<p><strong>ಬೆಂಗಳೂರು:</strong> 'ಮುಂಗಾರು ಮಳೆಗೆ ನಲುಗಿರುವ ರಾಜ್ಯದ ಜನತೆ ಮತ್ತು ಜಾನುವಾರುಗಳ ರಕ್ಷಣೆಗೆ ಸರ್ಕಾರ ಸಮರೋಪಾದಿಯಲ್ಲಿ ಸ್ಪಂದಿಸುವ ಪರಿಹಾರ ಕಾಮಗಾರಿಗಳನ್ನು ಅನುಷ್ಠಾನ ಮಾಡಬೇಕು' ಎಂದು ಜೆಡಿಎಸ್ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡುವ ಮೂಲಕಆಗ್ರಹಿಸಿದ್ದಾರೆ.</p>.<p>'ಈ ಬಾರಿಯೂ ರಾಜ್ಯವು ಅತಿವೃಷ್ಟಿಯ ಸಂಕಷ್ಟಕ್ಕೆ ಸಿಲುಕಿದೆ. ರೈತರು ಕಂಗಾಲಾಗಿದ್ದಾರೆ. ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ಮುಂಗಾರಿನ ಅಬ್ಬರ ಭೀತಿಯ ವಾತಾವರಣ ಸೃಷ್ಟಿಸಿದೆ. ಜಿಲ್ಲಾವಾರು ವಿಶೇಷ ಕಾರ್ಯಪಡೆ ರಚಿಸುವ ಮೂಲಕ ನೆರೆ ಪರಿಸ್ಥಿತಿಯನ್ನು ನಿಭಾಯಿಸಬೇಕಿದೆ' ಎಂದು ಅವರು ಸಲಹೆ ಮಾಡಿದ್ದಾರೆ.</p>.<p>'ಅತಿವೃಷ್ಟಿ ಸಂತ್ರಸ್ತರಿಗೆ ಕೂಡಲೇ ಆಸರೆ ಕೇಂದ್ರಗಳನ್ನು ಸ್ಥಾಪಿಸಬೇಕು. ಬೆಳೆ ಹಾನಿಗೊಳಗಾದ ರೈತರಿಗೆ ಹಾಗೂ ಮನೆ-ಮಠ ಕಳೆದುಕೊಂಡವರಿಗೆ, ಜೀವ ಹಾನಿಗೊಳಗಾದವರಿಗೆ ತಡಮಾಡದೆ ಸರ್ಕಾರ ಸಹಾಯಹಸ್ತ ಚಾಚಬೇಕು' ಎಂದು ಹೇಳಿದ್ದಾರೆ.</p>.<p>'ಸತತ ನೆರೆಯಿಂದ ಸಂತ್ರಸ್ತರಾಗಿರುವ ಕುಟುಂಬಗಳಿಗೆ ಹೆಚ್ಚಿನ ಪರಿಹಾರ ನೀಡಲು ಕೇಂದ್ರ ಸರ್ಕಾರವು ರಾಜ್ಯಕ್ಕೆ ವಿಶೇಷ ಅರ್ಥಿಕ ನೆರವು ನೀಡಬೇಕು. ರಾಜ್ಯ ಸರ್ಕಾರ ಕೂಡ ಈ ಸಂಬಂಧ ಕೇಂದ್ರದ ಮೇಲೆ ಒತ್ತಡ ತರಬೇಕು.ಅತಿವೃಷ್ಟಿ ಸಂತ್ರಸ್ತರ ಪರಿಹಾರ ಕಾಮಗಾರಿಗಳಿಗೆ ಹಣಕಾಸಿನ ಕೊರತೆಯಾಗದಂತೆ ಸಕಾಲಿಕ ಎಚ್ಚರಿಕೆಯನ್ನು ಸರ್ಕಾರ ತೆಗೆದುಕೊಳ್ಳದಿದ್ದರೆ ಪರಿಸ್ಥಿತಿ ಬಿಗಡಾಯಿಸುತ್ತದೆ. ಒಂದು ಕಡೆ ಕೊರೋನಾ ಸೋಂಕಿನ ಭೀತಿ ಈಗ ನೆರೆಪೀಡಿತ ಪರಿಸ್ಥಿತಿ ಸರ್ಕಾರಕ್ಕೊಂದು ಅಗ್ನಿಪರೀಕ್ಷೆ. ಎಚ್ಚರ ತಪ್ಪಿದರೆ ಜನರ ಬದುಕು ಮೂರಾಬಟ್ಟೆಯಾಗುತ್ತದೆ' ಎಂದು ಆತಂಕ ವ್ಯಕ್ತಪಡಿಸಿದ್ದಾರೆ.</p>.<p>'ಸಚಿವರು ಮತ್ತು ಅಧಿಕಾರಿಗಳು ಮಳೆ ಹಾನಿಗೊಳಗಾದ ಪ್ರದೇಶಗಳಿಗೆ ತೆರಳಿ ಅಲ್ಲಿಯೇ ಮೊಕ್ಕಾಂ ಮಾಡಿ ಪರಿಸ್ಥಿತಿಯ ಉಸ್ತುವಾರಿ ನೋಡಿಕೊಳ್ಳುವ ಮೂಲಕ ನೆರೆ ಸಂತ್ರಸ್ತರಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕಿದೆ' ಎಂದು ಕಿವಿಮಾತು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> 'ಮುಂಗಾರು ಮಳೆಗೆ ನಲುಗಿರುವ ರಾಜ್ಯದ ಜನತೆ ಮತ್ತು ಜಾನುವಾರುಗಳ ರಕ್ಷಣೆಗೆ ಸರ್ಕಾರ ಸಮರೋಪಾದಿಯಲ್ಲಿ ಸ್ಪಂದಿಸುವ ಪರಿಹಾರ ಕಾಮಗಾರಿಗಳನ್ನು ಅನುಷ್ಠಾನ ಮಾಡಬೇಕು' ಎಂದು ಜೆಡಿಎಸ್ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡುವ ಮೂಲಕಆಗ್ರಹಿಸಿದ್ದಾರೆ.</p>.<p>'ಈ ಬಾರಿಯೂ ರಾಜ್ಯವು ಅತಿವೃಷ್ಟಿಯ ಸಂಕಷ್ಟಕ್ಕೆ ಸಿಲುಕಿದೆ. ರೈತರು ಕಂಗಾಲಾಗಿದ್ದಾರೆ. ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ಮುಂಗಾರಿನ ಅಬ್ಬರ ಭೀತಿಯ ವಾತಾವರಣ ಸೃಷ್ಟಿಸಿದೆ. ಜಿಲ್ಲಾವಾರು ವಿಶೇಷ ಕಾರ್ಯಪಡೆ ರಚಿಸುವ ಮೂಲಕ ನೆರೆ ಪರಿಸ್ಥಿತಿಯನ್ನು ನಿಭಾಯಿಸಬೇಕಿದೆ' ಎಂದು ಅವರು ಸಲಹೆ ಮಾಡಿದ್ದಾರೆ.</p>.<p>'ಅತಿವೃಷ್ಟಿ ಸಂತ್ರಸ್ತರಿಗೆ ಕೂಡಲೇ ಆಸರೆ ಕೇಂದ್ರಗಳನ್ನು ಸ್ಥಾಪಿಸಬೇಕು. ಬೆಳೆ ಹಾನಿಗೊಳಗಾದ ರೈತರಿಗೆ ಹಾಗೂ ಮನೆ-ಮಠ ಕಳೆದುಕೊಂಡವರಿಗೆ, ಜೀವ ಹಾನಿಗೊಳಗಾದವರಿಗೆ ತಡಮಾಡದೆ ಸರ್ಕಾರ ಸಹಾಯಹಸ್ತ ಚಾಚಬೇಕು' ಎಂದು ಹೇಳಿದ್ದಾರೆ.</p>.<p>'ಸತತ ನೆರೆಯಿಂದ ಸಂತ್ರಸ್ತರಾಗಿರುವ ಕುಟುಂಬಗಳಿಗೆ ಹೆಚ್ಚಿನ ಪರಿಹಾರ ನೀಡಲು ಕೇಂದ್ರ ಸರ್ಕಾರವು ರಾಜ್ಯಕ್ಕೆ ವಿಶೇಷ ಅರ್ಥಿಕ ನೆರವು ನೀಡಬೇಕು. ರಾಜ್ಯ ಸರ್ಕಾರ ಕೂಡ ಈ ಸಂಬಂಧ ಕೇಂದ್ರದ ಮೇಲೆ ಒತ್ತಡ ತರಬೇಕು.ಅತಿವೃಷ್ಟಿ ಸಂತ್ರಸ್ತರ ಪರಿಹಾರ ಕಾಮಗಾರಿಗಳಿಗೆ ಹಣಕಾಸಿನ ಕೊರತೆಯಾಗದಂತೆ ಸಕಾಲಿಕ ಎಚ್ಚರಿಕೆಯನ್ನು ಸರ್ಕಾರ ತೆಗೆದುಕೊಳ್ಳದಿದ್ದರೆ ಪರಿಸ್ಥಿತಿ ಬಿಗಡಾಯಿಸುತ್ತದೆ. ಒಂದು ಕಡೆ ಕೊರೋನಾ ಸೋಂಕಿನ ಭೀತಿ ಈಗ ನೆರೆಪೀಡಿತ ಪರಿಸ್ಥಿತಿ ಸರ್ಕಾರಕ್ಕೊಂದು ಅಗ್ನಿಪರೀಕ್ಷೆ. ಎಚ್ಚರ ತಪ್ಪಿದರೆ ಜನರ ಬದುಕು ಮೂರಾಬಟ್ಟೆಯಾಗುತ್ತದೆ' ಎಂದು ಆತಂಕ ವ್ಯಕ್ತಪಡಿಸಿದ್ದಾರೆ.</p>.<p>'ಸಚಿವರು ಮತ್ತು ಅಧಿಕಾರಿಗಳು ಮಳೆ ಹಾನಿಗೊಳಗಾದ ಪ್ರದೇಶಗಳಿಗೆ ತೆರಳಿ ಅಲ್ಲಿಯೇ ಮೊಕ್ಕಾಂ ಮಾಡಿ ಪರಿಸ್ಥಿತಿಯ ಉಸ್ತುವಾರಿ ನೋಡಿಕೊಳ್ಳುವ ಮೂಲಕ ನೆರೆ ಸಂತ್ರಸ್ತರಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕಿದೆ' ಎಂದು ಕಿವಿಮಾತು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>