<p><strong>ಮೈಸೂರು:</strong> ‘ಪರಿಶಿಷ್ಟರಿಗೆ ಮೀಸಲಾತಿ ಪ್ರಮಾಣ ಹೆಚ್ಚಿಸುವುದರಿಂದ ಆಡಳಿತಾರೂಢ ಬಿಜೆಪಿಗೆ ಮುಂಬರುವ ಚುನಾವಣೆಯಲ್ಲಿ ರಾಜಕೀಯವಾಗಿ ಯಾವುದೇ ಲಾಭವಾಗುವುದಿಲ್ಲ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಹೇಳಿದರು.</p>.<p>ಇಲ್ಲಿ ಪತ್ರಕರ್ತರೊಂದಿಗೆ ಶನಿವಾರ ಮಾತನಾಡಿದ ಅವರು, ‘ಮೀಸಲಾತಿ ಹೆಚ್ಚಿಸಿದ್ದರಿಂದ ತಮಗೆ ಮತ ಬರುತ್ತದೆ ಎಂದುಕೊಂಡಿದ್ದಾರೆ. ಯಾವುದೇ ಕಾರಣಕ್ಕೂ ಅದು ಮತವಾಗಿ ಪರಿವರ್ತನೆಯಾಗದು’ ಎಂದರು.</p>.<p>‘ನ್ಯಾ.ಎಚ್.ಎನ್.ನಾಗಮೋಹನದಾಸ್ ಎರಡು ವರ್ಷಗಳ ಹಿಂದೆಯೇ ವರದಿ ಕೊಟ್ಟಿದ್ದರು. ಚುನಾವಣೆ ಸಮೀಪಿಸುತ್ತಿರುವ ಈಗ ಜಾರಿಗೆ ಮುಂದಾಗಿದ್ದಾರೆ. ಅದರ ಅರ್ಥವೇನು ಎನ್ನುವುದು ಎಲ್ಲರಿಗೂ ಗೊತ್ತಿದೆ’ ಎಂದು ಪ್ರತಿಕ್ರಿಯಿಸಿದರು.</p>.<p>‘ರಾಜಕೀಯ ಮುಖಂಡರೇ ತಮ್ಮ ಅನುಕೂಲಕ್ಕಾಗಿ ಮೀಸಲಾತಿ ಹೋರಾಟವನ್ನು ಹುಟ್ಟು ಹಾಕಿದ್ದಾರೆ. ಪಂಚಮಸಾಲಿ ಲಿಂಗಾಯತ ಸಮಾಜ, ಕುರುಬ ಸಮಾಜದವರೂ ಬೇಡಿಕೆ ಮಂಡಿಸಿದ್ದಾರೆ. ಮೀಸಲಾತಿ ಹೆಚ್ಚಿಸುವ ಭರದಲ್ಲಿ ಸರ್ಕಾರವು ಜೇನುಗೂಡಿಗೆ ಕಲ್ಲು ಎಸೆಯುತ್ತಿದೆ. ಮುಂದೊಂದು ದಿನ ಅದೇ ಅವರಿಗೆ ತಿರುಗುಬಾಣವಾಗುತ್ತದೆ’ ಎಂದರು.</p>.<p><strong>ಇದನ್ನೂ ಓದಿ:</strong><a href="www.prajavani.net/karnataka-news/seminar-on-nadaprabhu-kempegowda-and-vokkaliga-community-978432.html" itemprop="url" target="_blank">ಒಕ್ಕಲಿಗರು ಕುರಿಗಳಲ್ಲ, ನಾಡನ್ನಾಳಿದ ಸಿಂಹಗಳು: ನಿರ್ಮಲಾನಂದನಾಥ ಸ್ವಾಮೀಜಿ </a></p>.<p>‘ರೈಲುಗಳ ಹೆಸರು ಬದಲಾವಣೆ ಮೂಲಕ ಭಾವನಾತ್ಮಕವಾಗಿ ಜನರನ್ನು ಸೆಳೆಯುವ ತಂತ್ರವನ್ನು ಬಿಜೆಪಿಯವರು ಮಾಡುತ್ತಿದ್ದಾರೆ. ಹೆಸರು ಬದಲಿಸಿದಾಕ್ಷಣ ಜನರ ಜೀವನದಲ್ಲಿ ಬದಲಾವಣೆ ಅಥವಾ ಸುಧಾರಣೆ ಆಗುವುದಿಲ್ಲ. ಆಯಾ ಕಾಲಕ್ಕೆ ಈ ರೀತಿಯ ಬದಲಾವಣೆಗಳು ನಡೆಯುತ್ತಲೇ ಇರುತ್ತವೆ. ಇದು ಕೂಡ ಮತ ಬ್ಯಾಂಕ್ ಕಾಪಾಡಿಕೊಳ್ಳುವ ಒಂದು ಭಾಗ’ ಎಂದು ವಿಶ್ಲೇಷಿಸಿದರು.</p>.<p>‘ಕೇಂದ್ರ ಸರ್ಕಾರ ನಡೆಸುವ ನೇಮಕಾತಿ ಪರೀಕ್ಷೆಗಳಲ್ಲಿ ಹಿಂದಿ, ಇಂಗ್ಲಿಷ್ಗೆ ಮಾತ್ರ ಅವಕಾಶ ಕೊಡುತ್ತಿರುವುದು ಖಂಡನೀಯ. ಇದು ಕನ್ನಡಿಗರಿಗೆ ಮಾತ್ರವಲ್ಲ; ಪ್ರಾದೇಶಿಕ ಭಾಷೆಗಳವರಿಗೆಲ್ಲರಿಗೂ ಮಾಡುವ ಅವಮಾನ. ವ್ಯವಸ್ಥಿತವಾಗಿ ಹಿಂದಿಯನ್ನು ಹೇರುವುದೂ ಆಗಿದೆ. ಇದು ಪ್ರಾದೇಶಿಕ ಭಾಷೆಗಳಿಗೆ ಅಪಾಯಕಾರಿಯಾದುದು’ ಎಂದರು.</p>.<p>‘ಕಾಂಗ್ರೆಸ್ನ ಭಾರತ್ ಜೋಡೊ ಯಾತ್ರೆ ಅಥವಾ ಬಿಜೆಪಿಯ ವಿಜಯಯಾತ್ರೆಯಿಂದಾಗಲಿ ಜೆಡಿಎಸ್ಗೆ ಯಾವುದೇ ವ್ಯತಿರಿಕ್ತ ಪರಿಣಾಮ ಉಂಟಾಗದು’ ಎಂದು ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಪರಿಶಿಷ್ಟರಿಗೆ ಮೀಸಲಾತಿ ಪ್ರಮಾಣ ಹೆಚ್ಚಿಸುವುದರಿಂದ ಆಡಳಿತಾರೂಢ ಬಿಜೆಪಿಗೆ ಮುಂಬರುವ ಚುನಾವಣೆಯಲ್ಲಿ ರಾಜಕೀಯವಾಗಿ ಯಾವುದೇ ಲಾಭವಾಗುವುದಿಲ್ಲ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಹೇಳಿದರು.</p>.<p>ಇಲ್ಲಿ ಪತ್ರಕರ್ತರೊಂದಿಗೆ ಶನಿವಾರ ಮಾತನಾಡಿದ ಅವರು, ‘ಮೀಸಲಾತಿ ಹೆಚ್ಚಿಸಿದ್ದರಿಂದ ತಮಗೆ ಮತ ಬರುತ್ತದೆ ಎಂದುಕೊಂಡಿದ್ದಾರೆ. ಯಾವುದೇ ಕಾರಣಕ್ಕೂ ಅದು ಮತವಾಗಿ ಪರಿವರ್ತನೆಯಾಗದು’ ಎಂದರು.</p>.<p>‘ನ್ಯಾ.ಎಚ್.ಎನ್.ನಾಗಮೋಹನದಾಸ್ ಎರಡು ವರ್ಷಗಳ ಹಿಂದೆಯೇ ವರದಿ ಕೊಟ್ಟಿದ್ದರು. ಚುನಾವಣೆ ಸಮೀಪಿಸುತ್ತಿರುವ ಈಗ ಜಾರಿಗೆ ಮುಂದಾಗಿದ್ದಾರೆ. ಅದರ ಅರ್ಥವೇನು ಎನ್ನುವುದು ಎಲ್ಲರಿಗೂ ಗೊತ್ತಿದೆ’ ಎಂದು ಪ್ರತಿಕ್ರಿಯಿಸಿದರು.</p>.<p>‘ರಾಜಕೀಯ ಮುಖಂಡರೇ ತಮ್ಮ ಅನುಕೂಲಕ್ಕಾಗಿ ಮೀಸಲಾತಿ ಹೋರಾಟವನ್ನು ಹುಟ್ಟು ಹಾಕಿದ್ದಾರೆ. ಪಂಚಮಸಾಲಿ ಲಿಂಗಾಯತ ಸಮಾಜ, ಕುರುಬ ಸಮಾಜದವರೂ ಬೇಡಿಕೆ ಮಂಡಿಸಿದ್ದಾರೆ. ಮೀಸಲಾತಿ ಹೆಚ್ಚಿಸುವ ಭರದಲ್ಲಿ ಸರ್ಕಾರವು ಜೇನುಗೂಡಿಗೆ ಕಲ್ಲು ಎಸೆಯುತ್ತಿದೆ. ಮುಂದೊಂದು ದಿನ ಅದೇ ಅವರಿಗೆ ತಿರುಗುಬಾಣವಾಗುತ್ತದೆ’ ಎಂದರು.</p>.<p><strong>ಇದನ್ನೂ ಓದಿ:</strong><a href="www.prajavani.net/karnataka-news/seminar-on-nadaprabhu-kempegowda-and-vokkaliga-community-978432.html" itemprop="url" target="_blank">ಒಕ್ಕಲಿಗರು ಕುರಿಗಳಲ್ಲ, ನಾಡನ್ನಾಳಿದ ಸಿಂಹಗಳು: ನಿರ್ಮಲಾನಂದನಾಥ ಸ್ವಾಮೀಜಿ </a></p>.<p>‘ರೈಲುಗಳ ಹೆಸರು ಬದಲಾವಣೆ ಮೂಲಕ ಭಾವನಾತ್ಮಕವಾಗಿ ಜನರನ್ನು ಸೆಳೆಯುವ ತಂತ್ರವನ್ನು ಬಿಜೆಪಿಯವರು ಮಾಡುತ್ತಿದ್ದಾರೆ. ಹೆಸರು ಬದಲಿಸಿದಾಕ್ಷಣ ಜನರ ಜೀವನದಲ್ಲಿ ಬದಲಾವಣೆ ಅಥವಾ ಸುಧಾರಣೆ ಆಗುವುದಿಲ್ಲ. ಆಯಾ ಕಾಲಕ್ಕೆ ಈ ರೀತಿಯ ಬದಲಾವಣೆಗಳು ನಡೆಯುತ್ತಲೇ ಇರುತ್ತವೆ. ಇದು ಕೂಡ ಮತ ಬ್ಯಾಂಕ್ ಕಾಪಾಡಿಕೊಳ್ಳುವ ಒಂದು ಭಾಗ’ ಎಂದು ವಿಶ್ಲೇಷಿಸಿದರು.</p>.<p>‘ಕೇಂದ್ರ ಸರ್ಕಾರ ನಡೆಸುವ ನೇಮಕಾತಿ ಪರೀಕ್ಷೆಗಳಲ್ಲಿ ಹಿಂದಿ, ಇಂಗ್ಲಿಷ್ಗೆ ಮಾತ್ರ ಅವಕಾಶ ಕೊಡುತ್ತಿರುವುದು ಖಂಡನೀಯ. ಇದು ಕನ್ನಡಿಗರಿಗೆ ಮಾತ್ರವಲ್ಲ; ಪ್ರಾದೇಶಿಕ ಭಾಷೆಗಳವರಿಗೆಲ್ಲರಿಗೂ ಮಾಡುವ ಅವಮಾನ. ವ್ಯವಸ್ಥಿತವಾಗಿ ಹಿಂದಿಯನ್ನು ಹೇರುವುದೂ ಆಗಿದೆ. ಇದು ಪ್ರಾದೇಶಿಕ ಭಾಷೆಗಳಿಗೆ ಅಪಾಯಕಾರಿಯಾದುದು’ ಎಂದರು.</p>.<p>‘ಕಾಂಗ್ರೆಸ್ನ ಭಾರತ್ ಜೋಡೊ ಯಾತ್ರೆ ಅಥವಾ ಬಿಜೆಪಿಯ ವಿಜಯಯಾತ್ರೆಯಿಂದಾಗಲಿ ಜೆಡಿಎಸ್ಗೆ ಯಾವುದೇ ವ್ಯತಿರಿಕ್ತ ಪರಿಣಾಮ ಉಂಟಾಗದು’ ಎಂದು ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>