<p><strong>ಬೆಂಗಳೂರು:</strong> ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತೆಯನ್ನು ಅಪಹರಿಸಿದ ಆರೋಪ ಪ್ರಕರಣದಲ್ಲಿ; ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ವಿರುದ್ಧದ ದೋಷಾರೋಪ ನಿಗದಿ ಪ್ರಕ್ರಿಯೆ ಮುಂದೂಡುವಂತೆ ವಿಚಾರಣಾ ನ್ಯಾಯಾಲಯಕ್ಕೆ ನಿರ್ದೇಶಿಸಿದ್ದ ಮಧ್ಯಂತರ ಆದೇಶವನ್ನು ಹೈಕೋರ್ಟ್ ತೆರವುಗೊಳಿಸಿದೆ.</p><p>‘ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ವಿರುದ್ಧ ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಲಾಗಿರುವ ದೋಷಾರೋಪ ಪಟ್ಟಿ ವಜಾಗೊಳಿಸಬೇಕು’ ಎಂದು ಕೋರಿ ಎಚ್.ಡಿ.ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.</p><p>ವಿಚಾರಣೆ ವೇಳೆ ರೇವಣ್ಣ ಪರ ವಕೀಲರು, ‘ಅರ್ಜಿದಾರರು ವಿಚಾರಣಾ ನ್ಯಾಯಾಲಯದಲ್ಲಿ ಹಾಜರಾಗಬೇಕಿರುವ ಕಾರಣ ಈ ಅರ್ಜಿಯ ವಿಚಾರಣೆ ಮುಂದೂಡಬೇಕು’ ಎಂದು ಕೋರಿ ಸಲ್ಲಿಸಿದ್ದ ಮೆಮೊ ಪರಿಶೀಲಿಸಿದ ನ್ಯಾಯಪೀಠ ತೀವ್ರ ಅಸಮಾಧಾನ ವ್ಯಕ್ತಪಡಿಸಿತು.</p><p>‘ಈ ಹಿಂದಿನ ವಿಚಾರಣೆಯಲ್ಲೂ ಅರ್ಜಿದಾರರ ಪರ ವಕೀಲರು ವಾದ ಮಂಡಿಸಲು ಸಿದ್ಧರಿರಲಿಲ್ಲ. ನಿರ್ದಿಷ್ಟ ದಿನದಂದು ವಾದ ಮಂಡಿಸಲು ಸಿದ್ಧವಾಗಿರುವಂತೆ ಸೂಚಿಸಿದ್ದರೂ ತಯಾರಾಗಿಲ್ಲ. ಈ ವಿಚಾರವನ್ನು ಅವರಿಗೆ ಕಳೆದ ತಿಂಗಳೇ ಸ್ಪಷ್ಟಪಡಿಸಲಾಗಿದೆ. ಈಗ ಪುನಃ ವಿಚಾರಣೆ ಮುಂದೂಡುವಂತೆ ಕೋರಿದ್ದಾರೆ. ಇದೊಂದು ಅಸಮರ್ಥನೀಯ ಮನವಿ. ಹೀಗಾಗಿ, ಚಾಲ್ತಿಯಲ್ಲಿರುವ ಮಧ್ಯಂತರ ಆದೇಶವನ್ನು ತೆರವುಗೊಳಿಸಲಾಗಿದೆ’ ಎಂದು ಆದೇಶಿಸಿ ವಿಚಾರಣೆಯನ್ನು ಇದೇ 26ಕ್ಕೆ ಮುಂದೂಡಿತು.</p><p>ರೇವಣ್ಣ ವಿರುದ್ಧ, ಭಾರತೀಯ ದಂಡ ಸಂಹಿತೆ–1860ರ ಕಲಂ 365, 368, 504, 506, 201, 109, 120ಬಿ ಜೊತೆಗೆ 34ರ ಅಡಿ 2024ರ ಮೇ 2ರಂದು ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತೆಯನ್ನು ಅಪಹರಿಸಿದ ಆರೋಪ ಪ್ರಕರಣದಲ್ಲಿ; ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ವಿರುದ್ಧದ ದೋಷಾರೋಪ ನಿಗದಿ ಪ್ರಕ್ರಿಯೆ ಮುಂದೂಡುವಂತೆ ವಿಚಾರಣಾ ನ್ಯಾಯಾಲಯಕ್ಕೆ ನಿರ್ದೇಶಿಸಿದ್ದ ಮಧ್ಯಂತರ ಆದೇಶವನ್ನು ಹೈಕೋರ್ಟ್ ತೆರವುಗೊಳಿಸಿದೆ.</p><p>‘ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ವಿರುದ್ಧ ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಲಾಗಿರುವ ದೋಷಾರೋಪ ಪಟ್ಟಿ ವಜಾಗೊಳಿಸಬೇಕು’ ಎಂದು ಕೋರಿ ಎಚ್.ಡಿ.ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.</p><p>ವಿಚಾರಣೆ ವೇಳೆ ರೇವಣ್ಣ ಪರ ವಕೀಲರು, ‘ಅರ್ಜಿದಾರರು ವಿಚಾರಣಾ ನ್ಯಾಯಾಲಯದಲ್ಲಿ ಹಾಜರಾಗಬೇಕಿರುವ ಕಾರಣ ಈ ಅರ್ಜಿಯ ವಿಚಾರಣೆ ಮುಂದೂಡಬೇಕು’ ಎಂದು ಕೋರಿ ಸಲ್ಲಿಸಿದ್ದ ಮೆಮೊ ಪರಿಶೀಲಿಸಿದ ನ್ಯಾಯಪೀಠ ತೀವ್ರ ಅಸಮಾಧಾನ ವ್ಯಕ್ತಪಡಿಸಿತು.</p><p>‘ಈ ಹಿಂದಿನ ವಿಚಾರಣೆಯಲ್ಲೂ ಅರ್ಜಿದಾರರ ಪರ ವಕೀಲರು ವಾದ ಮಂಡಿಸಲು ಸಿದ್ಧರಿರಲಿಲ್ಲ. ನಿರ್ದಿಷ್ಟ ದಿನದಂದು ವಾದ ಮಂಡಿಸಲು ಸಿದ್ಧವಾಗಿರುವಂತೆ ಸೂಚಿಸಿದ್ದರೂ ತಯಾರಾಗಿಲ್ಲ. ಈ ವಿಚಾರವನ್ನು ಅವರಿಗೆ ಕಳೆದ ತಿಂಗಳೇ ಸ್ಪಷ್ಟಪಡಿಸಲಾಗಿದೆ. ಈಗ ಪುನಃ ವಿಚಾರಣೆ ಮುಂದೂಡುವಂತೆ ಕೋರಿದ್ದಾರೆ. ಇದೊಂದು ಅಸಮರ್ಥನೀಯ ಮನವಿ. ಹೀಗಾಗಿ, ಚಾಲ್ತಿಯಲ್ಲಿರುವ ಮಧ್ಯಂತರ ಆದೇಶವನ್ನು ತೆರವುಗೊಳಿಸಲಾಗಿದೆ’ ಎಂದು ಆದೇಶಿಸಿ ವಿಚಾರಣೆಯನ್ನು ಇದೇ 26ಕ್ಕೆ ಮುಂದೂಡಿತು.</p><p>ರೇವಣ್ಣ ವಿರುದ್ಧ, ಭಾರತೀಯ ದಂಡ ಸಂಹಿತೆ–1860ರ ಕಲಂ 365, 368, 504, 506, 201, 109, 120ಬಿ ಜೊತೆಗೆ 34ರ ಅಡಿ 2024ರ ಮೇ 2ರಂದು ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>