<p><strong>ನವದೆಹಲಿ:</strong> ‘ದಲಿತ ನಾಯಕರನ್ನು ಮುಗಿಸಲು ಕುತಂತ್ರ ಮಾಡುತ್ತಿರುವ ಮಹಾನಾಯಕನೇ ಗೃಹ ಸಚಿವ ಜಿ. ಪರಮೇಶ್ವರ ಅವರನ್ನು ರಾಜಕೀಯವಾಗಿ ಮುಗಿಸಲು ಹೊರಟಿದ್ದಾನೆ’ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದರು.</p>.<p>ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ದಲಿತ, ಹಿಂದುಳಿದ ವರ್ಗದ ನಾಯಕರನ್ನು ಗುರಿಯಾಗಿಸಿಕೊಂಡು ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ ಎಂದು ಕಾಂಗ್ರೆಸ್ನ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ನೀಡಿರುವ ಹೇಳಿಕೆ ಗಮನಿಸಿದ್ದೇನೆ. ಸಚಿವ ಪರಮೇಶ್ವರ ಅವರು ಇಂಥ ಸಂಕಷ್ಟಕ್ಕೆ ಒಳಗಾಗಲು ಕಾಂಗ್ರೆಸ್ ಪಕ್ಷದ ಆ ಪ್ರಭಾವೀ ನಾಯಕನೇ ಕಾರಣ’ ಎಂದರು. </p>.<p>‘ಸಿ.ಡಿ ಹಾಗೂ ಪೆನ್ ಡ್ರೈವ್ ಫ್ಯಾಕ್ಟರಿ ಇಟ್ಟುಕೊಂಡಿರುವ ಪ್ರಭಾವಿ ನಾಯಕನ ಬಗ್ಗೆ ಸಚಿವ ಕೆ.ಎನ್.ರಾಜಣ್ಣ ಅವರು ವಿಧಾನಸಭೆಯಲ್ಲೇ ಹೇಳಿದ್ದರು. ಪರಮೇಶ್ವರ ಅವರು ದಲಿತ ನಾಯಕರ ಸಭೆ ಮಾಡಲು ಹೊರಟಿದ್ದು, ದೆಹಲಿ ನಾಯಕರನ್ನು ಭೇಟಿ ಮಾಡಿದ್ದೇ ಅವರ ವಿರುದ್ಧ ಕುತಂತ್ರ ನಡೆಯಲು ಕಾರಣ’ ಎಂದು ಅವರು ದೂರಿದರು.</p>.<p>‘ರಾಜ್ಯದಲ್ಲಿ ಏನೇನಾಗುತ್ತಿದೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ಮೇಲಾಗಿ ಕಾಂಗ್ರೆಸ್ ಪಕ್ಷದಲ್ಲಿ ಯಾರು ಯಾರಿಗೆ ಗುನ್ನ ಹೊಡೆಯುತ್ತಿದ್ದಾರೆ ಎನ್ನುವ ಮಾಹಿತಿಯೂ ಎಲ್ಲರಿಗೂ ತಿಳಿದಿದೆ. ದುಬೈನಿಂದ ಸಿಕ್ಕಿಬಿದ್ದಿರುವ ಆ ಮಹಿಳೆ ಚಿನ್ನ ತರುತ್ತಿದ್ದಾಳೆ ಎನ್ನುವ ಮಾಹಿತಿಯನ್ನು ಸೋರಿಕೆ ಮಾಡಿದ್ದೇ ಈ ಪ್ರಭಾವೀ ನಾಯಕ’ ಎಂದರು.</p>.<p>‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿಯೇ ಗುಪ್ತಚರ ವಿಭಾಗ ಇದೆಯಲ್ಲ. ಅವರಿಗೆ ಈ ವಿಷಯ ಗೊತ್ತಿಲ್ಲವೇ? ಪರಮೇಶ್ವರ ಅವರು ದಲಿತರ ಸಮಾವೇಶ ಮಾಡಲು ಹೊರಟರು. ತಾವು ಕೂಡ ಮುಖ್ಯಮಂತ್ರಿ ಪದವಿಯ ಆಕಾಂಕ್ಷಿ ಎಂದು ಹೇಳಿದರು. ತನ್ನ ದಾರಿಗೆ ಅಡ್ಡ ಬರುತ್ತಾರೆ ಎಂಬ ಕಾರಣಕ್ಕೆ ಪರಮೇಶ್ವರ ಅವರನ್ನು ಪ್ರಭಾವೀ ನಾಯಕ ಈ ಪ್ರಕರಣದಲ್ಲಿ ಸಿಲುಕಿಸುವ ಕುತಂತ್ರ ಹೂಡಿದರು. ಇಷ್ಟೆಲ್ಲಾ ಗಂಭೀರ ವಿಚಾರಗಳು ಸಿದ್ದರಾಮಯ್ಯ ಅವರಿಗೆ ಗೊತ್ತಿಲ್ಲವೆಂದರೆ ಹೇಗೆ’ ಎಂದು ಅವರು ಪ್ರಶ್ನಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ದಲಿತ ನಾಯಕರನ್ನು ಮುಗಿಸಲು ಕುತಂತ್ರ ಮಾಡುತ್ತಿರುವ ಮಹಾನಾಯಕನೇ ಗೃಹ ಸಚಿವ ಜಿ. ಪರಮೇಶ್ವರ ಅವರನ್ನು ರಾಜಕೀಯವಾಗಿ ಮುಗಿಸಲು ಹೊರಟಿದ್ದಾನೆ’ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದರು.</p>.<p>ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ದಲಿತ, ಹಿಂದುಳಿದ ವರ್ಗದ ನಾಯಕರನ್ನು ಗುರಿಯಾಗಿಸಿಕೊಂಡು ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ ಎಂದು ಕಾಂಗ್ರೆಸ್ನ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ನೀಡಿರುವ ಹೇಳಿಕೆ ಗಮನಿಸಿದ್ದೇನೆ. ಸಚಿವ ಪರಮೇಶ್ವರ ಅವರು ಇಂಥ ಸಂಕಷ್ಟಕ್ಕೆ ಒಳಗಾಗಲು ಕಾಂಗ್ರೆಸ್ ಪಕ್ಷದ ಆ ಪ್ರಭಾವೀ ನಾಯಕನೇ ಕಾರಣ’ ಎಂದರು. </p>.<p>‘ಸಿ.ಡಿ ಹಾಗೂ ಪೆನ್ ಡ್ರೈವ್ ಫ್ಯಾಕ್ಟರಿ ಇಟ್ಟುಕೊಂಡಿರುವ ಪ್ರಭಾವಿ ನಾಯಕನ ಬಗ್ಗೆ ಸಚಿವ ಕೆ.ಎನ್.ರಾಜಣ್ಣ ಅವರು ವಿಧಾನಸಭೆಯಲ್ಲೇ ಹೇಳಿದ್ದರು. ಪರಮೇಶ್ವರ ಅವರು ದಲಿತ ನಾಯಕರ ಸಭೆ ಮಾಡಲು ಹೊರಟಿದ್ದು, ದೆಹಲಿ ನಾಯಕರನ್ನು ಭೇಟಿ ಮಾಡಿದ್ದೇ ಅವರ ವಿರುದ್ಧ ಕುತಂತ್ರ ನಡೆಯಲು ಕಾರಣ’ ಎಂದು ಅವರು ದೂರಿದರು.</p>.<p>‘ರಾಜ್ಯದಲ್ಲಿ ಏನೇನಾಗುತ್ತಿದೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ಮೇಲಾಗಿ ಕಾಂಗ್ರೆಸ್ ಪಕ್ಷದಲ್ಲಿ ಯಾರು ಯಾರಿಗೆ ಗುನ್ನ ಹೊಡೆಯುತ್ತಿದ್ದಾರೆ ಎನ್ನುವ ಮಾಹಿತಿಯೂ ಎಲ್ಲರಿಗೂ ತಿಳಿದಿದೆ. ದುಬೈನಿಂದ ಸಿಕ್ಕಿಬಿದ್ದಿರುವ ಆ ಮಹಿಳೆ ಚಿನ್ನ ತರುತ್ತಿದ್ದಾಳೆ ಎನ್ನುವ ಮಾಹಿತಿಯನ್ನು ಸೋರಿಕೆ ಮಾಡಿದ್ದೇ ಈ ಪ್ರಭಾವೀ ನಾಯಕ’ ಎಂದರು.</p>.<p>‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿಯೇ ಗುಪ್ತಚರ ವಿಭಾಗ ಇದೆಯಲ್ಲ. ಅವರಿಗೆ ಈ ವಿಷಯ ಗೊತ್ತಿಲ್ಲವೇ? ಪರಮೇಶ್ವರ ಅವರು ದಲಿತರ ಸಮಾವೇಶ ಮಾಡಲು ಹೊರಟರು. ತಾವು ಕೂಡ ಮುಖ್ಯಮಂತ್ರಿ ಪದವಿಯ ಆಕಾಂಕ್ಷಿ ಎಂದು ಹೇಳಿದರು. ತನ್ನ ದಾರಿಗೆ ಅಡ್ಡ ಬರುತ್ತಾರೆ ಎಂಬ ಕಾರಣಕ್ಕೆ ಪರಮೇಶ್ವರ ಅವರನ್ನು ಪ್ರಭಾವೀ ನಾಯಕ ಈ ಪ್ರಕರಣದಲ್ಲಿ ಸಿಲುಕಿಸುವ ಕುತಂತ್ರ ಹೂಡಿದರು. ಇಷ್ಟೆಲ್ಲಾ ಗಂಭೀರ ವಿಚಾರಗಳು ಸಿದ್ದರಾಮಯ್ಯ ಅವರಿಗೆ ಗೊತ್ತಿಲ್ಲವೆಂದರೆ ಹೇಗೆ’ ಎಂದು ಅವರು ಪ್ರಶ್ನಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>