಾರಕ್ಕೆ ತಾಕತ್ತು ಇದ್ದರೆ ಒಪ್ಪಂದವನ್ನು ರದ್ದು ಮಾಡಲಿ ಎಂದು ಸವಾಲು ಹಾಕಿದರು.