ಒಂದು ಸಣ್ಣ ಪ್ರಕರಣದ ಬಗ್ಗೆ ಯಾರೋ ಕೆಲವರು ಮಾತನಾಡುತ್ತಿದ್ದಾರೆ. ₹20 ಲಕ್ಷದ ಬಗ್ಗೆ ಚರ್ಚೆ ನಡೆಯುತ್ತಿದೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೆಪಿಎಸ್ಸಿ ಶುದ್ಧ ಮಾಡಲು ಹೊರಟರು. ಆದರೆ, ಶ್ಯಾಮ್ಭಟ್ ಅವರನ್ನು ತಂದು ಕೂರಿಸಿದ ಮೇಲೆ ಉದ್ಯೋಗ ಎಂಬುದು ಮುಕ್ತ ಮಾರುಕಟ್ಟೆಗೆ ತೆರೆದುಕೊಂಡಿತು. ಉಪವಿಭಾಗಾಧಿಕಾರಿ, ಡಿವೈಎಸ್ಪಿ ಹುದ್ದೆಗೆ ಇಷ್ಟು ಎಂಬಂತೆ ವ್ಯಾಪಾರ ನಡೆಯಿತು. ಈಗ ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಕಾಂಗ್ರೆಸ್ ನಾಯಕರಿಗೆ ಯಾವ ನೈತಿಕತೆ ಇದೆ. ಕಾಂಗ್ರೆಸ್ ಮಾಡಿದ್ದನ್ನೇ ಈಗ ಬಿಜೆಪಿ ಮುಂದುವರಿಸಿಕೊಂಡು ಹೋಗುತ್ತಿದೆ ಎಂದು ಟೀಕಿಸಿದರು.